Thu,May16,2024
ಕನ್ನಡ / English

ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಕರಾಮುವಿ ಸಹಾಯಕ ಕುಲಸಚಿವರು! | ಜನತಾ ನ್ಯೂಸ್

10 Jun 2021
1241

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸಹಾಯಕ ಕುಲಸಚಿವರು ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೈಸೂರಿನ ಚಾಮುಂಡಿಪುರಂ ನಿವಾಸಿ ಮಂಜುಪ್ರಸಾದ್ (55) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದವರು.

ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವ ಮಂಜು ಪ್ರಸಾದ್ ಅದಕ್ಕಾಗಿ ನಿವೇಶನವೊಂದನ್ನು ಖರೀದಿ ಮಾಡಿದ್ದರು. ಮೈಸೂರಿನ ರಿಯಾಜ್ ಮತ್ತು ಜಾವಿದ್ ಎಂಬುವರಿಂದ ಜಯಲಕ್ಷ್ಮಿಪುರಂನ ನಿವೇಶನವೊಂದನ್ನು ಖರೀದಿ ಮಾಡಿದ್ದರು. ಎಲ್ಲವೂ ಸರಿಯಾಗಿಯೇ ಇತ್ತು ಆದರೆ ಕೊರೊನಾ ಸಂಕಷ್ಟ ಕಾಲದಲ್ಲಿ ಮನೆ ಕಟ್ಟಲು ಸಾಧ್ಯವಾಗಲಿಲ್ಲ.

ಆದ್ದರಿಂದ ಆ ನಿವೇಶನವನ್ನು ಮಾರಾಟ ಮಾಡಲು ಮಂಜುಪ್ರಸಾದ್ ನಿರ್ಧರಿಸಿದ್ದರು. ಈ ವೇಳೆ ಒಬ್ಬರು ನಿವೇಶನ ಖರೀದಿ ಮಾಡಲು ಬಂದಿದ್ದರು. ಇವರ ಬಳಿ ಇದ್ದ ನಿವೇಶನದ ದಾಖಲೆ ಪಡೆದಕೊಂಡು ಪರಿಶೀಲಿಸಿದಾಗ ಅವು ನಕಲಿ ದಾಖಲೆ ಅನ್ನೋದು ಗೊತ್ತಾಗಿದೆ. ಕಷ್ಟಪಟ್ಟು ದುಡಿದ ಹಣ ಮೋಸಗಾರರ ಪಾಲಾಯ್ತಲ್ಲ ಅಂತಾ ಮನನೊಂದು ತಮ್ಮ‌ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಡೆತ್​​ನೋಟ್​​​ನಲ್ಲಿ ಏನಿದೆ:
ರಿಯಾಜ್ ಮತ್ತು ಜಾವಿದ್ ಎಂಬುವರಿಂದ ನಾನು ಜಯಲಕ್ಷ್ಮೀಪುರಂನಲ್ಲಿ ನಿವೇಶನ ಖರೀದಿಸಿದ್ದೆ. ಬಳಿಕ ನಿವೇಶನವನ್ನು ಬೇರೆಯವರಿಗೆ ಮಾರಾಟ ಮಾಡಿದಾಗ, ಅವರಿಬ್ಬರು ನನಗೆ ನೀಡಿರುವ ದಾಖಲೆಗಳು ಸುಳ್ಳು ಎಂದು ತಿಳಿದು ಬಂದಿದೆ. ಅಲ್ಲದೇ, ಈ ಸಂಬಂಧ ದೂರು ಕೂಡ ದಾಖಲಾಗಿದೆ ಎಂದು ಡೆತ್​ನೋಟ್​ನಲ್ಲಿ ಬರೆದಿಟ್ಟಿದ್ದಾರೆ ಎನ್ನಲಾಗಿದೆ.

ಈ ಸಂಬಂಧ ನಗರದ ಕೆ.ಆರ್. ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

RELATED TOPICS:
English summary :Mysuru

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

ನ್ಯೂಸ್ MORE NEWS...