ಆಂಬುಲೆನ್ಸ್-ಸ್ಕೂಟಿ ನಡುವೆ ಭೀಕರ ಅಪಘಾತ, ಮೂವರು ಸ್ಥಳದಲ್ಲೇ ಸಾವು | ಜನತಾ ನ್ಯೂಸ್
ಚಿತ್ರದುರ್ಗ : ಆಂಬುಲೆನ್ಸ್ ಮತ್ತು ಸ್ಕೂಟಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಮೃತಪಟ್ಟ ಘಟನೆ ಚಿತ್ರದುರ್ಗ ಹೊರವಲಯದ ಈರಜ್ಜನಹಟ್ಟಿ ಬಳಿ ಸೋಮವಾರ ರಾತ್ರಿ ಸಂಭವಿಸಿದೆ.
ಅಪಘಾತದಲ್ಲಿ ಮೃತಪಟ್ಟವರನ್ನು ಚಿತ್ರದುರ್ಗ ಜಿಲ್ಲೆಯ ಸಜ್ಜನಕೆರೆ ಗ್ರಾಮದ ಕಾಂತರಾಜ (22 ವ), ಚಿತ್ರದುರ್ಗ ಕರುವಿನಕಟ್ಟೆ ಬಳಿಯ ಶ್ರೀಕಾಂತ (20 ವ), ನಂಜುಂಡ (20 ವ) ಎಂದು ಗುರುತಿಸಲಾಗಿದೆ. ಹೊಳಲ್ಕೆರೆಯಲ್ಲಿ ಪೇಂಟಿಂಗ್ ಕೆಲಸ ಮುಗಿಸಿಕೊಂಡು ವಾಪಾಸು ಬರುತ್ತಿದ್ದಾಗ ಅಂಬ್ಯುಲೆನ್ಸ್ ಢಿಕ್ಕಿಯಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ದ್ವಿಚಕ್ರ ವಾಹನದಲ್ಲಿ ಮೂವರು ಯುವಕರು ಹೊಳಲ್ಕೆರೆ ಕಡೆಯಿಂದ ಚಿತ್ರದುರ್ಗದತ್ತ ಬರುತ್ತಿದ್ದರು. ಚಿತ್ರದುರ್ಗದಿಂದ ಹೊಳಲ್ಕೆರೆ ಕಡೆಗೆ ಆಯಂಬುಲೆನ್ಸ್ ಸಾಗುತ್ತಿತ್ತು. ತಿರುಮಲ ಡಾಬಾ ಸಮೀಪ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಅಪಘಾತದ ರಭಸಕ್ಕೆ ದ್ವಿಚಕ್ರ ವಾಹನ ದೂರ ಬಿದ್ದಿದೆ. ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತ ರಭಸಕ್ಕೆ ಸ್ಕೂಟಿ ನಜ್ಜುಗುಜ್ಜಾಗಿದ್ದು, ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.