Sun,May19,2024
ಕನ್ನಡ / English

ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಕಿಕ್ ಬ್ಯಾಕ್: ಎಸಿಬಿ ತನಿಖೆಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂಸ್

19 Jun 2021
2051

ಬೆಂಗಳೂರು : ಭದ್ರಾ ಮೇಲ್ದಂಡೆ ಕಾಮಗಾರಿಯ ₹ 20 ಸಾವಿರ ಕೋಟಿ ಟೆಂಡರ್‌ನಲ್ಲಿ ಶೇ 10ರಷ್ಟು ಕಿಕ್ ಬ್ಯಾಕ್ ಪಡೆದಿದ್ದಾರೆ ಎಂಬ ವಿಧಾನಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರ ಆರೋಪವನ್ನು ಭ್ರಷ್ಟಾಚಾರ ನಿರೋಧ ದಳ (ಎಸಿಬಿ)ದ ತನಿಖೆಗೆ ಒಪ್ಪಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

"ಎರಡು ಕಾರಣಗಳಿಗಾಗಿ ಈ ಆರೋಪ ಗಂಭೀರ ಸ್ವರೂಪದ್ದಾಗಿದೆ. ಮೊದಲನೆಯದಾಗಿ ಆರೋಪ ನೇರವಾಗಿ ಸಿಎಂ ಬಿಎಸ್‌.ಯಡಿಯೂರಪ್ಪ ಅವರ ಮಗನ ಮೇಲಿದೆ. ಎರಡನೆಯದಾಗಿ ಆಡಳಿತ ಪಕ್ಷದ ಶಾಸಕರೇ ಆರೋಪ ಮಾಡಿದ್ದಾರೆ. ತರಾತುರಿಯಲ್ಲಿ ನೀರಾವರಿ ಇಲಾಖೆ ಸ್ಪಷ್ಟನೆ ನೀಡಿದ್ದನ್ನು ನೋಡಿದರೆ ಹಗರಣವನ್ನು ಮುಚ್ಚಿಹಾಕುವ ಪ್ರಯತ್ನ ಸ್ಪಷ್ಟವಾಗಿದೆ" ಎಂದು ತಿಳಿಸಿದ್ದಾರೆ.

"ನಗರದ ಬಿಐಇಸಿಯಲ್ಲಿ ನಿರ್ಮಿಸಲಾಗಿದ್ದ ಕೋವಿಡ್ ಕೇರ್ ಸೆಂಟರ್ ನ ಹಾಸಿಗೆ ಮತ್ತು ಬೆಡ್ ಗಳ ಖರೀದಿ-ಮಾರಾಟದಲ್ಲಿ ಶಾಸಕ ಎಸ್.ಆರ್.ವಿಶ್ವನಾಥ್ ಭ್ರಷ್ಟಾಚಾರ ಎಸಗಿದ್ದಾರೆ ಮತ್ತು ಭೂಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಎಚ್.ವಿಶ್ವನಾಥ್ ಅವರ ಇನ್ನೊಂದು ಆರೋಪದ ಬಗ್ಗೆಯೂ ತನಿಖೆ ನಡೆಯಬೇಕು" ಎಂದು ಒತ್ತಾಯಿಸಿದ್ದಾರೆ.

"ಈಗಿನ ಬಿಜೆಪಿ ಸರ್ಕಾರದ ರೂವಾರಿಯೇ ತಾನೆಂದು ಹೇಳಿಕೊಳ್ಳುತ್ತಿರುವ ಶಾಸಕ ಎಚ್.ವಿಶ್ವನಾಥ್ ಅವರೇ ಈ ಸರ್ಕಾರವನ್ನು ಗುತ್ತಿಗೆದಾರರ ಸರ್ಕಾರ ಎಂದು ಬಣ್ಣಿಸಿರುವುದು ನೋಡಿದರೆ ಅವರ ಬಳಿ ಬೇರೆ ಸಚಿವರ ಭ್ರಷ್ಟಾಚಾರದ ಮಾಹಿತಿಯೂ ಇದ್ದ ಹಾಗಿದೆ. ಎಸಿಬಿ ಅವರನ್ನೂ ಕರೆದು ವಿಚಾರಣೆಗೆ ಒಳಪಡಿಸಿದರೆ ಸತ್ಯ ಬಯಲಿಗೆ ಬರಬಹುದು" ಎಂದಿದ್ದಾರೆ.

ಮುಖ್ಯಮಂತ್ರಿಗಳು ಮತ್ತು ಅವರ ಮಗನ ವಿರುದ್ಧದ ಆರೋಪ ಇದೇ ಮೊದಲಬಾರಿ ಕೇಳಿಬಂದದ್ದಲ್ಲ, ಇನ್ನೊಬ್ಬ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಕಳೆದ ಒಂದು ವರ್ಷದಿಂದ ವಿಜಯೇಂದ್ರ ವಿರುದ್ದ ಆರೋಪಗಳ ಸುರಿಮಳೆಗೈಯ್ಯುತ್ತಾ ಬಂದಿದ್ದಾರೆ. ಇತ್ತೀಚೆಗೆ ಇನ್ನೊಬ್ಬ ಶಾಸಕ ಸಿ.ಪಿ.ಯೋಗೀಶ್ವರ್ ಅವರೂ ಇದಕ್ಕೆ ದನಿಗೂಡಿಸಿದ್ದಾರೆ. ಈ ಎಲ್ಲ ಆರೋಪಗಳ ಬಗ್ಗೆ ಸಮಗ್ರ ಸ್ವರೂಪದ ತನಿಖೆ ನಡೆಯಬೇಕು.

ಬಹಿರಂಗವಾಗಿ ಭ್ರಷ್ಟಾಚಾರದ ಆರೋಪ ಮಾಡುತ್ತಿರುವ ಶಾಸಕರ ವಿರುದ್ದ ಯಾವುದೇ ಶಿಸ್ತು ಕ್ರಮ ಕೈಗೊಳ್ಳದೆ ಅವರಿಗೆ ಇನ್ನಷ್ಟು ಅವಕಾಶ ನೀಡುತ್ತಿರುವುದನ್ನು ನೋಡಿದರೆ ಒಂದೊ ಬಿಜೆಪಿಯ ಹೈಕಮಾಂಡ್ ಈ ಆರೋಪಗಳನ್ನು ಒಪ್ಪಿಕೊಂಡಿದೆ. ಇಲ್ಲವೇ ಭ್ರಷ್ಟಾಚಾರದ ಹೇಸಿಗೆಯಲ್ಲಿ ಅದೂ ಕೂಡಾ ಪಾಲು ಪಡೆದಿದೆ ಎಂದೇ ಅರ್ಥಮಾಡಿಕೊಳ್ಳಬೇಕಾಗುತ್ತದೆ.

ಪ್ರಧಾನಿ ನರೇಂದ್ರಮೋದಿಯ ಪೌರುಷವೇನಿದ್ದರೂ ಪಾಕಿಸ್ತಾನದ ವಿರುದ್ದ ಅಷ್ಟೆ. ಉಳಿದಂತೆ ಚೀನಾದ ದೊರೆಗಳಿರಲಿ, ಕರ್ನಾಟಕದ ಸ್ವಪಕ್ಷೀಯ ಮರಿಗಳಿರಲಿ, ಮೋದಿಯವರು ಪೌರುಷವಿಲ್ಲದ ಉತ್ತರಕುಮಾರ ಎಂದೂ ವ್ಯಂಗ್ಯವಾಡಿದ್ದಾರೆ.

RELATED TOPICS:
English summary :Siddaramaiah

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...