Tue,May14,2024
ಕನ್ನಡ / English

ಶಿವಮೊಗ್ಗ ಏರ್ ಪೋರ್ಟ್ ನೀಲ ನಕ್ಷೆ ವಿವಾದ: ಕಮಲ ಲಕ್ಷ್ಮೀ ಸಂಕೇತ, ಟೀಕಿಸುವುದು ಬಿಟ್ಟು ಸಹಕರಿಸಿ: ಈಶ್ವರಪ್ಪ | ಜನತಾ ನ್ಯೂಸ್

24 Jun 2021
1413

ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ದಾಣದ ಟರ್ಮಿನಲ್ ನೀಲ ನಕ್ಷೆ ಕಮಲದ ಮಾದರಿ ಇದೆ ಎಂದು ಕಾಂಗ್ರೆಸ್​ನವರು ಆರೋಪ ಮಾಡಿದ್ದರು. ಈ ಸಂಬಂಧ ಸಚಿವ ಕೆ.ಎಸ್​. ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

ಕಮಲ ಎನ್ನುವುದು ಮಹಾಲಕ್ಷ್ಮಿಯ ಸಂಕೇತ. ಅದು ಕೇವಲ ಬಿಜೆಪಿ ಪಕ್ಷದ ಸ್ವತ್ತಲ್ಲ. ಟೀಕೆ ಮಾಡಲೆಂದೇ ಕಾಂಗ್ರೆಸ್ ಪಕ್ಷ ಇದೆ ಎನ್ನುವಂತಾಗಿದೆ ಎಂದಿದ್ದಾರೆ.

ಅನೇಕ ವಿಚಾರಗಳಲ್ಲಿ ಸರ್ಕಾರ ಹಲವು ಯೋಚನೆಗಳನ್ನು ಮಾಡುತ್ತದೆ. ಹಲವು ರಾಜ್ಯಗಳಲ್ಲಿ ಅನೇಕ ಕಡೆ ಮಹಾಪುರುಷರ ಹೆಸರುಗಳನ್ನು ಇಡಲಾಗಿದೆ. ಇಂದಿರಾ ಗಾಂಧಿ, ವಲ್ಲಭಭಾಯಿ ಪಟೇಲ್, ಮಹಾತ್ಮ ಗಾಂಧಿ ಹೆಸರನ್ನು ಇಟ್ಟಿದ್ದಾರೆ. ಆ ಸಂದರ್ಭದಲ್ಲೂ ಸಹ ಹಲವರು ವಿರೋಧ ಮಾಡಿದ್ದರು ಎಂದರು.

ಯಡಿಯೂರಪ್ಪ ಅವರು ಸಿಎಂ ಆದ ಕೂಡಲೇ ಅದಕ್ಕೆ ಎಲ್ಲಾ ವ್ಯವಸ್ಥೆ ಮಾಡಿದ್ದಾರೆ. ಆದರೆ ಕಮಲದ ಮಾದರಿ ಇದೆ ಎಂದು ಕಾಂಗ್ರೆಸ್ಸಿಗರು ವಿರೋಧ ಮಾಡ್ತಿದ್ದಾರೆ. ಕಮಲವನ್ನು ಏನು ಬಿಜೆಪಿಗೆ ಗುತ್ತಿಗೆ ಕೊಟ್ಟಿದ್ದಾರೆಯೇ‌? ಕಮಲ ಮಹಾಲಕ್ಷ್ಮಿಯ ಒಂದು ಸಂಕೇತ. ಇದನ್ನೂ ಕೂಡ ಕಾಂಗ್ರೆಸ್ಸಿಗರು ವಿರೋಧ ಮಾಡ್ತಿದ್ದಾರೆ. ಇದಕ್ಕೆ ಅರ್ಥವೇ ಇಲ್ಲ ಎಂದು ಗುಡುಗಿದರು.

ಅಭಿವೃದ್ಧಿಯ ಕೆಲಸಗಳು ಅಗುವ ಸಮಯದಲ್ಲಿ ಸಹಕಾರ ಕೊಡಬೇಕು. ಅದನ್ನು ಬಿಟ್ಟು ಎಲ್ಲವನ್ನು ಟೀಕಿಸುವುದಲ್ಲ. ಈಡೀ ರಾಜ್ಯದಲ್ಲಿ ಕಾಂಗ್ರೆಸ್​ನ ವಿರೋಧವನ್ನು ನೋಡ್ತಾ ಇದ್ದೇವೆ. ರೇಷನ್, ವ್ಯಾಕ್ಸಿನ್ ಎಲ್ಲವನ್ನು ಟೀಕಿಸಿದ್ದಾರೆ. ಟೀಕೆ ಮಾಡೋಕೆ ಕಾಂಗ್ರೆಸ್ ಪಕ್ಷ ಇದೆ ಎನ್ನುವಂತಾಗಿದೆ. ದೆಹಲಿಯಲ್ಲಿ ಅವರೇ ಕಟ್ಟಿಸಿದ ಲೋಟಸ್ ಮಹಲ್ ಇದೆ. ಹಾಗೆಂದು ಒಡೆದು ಹಾಕೋಕೆ ಆಗುತ್ತಾ? ಪ್ರತಿಯೊಂದಕ್ಕೂ ವಿರೋಧ ಮಾಡೋದು ಅರ್ಥವಿಲ್ಲದ್ದು, ಅದು ಸರಿಯಲ್ಲ. ಇಂತಹ ಟೀಕೆ ಮಾಡುವವರಿಗೆ ಕಾಂಗ್ರೆಸ್ ನಾಯಕರೇ ಬುದ್ದಿ ಹೇಳಬೇಕು ಎಂದು ಈಶ್ವರಪ್ಪ ಟೀಕಿಸಿದರು.

ಕಮಲದ ಚಿಹ್ನೆ ಬಿಜೆಪಿ ಪಕ್ಷದ ಸ್ವತ್ತೇ? ಕಾಂಗ್ರೆಸ್ಸಿಗರ ಮನೆಯಲ್ಲಿ ಪೂಜೆ ಮಾಡುವವುರು ದೇವರ ಮನೆಯಿಂದ ಕಮಲದ ಹೂವು ತೆಗೆಯುತ್ತಾರೆಯೋ ಎಂದು ಅವರ ತಾಯಿಗೋ, ತಂಗಿಗೋ, ಹೆಂಡತಿಗೋ ಕೇಳಲಿ. ಕಮಲದ ಯಾರದ್ದು ಅಲ್ಲ, ಹಸ್ತ ಕಾಂಗ್ರೆಸ್ ನ ಗುರುತು ಎಂದು ಕೈ ಮಾಡಲಾಗುತ್ತದೆಯೇ ಎಂದರು.

RELATED TOPICS:
English summary :Shivamogga: Lotus Design for Shivamogga Airport Leads to War of Words Between BJP, Congress in Karnataka

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ನ್ಯೂಸ್ MORE NEWS...