Sun,May19,2024
ಕನ್ನಡ / English

ರೇಖಾ ಹಂತಕ ಪೀಟರ್ ಬಾಯ್ಬಿಟ್ಟ ಸ್ಫೋಟಕ ರಹಸ್ಯ: ಸ್ವಂತ ಅತ್ತಿಗೆಯನ್ನೇ ಕೊಂದ ಮಾಲ? | ಜನತಾ ನ್ಯೂಸ್

28 Jun 2021
1618

ಬೆಂಗಳೂರು : ರಾಜಕೀಯ ಹಿಡಿತ ಸಾಧಿಸಲು ರೇಖಾ ಕೊಲೆ ಮಾಡಿಸಿರೋದನ್ನ ಪೊಲೀಸರು ಬಯಲಿಗೆ ಎಳೆದಿದ್ದಾರೆ. ಬಡ ಜನರಿಗೆ ಊಟ ವಿತರಿಸುತ್ತಿರುವಾಗಲೇ ಜೂ.24ರಂದು ಬಿಬಿಎಂಪಿ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್​ನನ್ನು ಅವರ ಕಚೇರಿ ಬಳಿಯೇ ಅಟ್ಟಾಡಿಸಿ ಕೊಂದ ಪೀಟರ್ ಪೊಲೀಸರ ಮುಂದೆ ಸ್ಫೋಟಕ ಹೇಳಿಕೆ ನೀಡಿದ್ದಾನೆ ಎಂದು ಮೂಲಗಳು ತಿಳಿಸಿವೆ.

2018ರಲ್ಲಿ ಕದಿರೇಶ್ ಹತ್ಯೆ ಮಾಡಿದ್ದ ಶೋಭನ್ ಗ್ಯಾಂಗ್​ಗೆ ರೇಖಾ ನೆರವು ನೀಡಿದ್ದಳು. ಇದೇ ವಿಚಾರಕ್ಕೆ ಆಕೆಯನ್ನು ಹತ್ಯೆ ಮಾಡಿದ್ದಾಗಿ ಪ್ರಮುಖ ಆರೋಪಿ ಪೀಟರ್ ವಿಚಾರಣೆಯಲ್ಲಿ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾನೆ ಎಂದು ಹೇಳಲಾಗುತ್ತಿದೆ. ಕದಿರೇಶ್ ಜತೆ ಓಡಾಡಿಕೊಂಡಿದ್ದ ಪೀಟರ್​ಗೆ ಯಾವುದಕ್ಕೂ ಕೊರತೆ ಇರಲಿಲ್ಲ. ಕದಿರೇಶ್ ಹತ್ಯೆಯಾದ ಬೆನ್ನಲ್ಲೇ ರೇಖಾ ಯಾವುದೇ ನೆರವನ್ನು ನೀಡದೆ ಪೀಟರ್​ನನ್ನು ದೂರ ಇಟ್ಟಿದ್ದಳು. ಜೀವನ ನಿರ್ವಹಣೆಗೂ ಕಷ್ಟವಾದಾಗ ರೇಖಾ ಮೇಲೆ ಆಕ್ರೋಶಗೊಂಡಿದ್ದ. ಅದನ್ನು ತಿಳಿದಿದ್ದ ಕದಿರೇಶ್ ಅಕ್ಕ ಮಾಲಾ ಹಾಗೂ ಇತರರು ಪೀಟರ್​ನನ್ನು ದಾಳವಾಗಿ ಬಳಸಿಕೊಂಡು ತಮ್ಮ ದಾರಿಗೆ ಅಡ್ಡವಾಗಿದ್ದ ರೇಖಾಳನ್ನು ಮುಗಿಸಲು ಆತನಿಗೆ ಆಮಿಷವೊಡ್ಡುತ್ತಿದ್ದರು.

ಜೊತೆಗೆ ಆಡಳಿತ ಹಾಗೂ ಉಳಿದ ವ್ಯವಹಾರವನ್ನೆಲ್ಲ ನೋಡಿಕೊಳ್ಳುತ್ತಿದ್ದ ಕದಿರೇಶ್, ಅಕ್ಕ, ಕುಟುಂಬದವರಿಗೆ ಆರ್ಥಿಕವಾಗಿ ಸಹಾಯ ಮಾಡುತ್ತಿದ್ದರು. ಕದಿರೇಶ್ ಕೊಲೆಯಾದ ನಂತರ ರೇಖಾ, ಪತಿ ಮನೆಯವರನ್ನು ದೂರವಿಟ್ಟಿದ್ದರು. ಕದಿರೇಶ್ ಆಸ್ತಿಯನ್ನು ರೇಖಾ ಮಾತ್ರ ಅನುಭವಿಸುತ್ತಿದ್ದಾರೆಂಬ ಕಾರಣಕ್ಕೆ ಮಾಲಾ ಗಲಾಟೆ ಮಾಡುತ್ತಿದ್ದಳು. ಇತ್ತೀಚೆಗೆ ಮಾಲಾ ಸಂಬಂಧಿಯೊಬ್ಬರ ಕಪಾಳಕ್ಕೆ ರೇಖಾ ಹೊಡೆದಿದ್ದರು. ಇದು ವೈಷಮ್ಯಕ್ಕೆ ಕಾರಣವಾಗಿತ್ತು ಎನ್ನಲಾಗಿದೆ.

ಮುಂಬರುವ ಬಿಬಿಎಂಪಿ ಚುನಾವಣೆಗೆ ನಿಲ್ಲಲು ರೇಖಾ ಕದಿರೇಶ್ ಸಿದ್ಧವಾಗಿದ್ದರು. ಈ ಬಾರಿಯೂ ಬಿಜೆಪಿಯಿಂದಲೇ ರೇಖಾಗೆ ಟಿಕೆಟ್ ಸಿಗುವುದು ಬಹುತೇಕ ಖಚಿತವಾಗಿತ್ತು. ಇತ್ತ ಮಾಲಾ ಬಿಎಸ್​ಪಿಯಿಂದ ಚುನಾವಣೆ ಸ್ಪರ್ಧಿಸಲು ಚಿಂತಿಸಿದ್ದಳು. ತನಗೆ ಆಗದಿದ್ದರೆ ಮಗಳು ಕಸ್ತೂರಿ ಅಥವಾ ಅರುಳ್ ಪತ್ನಿ ಪೂರ್ಣಿಮಾಳನ್ನು ನಿಲ್ಲಿಸಲು ತಯಾರಿ ಮಾಡಿದ್ದಳು.

ಆದರೆ ಏರಿಯಾದಲ್ಲಿ ಹೆಚ್ಚು ಸಮಾಜ ಸೇವೆಯಲ್ಲಿ ತೊಡಗಿದ್ದ ರೇಖಾ ಮೀರಿ ಚುನಾವಣೆಗೆ ನಿಲ್ಲೋದು ಕಷ್ಟದ ಮಾತಾಗಿತ್ತು. ಹಾಗಾಗಿ ರೇಖಾ ಜೊತೆಗೇ ಇದ್ದ ಪೀಟರ್ ಬಳಸಿ ರೇಖಾ ಕಥೆಯನ್ನೇ ಮುಗಿಸೋ ಪ್ಲ್ಯಾನ್ ಮಾಡಿಕೊಂಡಿದ್ರು.

ಪ್ರಮುಖ ಆರೋಪಿ ಪೀಟರ್ ಹಾಗೂ ಸೂರ್ಯನ ಜತೆ ಸೇರಿ ರೇಖಾ ಕೊಲೆಗೆ ಒಳಸಂಚು ರೂಪಿಸಿದ್ದರು. ಹತ್ಯೆಯಲ್ಲಿ ಮಾಲಾ ಹಾಗೂ ಈಕೆಯ ಪುತ್ರ ಅರುಳ್ ಭಾಗಿಯಾಗಿರುವುದು ತನಿಖೆಯಲಿ ದೃಢಪಟ್ಟಿದ್ದು, ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ.

ರೇಖಾ ಹತ್ಯೆಗೆ ಕೇವಲ ರಾಜಕೀಯ ಕಾರಣನಾ? ಅಥವಾ ಬೇರೇನಾದ್ರೂ ಕಾರಣಗಳಿವೆಯಾ ಅಂತಾ ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.

RELATED TOPICS:
English summary :Rekha Kadiresh

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...