ಬಾವಿಗೆ ಹಾರಿ ಕುಟುಂಬದ 6 ಮಂದಿ ಆತ್ಮಹತ್ಯೆ! | ಜನತಾ ನ್ಯೂಸ್
ಯಾದಗಿರಿ : ಬಾವಿಗೆ ಹಾರಿ ಕುಟುಂಬದ 6 ಮಂದಿ ಆತ್ಮಹತ್ಯೆಬಾವಿಗೆ ಹಾರಿ ಒಂದೇ ಕುಟುಂಬದ 6 ಜನರು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ನಡೆದಿದೆ. ದೋರನಹಳ್ಳಿಯಲ್ಲಿ ದಂಪತಿ ಮತ್ತು ನಾಲ್ವರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ದೋರನಹಳ್ಳಿ ದಂಪತಿಯರಾದ ಭೀಮರಾಯ ಸುರಪುರ(45) ಮತ್ತು ಶಾಂತಮ್ಮ(36) ಹಾಗೂ ಮಕ್ಕಳಾದ ಸುಮಿತ್ರಾ(12), ಶ್ರೀದೇವಿ(12), ಲಕ್ಷ್ಮೀ(8), ಶಿವರಾಜ(9) ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೃತ ಭೀಮರಾಯ್ ಕೃಷಿ ಮತ್ತು ವೈಯಕ್ತಿಕ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ. ಇಂದು ತನ್ನ ಕುಟುಂಬದ ಜೊತೆಗೆ ಜಮೀನಿಗೆ ತೆರಳಿದ್ದ ಭೀಮರಾಯ್, ಮೊದಲಿಗೆ ಮಕ್ಕಳ ಕಾಲಿಗೆ ಕಲ್ಲು ಕಟ್ಟಿ ಹೊಂಡಕ್ಕೆ ಹಾಕಿದ್ದಾನೆ. ಬಳಿಕ ತನ್ನ ಹೆಂಡತಿ ಜೊತೆಗೆ ತಾನು ಸಹ ಹಾರಿದ್ದಾನೆ ಎನ್ನಲಾಗಿದೆ.
ಸ್ಥಳಕ್ಕೆ ಎಸ್ಪಿ ವೇದಮೂರ್ತಿ, ಎಸಿ ಪ್ರಶಾಂತ್ ಹನಗಂಡಿ, ತಹಶೀಲ್ದಾರ ಜಗನ್ನಾಥ್ ರೆಡ್ಡಿ, ಡಿವೈಎಸ್ಪಿ ವೆಂಕಟೇಶ್ ಹುಗಿಬಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.