ಪತಿಯ ಅಕ್ರಮ ಸಂಬಂಧ ಪ್ರಶ್ನಿಸಿದ ಮಹಿಳೆ, ನೀರಿನ ಸಂಪ್ನಲ್ಲಿ ಶವ ಪತ್ತೆ! | ಜನತಾ ನ್ಯೂಸ್
ಚಿಕ್ಕಮಗಳೂರು : ಹಾಸನ ಜಿಲ್ಲೆ ಬೇಲೂರಿನ ಸೀಮ್ರಾನಾ ಬಾನು ಮೂರು ತಿಂಗಳ ಹಿಂದಷ್ಟೆ ಚಿಕ್ಕಮಗಳೂರಿನ ಫೈರೋಜ್ ಎಂಬುವವನ ಜೊತೆ ವಿವಾಹವಾಗಿದ್ದರು. 3 ತಿಂಗಳು ಕಳೆಯುವಷ್ಟರಲ್ಲಿ ಹೆಣವಾಗಿದ್ದಾಳೆ. ಗಂಡನ ಮನೆಯ ನೀರಿನ ಸಂಪ್ನಲ್ಲಿ ಸಿಮ್ರಾನ್ ಮೃತದೇಹ ಸಿಕ್ಕಿದೆ. ಆಕೆಯ ಶವವನ್ನು ನೋಡಿದ ಪೋಷಕರು, ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.
ಸಿಮ್ರಾನ್ಳ ಪತಿ ಫೈರೋಜ್ ತನ್ನ ಅಕ್ರಮ ಸಂಬಂಧದ ಬಗ್ಗೆ ಪ್ರಶ್ನಿಸಿದಕ್ಕೆ ಆಕೆಯನ್ನು ನೀರಿನ ಸಂಪ್ನಲ್ಲಿ ಮುಳುಗಿಸಿ ಕೊಲೆ ಮಾಡಿರುವುದಾಗಿ ಸಿಮ್ರಾನ್ ಕುಟುಂಬಸ್ಥರು ಆರೋಪಿಸಿದ್ದಾರೆ.
ಮದುವೆಯಾದ ಕೆಲವೇ ದಿನಗಳಲ್ಲಿ ತನ್ನ ಅಸಲಿ ಬುದ್ಧಿ ತೋರಿಸಿದ್ದ ಫೈರೋಜ್. ಕೊಟ್ಟಿರೋ ದುಡ್ಡು, ಚಿನ್ನ ಸಾಕಾಗಿಲ್ಲ ಇನ್ನೂ ಬೇಕು ಅಂತ ಪೀಡಿಸುತ್ತಿದ್ದನಂತೆ. ಅಲ್ಲದೇ ಬೇರೆ ಹುಡುಗಿಯರ ಜೊತೆ ಸಂಬಂಧ ಕೂಡ ಇಟ್ಟುಕೊಂಡಿದ್ದ. ಇದನ್ನ ಪ್ರಶ್ನೆ ಮಾಡಿದ್ದ ಪತ್ನಿ ಜೊತೆ ಗಲಾಟೆ ಮಾಡಿದ್ದ ಎಂದು ಮೃತಳ ಪೋಷಕರು ಆರೋಪಿಸಿದ್ದಾರೆ.
ಚಿಕ್ಕಮಗಳೂರು ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಸಿಮ್ರಾನ್ ಪತಿ ಫೈರೋಜ್ ಮತ್ತು ಆಕೆಯ ಅತ್ತೆ-ಮಾವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.