Sun,May19,2024
ಕನ್ನಡ / English

ಅಪ್ರಾಪ್ತ ಬಾಲಕಿಯನ್ನು ವೇಶ್ಯಾವಾಟಿಕೆಗೆ ದೂಡಿದ ಪರಿಚಿತ ಮಹಿಳೆ​! ಹೆತ್ತವರ ಸಾಥ್​ | ಜನತಾ ನ್ಯೂಸ್

02 Jul 2021
2032

ಚಿಕ್ಕಬಳ್ಳಾಪುರ : 14 ವರ್ಷದ ಬಾಲಕಿಯನ್ನ ಪರಿಚಿತ ಮಹಿಳೆಯೊಬ್ಬಳು ವೇಶ್ಯಾವಾಟಿಕೆಗೆ ದೂಡಿದ್ದು, ಆಕೆ ಈಗ 4 ತಿಂಗಳ ಗರ್ಭಿಣಿ ಆಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಮಂಚೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮಂಚೇನಹಳ್ಳಿ ಗ್ರಾಮವೊಂದರ 14 ವರ್ಷದ ಬಾಲಕಿ ದಲಿತ ಸಮುದಾಯಕ್ಕೆ ಸೇರಿದ್ದು, ಈಕೆಯ ತಂದೆ-ತಾಯಿ ಕುಡಿತ ಚಟ ಅಂಟಿಸಿಕೊಂಡಿದ್ದರು. ತಂದೆ-ತಾಯಿ ನಡುವೆ ಮನೆಯಲ್ಲಿ ಜಗಳ ಮಾಮೂಲಿಯಾಗಿತ್ತು. ಈ ಗ್ರಾಮಕ್ಕೆ ಸಂಬಂಧಿಕರ ಮನೆಗೆಂದು ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಗೌರಿ ಎಂಬಾಕೆ ಬರುತ್ತಿದ್ದಳು.

ಬಾಲಕಿಯ ಪಾಲಕರು ಕುಡಿದ ಅಮಲಿನಲ್ಲಿ ಕಿತ್ತಾಡುವುದನ್ನೇ ಬಂಡವಾಳ ಮಾಡಿಕೊಂಡ ಗೌರಿ, ಬಾಲಕಿಯನ್ನ ಪುಸಲಾಯಿಸಿ ತನ್ನ ಬಲೆಗೆ ಬೀಳಿಸಿಕೊಂಡಿದ್ದಾಳೆ.

ನಂತರ ಬೇರೆಯವರೊಂದಿಗೆ ಮಲಗಿದರೆ ಹಣ ಸಿಗುತ್ತೆ ಎಂದು ಬಾಲಕಿಯ ತಲೆಕೆಡಿಸಿದ ಗೌರಿ, ಪುರುಷರೊಂದಿಗೆ ಬಿಟ್ಟಿದ್ದಾಳೆ. ಹೀಗೆ ಐದಾರು ತಿಂಗಳಿಂದ ನಿರಂತರವಾಗಿ ಗ್ರಾಮದ ಆರೇಳು ಮಂದಿ ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದು, ಗೌರಿ ಆ ವೇಳೆ ಬಾಲಕಿಗೆ 200ರಿಂದ 300 ರೂಪಾಯಿ ಕೊಡುತ್ತಿದ್ದಳಂತೆ. ಆ ಹಣದಲ್ಲಿ ಆಕೆಯ ಅಪ್ಪ-ಅಮ್ಮ ಸ್ವಲ್ಪ ಪಡೆದು, ಉಳಿದದ್ದನ್ನು ಬಾಲಕಿಗೆ ಕೊಡುತ್ತಿದ್ದರು.

ಬಾಲಕಿಯ ತಾಯಿಗೆ ಕರೊನಾ ಬಂದಿದ್ದ ಕಾರಣ ಮುದುಗೆರೆ ಗ್ರಾಮದ ಸಂಬಂಧಿಕರೊಬ್ಬರ ಮನೆಗೆ ಬಾಲಕಿಯನ್ನು ಪಾಲಕರು ಕಳುಹಿಸಿದ್ದರು. ಅಲ್ಲಿ ವಾಂತಿ ಮಾಡಿಕೊಳ್ಳುತ್ತಿದ್ದ ಬಾಲಕಿಯನ್ನ ಆಶಾ ಕಾರ್ಯಕರ್ತೆಯರು ಪರಿಶೀಲಿಸಿದ್ದು, ಆ ವೇಳೆ ಬಾಲಕಿ ವೇಶ್ಯಾವಾಟಿಕೆ ದಂಧೆ ಬಗ್ಗೆ ಬಾಯ್ಬಿಟ್ಟಿದ್ದಾಳೆ.

ಸದ್ಯ ಬಾಲಕಿಯನ್ನು ಸಾಂತ್ವನ ಕೇಂದ್ರದಲ್ಲಿ ಇರಿಸಲಾಗಿದೆ. ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಬಾಲಕಿ ಕೊಟ್ಟ ದೂರಿನಂತೆ ಆರೋಪಿಗಳಾದ ಗೌರಿ ದೊಡ್ಡಬ್ಯಾಲ, ಮೂರ್ತಿ, ಬಶೀರ್, ದೇವಾ, ವಿನೂದ್ ಎಂಬುವವರ ವಿರುದ್ಧ ಕೇಸ್​ ದಾಖಲಾಗಿದೆ. ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

RELATED TOPICS:
English summary :Chikkaballapura

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...