Sun,May19,2024
ಕನ್ನಡ / English

3 ತಿಂಗಳೊಳಗೆ ಶೇ.80 ಜನರಿಗೆ ಕೋವಿಡ್ ಲಸಿಕೆ ಹಾಕಿಸಿ, 3ನೇ ಅಲೆಯಿಂದ ರಕ್ಷಿಸಿ: ಡಿ.ಕೆ. ಶಿವಕುಮಾರ್ | ಜನತಾ ನ್ಯೂಸ್

04 Jul 2021
1350

ಬೆಂಗಳೂರು : ಮೂರು ತಿಂಗಳೊಳಗೆ ಶೇಕಡಾ 80 ರಷ್ಟು ಜನರಿಗೆ ಎರಡು ಡೋಸ್ ಲಸಿಕೆ ಹಾಕಿಸಿ, ಕೋವಿಡ್ 3 ನೇ ಅಲೆಯಿಂದ ಜನರನ್ನು ರಕ್ಷಣೆ ಮಾಡುವಂತೆ ಸರ್ಕಾರಕ್ಕೆ ತಾಕೀತು ಮಾಡಲು ಪಕ್ಷದ ವತಿಯಿಂದ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಈ ಸಂಬಂಧ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಮೂರು ತಿಂಗಳೊಳಗೆ ರಾಜ್ಯದ ಶೇ.80 ರಷ್ಟು ವಯಸ್ಕರಿಗೆ ಎರಡು ಡೋಸ್ ಲಸಿಕೆ ಹಾಕಿದರೆ, ಕೊರೊನಾ 3 ನೇ ಅಲೆಯಿಂದ ರಾಜ್ಯವನ್ನು ರಕ್ಷಿಸಬಹುದಾಗಿದೆ. ಅಕ್ಟೋಬರ್​ನಲ್ಲಿ ಕೊರೊನಾ 3ನೇ ಅಲೆ ತೀವ್ರವಾಗುವ ಸೂಚನೆಯನ್ನು ತಜ್ಞರು ನೀಡಿದ್ದಾರೆ. ಶೇ.80 ರಷ್ಟು ವಯಸ್ಕರಿಗೆ ಸೆಪ್ಟೆಂಬರ್ 30 ರೊಳಗೆ ಎರಡು ಡೋಸ್ ಲಸಿಕೆ ನೀಡಿದರೆ 3ನೇ ಅಲೆಯಿಂದ ರಕ್ಷಣೆ ಪಡೆಯಬಹುದು ಮತ್ತು ಅದರ ತೀವ್ರತೆ ತಡೆಯಬಹುದು. ಅದಕ್ಕಾಗಿಯೇ ಈ ಸವಾಲಿಗೆ ಸರ್ಕಾರ ಸಿದ್ಧವಿದೆಯೇ? ಎಂದು ಪ್ರಶ್ನೆ ಮಾಡಿದ್ದಾರೆ.

ಈ ಸವಾಲು ಅಸಾಧ್ಯವಾದುದೇನೂ ಅಲ್ಲ. ವಿದೇಶಗಳಿಗೆ ಲಸಿಕೆ ಕಳಿಸುವುದನ್ನು ತಗ್ಗಿಸಿ ನಮ್ಮ ಜನರಿಗೆ ವ್ಯಾಕ್ಸಿನೇಷನ್‌ ಮಾಡಲು ಒತ್ತು ಕೊಡಬೇಕು ಎಂದವರು ಹೇಳಿದರು.

ಕೇಂದ್ರದಲ್ಲಿ ಅವರದೇ ಪಕ್ಷದ ಸರ್ಕಾರ ಇದ್ದರೂ ರಾಜ್ಯ ಬಿಜೆಪಿ ಸರ್ಕಾರಕ್ಕೆ ಅವಶ್ಯಕ ಪ್ರಮಾಣದ ಲಸಿಕೆ ಪಡೆದುಕೊಳ್ಳಲು ಸಾಧ್ಯವಾಗಿಲ್ಲ. ವ್ಯಾಕ್ಸಿನೇಷನ್ ಬಗ್ಗೆ ಒಂದು ದಿನದ ಅಬ್ಬರದ ಪ್ರಚಾರ ಪಡೆದು ಸರ್ಕಾರ ಸುಮ್ಮನಾದರೆ ಹೇಗೆ? ಲಸಿಕೆ ಹಾಕುವ ಪ್ರಮಾಣ ಕಡಿಮೆಯಾಗಿದೆ. ಲಸಿಕೆ ಹಾಕುವಲ್ಲಿ ಉತ್ತರ ಕರ್ನಾಟಕದ ಜನರನ್ನು ಮಲತಾಯಿ ಮಕ್ಕಳಂತೆ ನೋಡಲಾಗುತ್ತಿದೆ. ಬೆಂಗಳೂರು ನಗರದಲ್ಲೂ ಲಸಿಕೆ ದಾಸ್ತಾನು ಕೊರತೆಯಿದೆ. ಅವಶ್ಯಕ ಪ್ರಮಾಣದಲ್ಲಿ ಲಸಿಕೆ ಪೂರೈಕೆ ಆಗಿಲ್ಲವಾದ ಕಾರಣ ದಿಲ್ಲಿಗೆ ಹೋಗುವುದಾಗಿ ಆರೋಗ್ಯ ಸಚಿವರು ಹೇಳುತ್ತಿದ್ದಾರೆ. ಈ ಸರ್ಕಾರ ಈಗಲಾದರೂ ಎಚ್ಚೆತ್ತು ಬದ್ದತೆಯಿಂದ ಕೆಲಸ ಮಾಡುತ್ತಾ ನೋಡೋಣ ಎಂದು ಶಿವಕುಮಾರ್ ಹೇಳಿದರು.

ಡೆಲ್ಟಾ ರೂಪಾಂತರಿ ವೈರಾಣು ವಿರುದ್ದ ರಕ್ಷಣೆಗಾಗಿ ಕೋವಿಶೀಲ್ಡ್ 2 ನೇ ಲಸಿಕೆಯನ್ನು 8 ವಾರಗಳೊಳಗೆ ಕೊಡಬೇಕು. ಅದಕ್ಕಾಗಿ ಸರ್ಕಾರ ಮಾರ್ಗಸೂಚಿಯಲ್ಲಿ ಸೂಕ್ತ ಬದಲಾವಣೆ ಮಾಡಿಕೊಳ್ಳಲಿ ಎಂದು ಸಲಹೆ ಮಾಡಿದರು.

ಕಾಂಗ್ರೆಸ್ ಪಕ್ಷದ ನಾಯಕರು ಸ್ವಂತ ಖರ್ಚಿನಲ್ಲಿ ವ್ಯಾಕ್ಸಿನೇಷನ್‌ ಶಿಬಿರಗಳನ್ನು ನಡೆಸಿ, 1 ಲಕ್ಷ ಮಂದಿಗೆ ಉಚಿತವಾಗಿ ಲಸಿಕೆ ಹಾಕಿಸಿದ್ದಾರೆ. ಉತ್ಪಾದಕರಿಂದ ನೇರವಾಗಿ ಲಸಿಕೆ ಖರೀದಿಸಲು ಅನುಮತಿ ಕೇಳಿದರೂ ಸರ್ಕಾರ ಕೊಡಲಿಲ್ಲ. ಈ ಉದ್ದೇಶಕ್ಕೆ ಶಾಸಕರ ನಿಧಿ ಬಳಸುವ ಸದಾಶಯಕ್ಕೆ ಸರ್ಕಾರ ಸಮ್ಮತಿಸಲಿಲ್ಲ. ನಮ್ಮ ಸಹಾಯ ಅಗತ್ಯವಿಲ್ಲ ಎಂದರೆ ತೊಂದರೆ ಇಲ್ಲ. ಕಾಲಮಿತಿಯಲ್ಲಿ ಸರ್ಕಾರ ತ್ವರಿತವಾಗಿ ಎಲ್ಲರಿಗೂ ಲಸಿಕೆ ಹಾಕಿಸಿ, ಜನರನ್ನು ರಕ್ಷಣೆ ಮಾಡಲಿ ಎಂದು ಶಿವಕುಮಾರ್ ಹೇಳಿದರು.

RELATED TOPICS:
English summary :DKShivakumar

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...