ಟ್ರ್ಯಾಕ್ಟರ್ ಹರಿದು ಗಾಯಗೊಂಡಿದ್ದ ಬಾಲಕ ಸಾವು, ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ | ಜನತಾ ನ್ಯೂಸ್
ಚಾಮರಾಜನಗರ : ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಸವಕನಹಳ್ಳಿಪಾಳ್ಯದಲ್ಲಿ ಟ್ರ್ಯಾಕ್ಟರ್ ಗೆ ಸಿಲುಕಿ ಬಾಲಕನೊಬ್ಬ ಮೃತಪಟ್ಟಿದ್ದಾನೆ. ಇದರಿಂದ ಮನನೊಂದ ಟ್ರ್ಯಾಕ್ಟರ್ ಚಾಲನೆ ಮಾಡುತ್ತಿದ್ದ ಪಿ.ಹೆಚ್.ಡಿ. ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಸವಕನಹಳ್ಳಿಪಾಳ್ಯದ 5 ವರ್ಷದ ಹರ್ಷ ಮೃತಪಟ್ಟ ಬಾಲಕ. ಆತನ ಸಾವಿಗೆ ನಾನೇ ಕಾರಣ ಎಂದು ಮನನೊಂದ ಮೈಸೂರು ವಿವಿ ಪತ್ರಿಕೋದ್ಯಮದ ಸಂಶೋಧನಾ ವಿದ್ಯಾರ್ಥಿ ಸುನಿಲ್(23) ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕ್ರಿಕೆಟ್ ಟೂರ್ನಮೆಂಟ್ಗಾಗಿ ಗುರುವಾರ ಮೈದಾನವನ್ನು ಟ್ರ್ಯಾಕ್ಟರ್ ಮೂಲಕ ಸಮತಟ್ಟು ಮಾಡಲಾಗುತ್ತಿತ್ತು. ಈ ವೇಳೆ ಸುನೀಲ್ ಟ್ರ್ಯಾಕ್ಟರ್ ಚಲಾಯಿಸುತ್ತಿದ್ದ. ಸಮತಟ್ಟು ಮಾಡುವುದನ್ನು ನೋಡುತ್ತಾ ನಿಂತಿದ್ದ ಹರ್ಷನಿಗೆ ಆಕಸ್ಮಿಕವಾಗಿ ಟ್ರ್ಯಾಕ್ಟರ್ ಡಿಕ್ಕಿ ಹೊಡೆಸು, ಗಂಭೀರವಾಗಿ ಗಾಯಗೊಂಡಿದ್ದ.
ಇದಾದ ತಕ್ಷಣವೇ ಹರ್ಷನನ್ನು ಮಧ್ಯಾಹ್ನ ಗುಂಡ್ಲುಪೇಟೆಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಳಿಸದೇ ಹರ್ಷ ಮೃತಪಟ್ಟಿದ್ದಾನೆ. ಘಟನೆಯ ನಂತರ ಮೈಸೂರಿಗೆ ಪರಾರಿಯಾಗಿದ್ದ ಸುನಿಲ್ ಬಾಲಕ ಮೃತಪಟ್ಟ ಸುದ್ದಿ ತಿಳಿದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಬೇಗೂರು ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.