Sun,May19,2024
ಕನ್ನಡ / English

ನಕಲಿ ವಿಡಿಯೊ ಸೃಷ್ಟಿಸಿ ನನ್ನ ಹಾಗು ಸುಮಲತಾ ಮಧ್ಯೆ ಸಂಬಂಧ ಕಲ್ಪಿಸಲು ಕುಮಾರಸ್ವಾಮಿ ಯತ್ನಿಸಿದ್ದರು | ಜನತಾ ನ್ಯೂಸ್

09 Jul 2021
2719

ಬೆಂಗಳೂರು : ಸಂಸದೆ ಸುಮಲತಾ ಅಂಬರೀಷ್ ಪರ ಮಾತನಾಡಿರುವ ಚಲನಚಿತ್ರ ನಿರ್ಮಾಪಕ, ಅಂಬರೀಷ್ ಕುಟುಂಬದ ಆಪ್ತ ರಾಕ್ ಲೈನ್ ವೆಂಕಟೇಶ್ ಅವರು ಕುಮಾರಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಮ್ಮ ಮತ್ತು ಸುಮಲತಾ ಅಂಬರೀಷ್​ ಬಗ್ಗೆ ಸಂಬಂಧ ಕಲ್ಪಿಸಲು ಕುಮಾರಸ್ವಾಮಿ ಯತ್ನಿಸಿದ್ದರು ಎಂದೂ ರಾಕ್‌ಲೈನ್ ವೆಂಕಟೇಶ್ ಗಂಭೀರ ಆರೋಪ ಮಾಡಿದ್ದಾರೆ.

ಕಳೆದ 2019ರಲ್ಲಿ ಲೋಕಸಭೆ ಚುನಾವಣೆಯಲ್ಲಿ ನಕಲಿ ವಿಡಿಯೊ ಸೃಷ್ಟಿಸಿ ತಮ್ಮ ಮತ್ತು ಸುಮಲತಾ ಅವರ ತೇಜೋವಧೆ ಮಾಡಲು ಹೊರಟಿದ್ದರು, ಸುಮಲತಾ ಅವರ ಹೆಸರಿಗೆ ಮಸಿ ಬಳಿಯಲು ಯತ್ನಿಸಿದ್ದರು ಎಂದು ಗುರುತರ ಆರೋಪಗಳನ್ನು ಮಾಡಿದ್ದಾರೆ.

ಹೆಚ್​ ಡಿ ಕುಮಾರಸ್ವಾಮಿ ಅವರು ಆಡಿಯೋ ವಿಡಿಯೋ ಬಾಂಬ್ ಎಂದು ಬೆದರಿಕೆ ಹಾಕುವುದು ಹೊಸದಲ್ಲ, ಚುನಾವಣೆ ಸಂಬಂಧ ಬೆಂಗಳೂರು ಮತ್ತು ಮಂಡ್ಯದಲ್ಲಿ ಹಲವು ಸಭೆಗಳನ್ನು,ಚರ್ಚೆಗಳನ್ನು ಮಾಡುತ್ತಿದ್ದೆವು. ನಮ್ಮ ಬೆಂಬಲಿಗರ ಜೊತೆ ಚರ್ಚಿಸಲು ಹೊಟೇಲ್ ಗಳಲ್ಲಿ ಕೂಡ ಸಭೆ ಮಾಡುತ್ತಿದ್ದೆವು.

ಹೀಗೆ ಏಟ್ರಿಯಾ ಹೊಟೇಲ್ ನಲ್ಲಿ ಸಭೆ ನಡೆಸಲು ನಿಶ್ಚಯಿಸಿದ್ದಾಗ ಕಾರಿನಿಂದ ನಾನು ಮತ್ತು ಸುಮಲತಾ ಅವರು ಇಳಿದು ಹೋಗುವಾಗ ಹೊಟೇಲ್ ನ ಸಿಸಿಟಿವಿ ಕ್ಯಾಮರಾದ ದೃಶ್ಯಾವಳಿಗಳನ್ನು ಸೆಕ್ಯುರಿಟಿ ಕೈಯಿಂದ ಪಡೆದುಕೊಂಡು ಸುಮಲತಾ ಅವರ ಹೆಗಲಿಗೆ ಯಾರೋ ಕೈ ಹಾಕಿದ್ದ ಫೋಟೋ ಬಳಸಿಕೊಂಡು ನಾನು ಮತ್ತು ಸುಮಲತಾ ಅವರು ಹೊಟೇಲ್ ಕಾರಿಡಾರ್ ಮೂಲಕ ರೂಂಗೆ ಇಬ್ಬರೇ ಹೋಗುತ್ತೇವೆ ಎಂದು ಅಶ್ಲೀಲ ಚಿತ್ರಗಳನ್ನು ತಂದು ಪೇಸ್ಟ್ ಮಾಡಿ ನಕಲಿ ವಿಡಿಯೊ ಸೃಷ್ಟಿಸಿ ಚುನಾವಣೆ ಸಂದರ್ಭದಲ್ಲಿ ಹರಿಬಿಡಲು ಆಸೆಪಟ್ಟಿದ್ದರು.

ಡಾ ರಾಜ್ ಕುಮಾರ್ ಅವರು ತೀರಿಕೊಂಡಾಗ ಯಾರು ಸಿಎಂ ಆಗಿದ್ದರು ಎಂದು ಗೊತ್ತಿದೆ, ಡಾ ವಿಷ್ಣುವರ್ಧನ್ ಅವರು ತೀರಿಕೊಂಡಾಗ ಅಂಬರೀಷ್ ಅವರೇ ಖುದ್ದು ನಿಂತು ಅಂತ್ಯಸಂಸ್ಕಾರಕ್ಕೆ ವ್ಯವಸ್ಥೆ ಮಾಡಿಸಿದ್ದರು. ಆಗ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದರು. ಅಂಬರೀಷ್ ಅವರಿಗೆ ಯಾರೂ ಬೇಕಾಗಿಲ್ಲ, ಯಾರು ಏನೂ ಮಾಡಬೇಕಾಗಿರಲಿಲ್ಲ, ಅವರು ದೇವಮಾನವ, ದೇವರು ಅವರಿಗೆ ಮಾಡಬೇಕಾದ್ದನ್ನು ಮಾಡಿಸಿಕೊಂಡು ಕರೆದುಕೊಂಡು ಹೋದರು ಎಂದರು.

ಈ ಬಗ್ಗೆ ಹೆಚ್ ಡಿ ಕುಮಾರಸ್ವಾಮಿಯ ಚಾನೆಲ್ ನಲ್ಲಿದ್ದ ಅಂಬರೀಷ್ ಅವರ ಅಭಿಮಾನಿಯೇ ನನ್ನಲ್ಲಿ ಹೇಳಿದ್ದರು, ಕೊನೆಗೆ ಅದು ಚುನಾವಣೆ ಸಮಯದಲ್ಲಿ ಬಿಡುಗಡೆ ಮಾಡದೆ, ಇನ್ನೊಂದು ಸಂದರ್ಭದಲ್ಲಿ ನೋಡೋಣ ಎಂದು ನಿರ್ಧರಿಸಿದ್ದಾರೆ ಎಂದರು. ಅಂದರೆ ಅವರ ಮನಸ್ಸು ಎಷ್ಟು ಹೊಲಸಾಗಿದೆ ಎಂದು ಹೆಚ್ ಡಿ ಕುಮಾರಸ್ವಾಮಿಯವರನ್ನೇ ಸಂಬೋಧಿಸಿ ರಾಕ್ ಲೈನ್ ವೆಂಕಟೇಶ್ ಆರೋಪಿಸಿದ್ದಾರೆ.

RELATED TOPICS:
English summary :Rockline Venkatesh, Sumalatha Ambareesh

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...