Sun,Jun02,2024
ಕನ್ನಡ / English

ಅಕ್ರಮ ಗಣಿಗಾರಿಕೆ ವಿರುದ್ಧ ನನ್ನ ಹೋರಾಟ ನಿಲ್ಲುವುದಿಲ್ಲ: ಎಚ್‌ಡಿಕೆ ಟ್ವೀಟ್‌ಗೆ ಸುಮಲತಾ ಉತ್ತರ | ಜನತಾ ನ್ಯೂಸ್

10 Jul 2021
1769

ಬೆಂಗಳೂರು : ಸದ್ಯದಲ್ಲಿಯೇ ಕೃಷ್ಣರಾಜ ಸಾಗರ ಅಣೆಕಟ್ಟಿಗೆ ಮತ್ತು ಬೇಬಿ ಬೆಟ್ಟಕ್ಕೆ ಭೇಟಿ ನೀಡಿ ಅಕ್ರಮ ಗಣಿಗಾರಿಕೆ ಬಗ್ಗೆ ಪರಿಶೀಲಿಸುತ್ತೇನೆ ಎಂದು ಮಂಡ್ಯ ಸಂಸದ ಸುಮಲತಾ ಅಂಬರೀಷ್ ಹೇಳಿದ್ದಾರೆ.

ಕೆಆರ್‌ಎಸ್‌ ಅಣೆಕಟ್ಟೆ ಸಮೀಪದ‌ ಬೇಬಿ ಬೆಟ್ಟದಲ್ಲಿ ನಡೆಯುತ್ತಿರುವ ಗಣಿಗಾರಿಕೆಗೆ ಸಂಬಂಧಿಸಿದಂತೆ ಮಂಡ್ಯ ಸಂಸದೆ ಸುಮಲತಾ ಅಂಬರೀಷ್‌ ಅವರೊಂದಿಗೆ ನಡೆಸುತ್ತಿದ್ದ ರಾಜಕೀಯ ಕದನಕ್ಕೆ ವಿರಾಮ ಹಾಕಲು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನಿರ್ಧರಿಸಿದ್ದಾರೆ.

ಅಕ್ರಮ ಗಣಿಗಾರಿಕೆ ವಿರುದ್ಧ ನನ್ನ ಹೋರಾಟ ನಿಲ್ಲಲ್ಲ. ರವೀಂದ್ರ ಶ್ರೀಕಂಠಯ್ಯ ಹೇಳಿದಂತೆ ನಡೆದುಕೊಳ್ಳಲಾಗಲ್ಲ. ಒಬ್ಬ ಸಂಸದೆಯಾಗಿ ನನ್ನ ಜವಾಬ್ದಾರಿ ನನಗೆ ಗೊತ್ತಿದೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ತಿರುಗೇಟು ನೀಡಿದ್ದಾರೆ.

ಕೆಆರ್​ಎಸ್​ಗೆ ಭೇಟಿ ನೀಡಲು ಈವರೆಗೆ ಅನುಮತಿ ಇರಲಿಲ್ಲ. ಕಾವೇರಿ ನಿಗಮದ ಅನುಮತಿ ಪಡೆದು ಹೋಗುತ್ತೇನೆ. ಕೆಆರ್​ಎಸ್ ಜಲಾಶಯ ಪರಿಶೀಲನೆ ಮಾಡಲು ಹೋಗುತ್ತೇನೆ. ಹಾಗೆಯೇ ಬೇಬಿ ಬೆಟ್ಟದಲ್ಲಿ ಅಕ್ರಮ ಗಣಿಗಾರಿಕೆ ಪರಿಶೀಲಿಸುವೆ.

ಸತ್ಯದ ಪರ ಹೋರಾಟ ಮಾಡುವಾಗ ಈ ರೀತಿ ಅಡೆತಡೆಗಳು, ಶತ್ರುಗಳು ಹುಟ್ಟಿಕೊಳ್ಳುವುದು ಸಹಜ, ಇದರಿಂದಲೇ ನಾನು ಸತ್ಯದ ಪರ ಹೋರಾಡುತ್ತಿದ್ದೇನೆ ಎಂದು ಗೊತ್ತಾಗುತ್ತದೆ ಎಂದು ತಮ್ಮ ನಡೆಯನ್ನು ಸುಮಲತಾ ಅಂಬರೀಷ್ ಸಮರ್ಥಿಸಿಕೊಂಡಿದ್ದಾರೆ.

ಅಧಿಕಾರಿಗಳು ಕೊಡುವುದು ಕೇವಲ ರಿಪೋರ್ಟ್ ಅಷ್ಟೇ. ಆದರೆ ನಮಗೆ ಬೇಕಾಗಿರುವುದು ಸರ್ಟಿಫಿಕೆಟ್. ಕೆಆರ್​ಎಸ್​ನಲ್ಲಿ ಬಿರುಕು ಬಿಟ್ಟಿಲ್ಲ ಎನ್ನುವುದಾದರೆ ಸಂತಸವೇ ಆಗುತ್ತದೆ. ಆ ಬಗ್ಗೆ ಮೊದಲು ಸಂತಸಪಡುವುದು ನಾನೇ ಎಂದು ಸುಮಲತಾ ಹೇಳಿಕೊಂಡಿದ್ದಾರೆ.

ಕೆಆರ್ ಎಸ್ ಜಲಾಶಯ ಬಿರುಕು ಬಿಟ್ಟಿಲ್ಲ ಎಂದು ಪ್ರಮಾಣಪತ್ರ ಸಿಕ್ಕಿದರೆ ಸಂತೋಷಪಡುವವಳು ನಾನು, ಅಲ್ಲಿನ ಜನರ ಜೀವನಕ್ಕೆ ಸುರಕ್ಷತೆ ಬೇಕಾಗಿದೆ. ಜಲಾಶಯದ ಭದ್ರತೆ ವಿಚಾರದಲ್ಲಿ ರಾಜಕೀಯವಾಗಿ ಏನೇ ಬಂದರೂ ನಾನು ನನ್ನ ಹೋರಾಟ ನಿಲ್ಲಿಸುವುದಿಲ್ಲ ಎಂದರು.

ಜೆಡಿಎಸ್ ನಾಯಕರು ತಮ್ಮ ಅಪ್ರಬುದ್ಧ ಹೇಳಿಕೆಗಳನ್ನು ಮುಂದುವರಿಸುತ್ತಿದ್ದರೆ ಅವರ ನಿಜಸ್ವರೂಪ ಜನರಿಗೆ ಗೊತ್ತಾಗುತ್ತದೆ, ಮುಂದಿನ ದಿನಗಳಲ್ಲಿ ಅದಕ್ಕೆ ತಕ್ಕ ಬೆಲೆಯನ್ನು ಅವರು ತೆರಬೇಕಾಗುತ್ತದೆ. ಸಂಸದೆಯಾಗಿ ನನ್ನ ಜವಾಬ್ದಾರಿ ನನಗೆ ಗೊತ್ತಿದೆ ಎಂದು ಇಂದು ಸಹ ಜೆಡಿಎಸ್ ದಳಪತಿಗಳ ಮೇಲೆ ಸುಮಲತಾ ಅಂಬರೀಷ್ ಹರಿಹಾಯ್ದಿದ್ದಾರೆ.

RELATED TOPICS:
English summary :Sumalatha Ambareesh

ಇಂಡಿ ಅಲಯನ್ಸ್ ಬ್ಲಾಕ್ ಗೆ 295 ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯುತ್ತೇವೆ - ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
ಇಂಡಿ ಅಲಯನ್ಸ್ ಬ್ಲಾಕ್ ಗೆ 295 ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯುತ್ತೇವೆ - ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
ವ್ಯಾಟಿಕನ್ ಮತ್ತು ವಿದೇಶಗಳಲ್ಲಿ ನಂಬಿಕೆ ಹೊಂದಿರುವವರಿಗೆ ಧ್ಯಾನ ಅರ್ಥವಾಗುವುದಿಲ್ಲ.. ಮೋದಿಯವರನ್ನು ವಿರೋಧಿಸುತ್ತಿದ್ದಾರೆ - ಮಾಜಿ ಕಾಂಗ್ರೆಸ್ ನಾಯಕ
ವ್ಯಾಟಿಕನ್ ಮತ್ತು ವಿದೇಶಗಳಲ್ಲಿ ನಂಬಿಕೆ ಹೊಂದಿರುವವರಿಗೆ ಧ್ಯಾನ ಅರ್ಥವಾಗುವುದಿಲ್ಲ.. ಮೋದಿಯವರನ್ನು ವಿರೋಧಿಸುತ್ತಿದ್ದಾರೆ - ಮಾಜಿ ಕಾಂಗ್ರೆಸ್ ನಾಯಕ
48 ಗಂಟೆಗಳ ಧ್ಯಾನಕ್ಕೆ ಕುಳಿತ ಪ್ರಧಾನಿ ಮೋದಿ : ಪ್ರತಿಪಕ್ಷಗಳ ತೀವ್ರ ವಿರೋಧ
48 ಗಂಟೆಗಳ ಧ್ಯಾನಕ್ಕೆ ಕುಳಿತ ಪ್ರಧಾನಿ ಮೋದಿ : ಪ್ರತಿಪಕ್ಷಗಳ ತೀವ್ರ ವಿರೋಧ
ಪ್ರಜ್ವಲ್ ರೇವಣ್ಣ ಅವರನ್ನು ವಿಮಾನ ನಿಲ್ದಾಣದಿಂದ ಬಂಧಿಸಿ ಕರೆದೊಯ್ದ ಮಹಿಳಾ ಪೊಲೀಸ್ ತಂಡ
ಪ್ರಜ್ವಲ್ ರೇವಣ್ಣ ಅವರನ್ನು ವಿಮಾನ ನಿಲ್ದಾಣದಿಂದ ಬಂಧಿಸಿ ಕರೆದೊಯ್ದ ಮಹಿಳಾ ಪೊಲೀಸ್ ತಂಡ
ಖಾಸಗಿ ತಂಡ ವಿನ್ಯಾಸಗೊಳಿಸಿದ ಭಾರತದ ಮೊದಲ ರಾಕೆಟ್, ಮೊದಲ ಮತ್ತು ಏಕೈಕ ಖಾಸಗಿ ಲಾಂಚ್‌ಪ್ಯಾಡ್‌ ನಿಂದ ಯಶಸ್ವಿ ಉಡಾವಣೆ
ಖಾಸಗಿ ತಂಡ ವಿನ್ಯಾಸಗೊಳಿಸಿದ ಭಾರತದ ಮೊದಲ ರಾಕೆಟ್, ಮೊದಲ ಮತ್ತು ಏಕೈಕ ಖಾಸಗಿ ಲಾಂಚ್‌ಪ್ಯಾಡ್‌ ನಿಂದ ಯಶಸ್ವಿ ಉಡಾವಣೆ
ತವಾ ಫ್ರೈ ಆಗುತ್ತಿರುವ ದೆಹಲಿ : ಅತ್ಯಧಿಕ ತಾಪಮಾನ 52.3 ಡಿಗ್ರಿ ಸೆಲ್ಸಿಯಸ್ ದಾಖಲು
ತವಾ ಫ್ರೈ ಆಗುತ್ತಿರುವ ದೆಹಲಿ : ಅತ್ಯಧಿಕ ತಾಪಮಾನ 52.3 ಡಿಗ್ರಿ ಸೆಲ್ಸಿಯಸ್ ದಾಖಲು
ಲೋಕಸಭೆ ಚುನಾವಣೆ ಪ್ರಚಾರ ಮುಗಿದ ಬಳಿಕ ಕನ್ಯಾಕುಮಾರಿಯಲ್ಲಿ ಆಧ್ಯಾತ್ಮಿಕ ಧ್ಯಾನ ಮಾಡಲಿರುವ ಪ್ರಧಾನಿ ಮೋದಿ
ಲೋಕಸಭೆ ಚುನಾವಣೆ ಪ್ರಚಾರ ಮುಗಿದ ಬಳಿಕ ಕನ್ಯಾಕುಮಾರಿಯಲ್ಲಿ ಆಧ್ಯಾತ್ಮಿಕ ಧ್ಯಾನ ಮಾಡಲಿರುವ ಪ್ರಧಾನಿ ಮೋದಿ
7 ದಿನಗಳ ಜಾಮೀನು ವಿಸ್ತರಣೆ ಕೋರಿ ಸಲ್ಲಿಸಿದ್ದ ಅರ್ಜಿ : ದೆಹಲಿ ಸಿಎಂ ಕೇಜ್ರಿವಾಲ್‌ಗೆ ನಿರಾಸೆ
7 ದಿನಗಳ ಜಾಮೀನು ವಿಸ್ತರಣೆ ಕೋರಿ ಸಲ್ಲಿಸಿದ್ದ ಅರ್ಜಿ : ದೆಹಲಿ ಸಿಎಂ ಕೇಜ್ರಿವಾಲ್‌ಗೆ ನಿರಾಸೆ
ಮೇ 31 ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ ಮುಂದೆ ಹಾಜರಾಗುತ್ತೇನೆ - ಪ್ರಜ್ವಲ್ ರೇವಣ್ಣ ವಿಡಿಯೋ ಸಂದೇಶ
ಮೇ 31 ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ ಮುಂದೆ ಹಾಜರಾಗುತ್ತೇನೆ - ಪ್ರಜ್ವಲ್ ರೇವಣ್ಣ ವಿಡಿಯೋ ಸಂದೇಶ
ಟ್ರಕ್, ಕಾರು ಭೀಕರ ಅಪಘಾತದಲ್ಲಿ 6 ಜನರ ಸಾವು: ಕಳೆದ 24 ಗಂಟೆಗಳಲ್ಲಿ ರಾಜ್ಯಾದ್ಯಂತ ರಸ್ತೆ ಅಪಘಾತಗಳಲ್ಲಿ 51
ಟ್ರಕ್, ಕಾರು ಭೀಕರ ಅಪಘಾತದಲ್ಲಿ 6 ಜನರ ಸಾವು: ಕಳೆದ 24 ಗಂಟೆಗಳಲ್ಲಿ ರಾಜ್ಯಾದ್ಯಂತ ರಸ್ತೆ ಅಪಘಾತಗಳಲ್ಲಿ 51
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದಾಗಿ ಅತ್ಯಾಚಾರ, ಕೊಲೆ, ಹಲ್ಲೆ, ನಡೆಯುತ್ತಿದೆ. ಭಯೋತ್ಫಾದನೆ, ಕೋಮುಗಲಭೆಗಳು ರಾರಾಜಿಸುತ್ತಿವ - ಬಿಜೆಪಿ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದಾಗಿ ಅತ್ಯಾಚಾರ, ಕೊಲೆ, ಹಲ್ಲೆ, ನಡೆಯುತ್ತಿದೆ. ಭಯೋತ್ಫಾದನೆ, ಕೋಮುಗಲಭೆಗಳು ರಾರಾಜಿಸುತ್ತಿವ - ಬಿಜೆಪಿ
ರಾಜ್ಯಪಾಲರು ಕೂಡಲೇ ಮಧ್ಯಪ್ರವೇಶಿಸಬೇಕು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತು ಸರ್ಕಾರದಿಂದ ವರದಿ ಪಡೆಯಲಿ: ಬಿ. ವೈ. ವಿಜಯೇಂದ್ರ
ರಾಜ್ಯಪಾಲರು ಕೂಡಲೇ ಮಧ್ಯಪ್ರವೇಶಿಸಬೇಕು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತು ಸರ್ಕಾರದಿಂದ ವರದಿ ಪಡೆಯಲಿ: ಬಿ. ವೈ. ವಿಜಯೇಂದ್ರ

ನ್ಯೂಸ್ MORE NEWS...