ಕುತೂಹಲ ಮೂಡಿಸಿದ ಇಂದ್ರಜಿತ್ ಲಂಕೇಶ್, ಕುಮಾರಸ್ವಾಮಿ ಭೇಟಿ, ಫೋಟೋ ವೈರಲ್! | ಜನತಾ ನ್ಯೂಸ್
ಬೆಂಗಳೂರು : ಇಂದ್ರಜಿತ್ ಲಂಕೇಶ್ ಮತ್ತು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಭೇಟಿ ಆಗಿರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ದರ್ಶನ್ ಅಭಿಮಾನಿಗಳು ಹರಿಬಿಟ್ಟಿದ್ದು, ದರ್ಶನ್ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಳ್ಳುವ ಲಕ್ಷಣಗಳು ಕಾಣಿಸಿಕೊಳ್ಳುತ್ತಿದೆ.
ನಿರ್ದೇಶಕ ಇಂದ್ರಜಿತ್ ಲಂಕೇಶ್ ಮಾಜಿ ಸಿಎಂ ಹೆಚ್ಡಿಕೆ ಅವರ ಭೇಟಿ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.
ಇಂದ್ರಜಿತ್ ಲಂಕೇಶ್ ಅವರು ಈ ಹಿಂದೆ ಮಂಡ್ಯ ಸಂಸದೆ ಸುಮಲತಾ ಅವರನ್ನು ಟೀಕೆ ಮಾಡಿದ್ದರು. ಎಲ್ಲಿದ್ದೀಯಾ ಸುಮಲತಾ…ಕರೊನಾ ಸಮಯದಲ್ಲಿ ಜನರ ಜತೆ ಇರೋದು ಬಿಟ್ಟು ಎಲ್ಲಿ ಹೋಗಿದ್ದೀಯಾ? ಕರೊನಾ ಸಮಯದಲ್ಲಿ ಮಂಡ್ಯ ಸ್ವಾಭಿಮಾನಿ ಜನ ಮರೆತುಹೋದ್ರಾ ಎಂದು ಇಂದ್ರಜಿತ್ ಟೀಕೆ ಮಾಡಿದ್ದರು.
ಲಂಕೇಶ್ ಆರೋಪಗಳಿಂದ ಕೆಂಡಾಮಂಡಲರಾಗಿರುವ ದರ್ಶನ್ ಅಭಿಮಾನಿಗಳು ಲಂಕೇಶ್ ವಿರುದ್ಧ ಗರಂ ಆಗಿದ್ದಾರೆ. ಇದೀಗ ಲಂಕೇಶ್ ಮತ್ತು ಮಾಜಿ ಸಿಎಂ ಎಚ್ಡಿಕೆ ಭೇಟಿ ಆಗಿರುವ ಫೋಟೋಗಳನ್ನು ಅಭಿಮಾನಿಗಳು ಟ್ರೋಲ್ ಮಾಡುತ್ತಿದ್ದಾರೆ. ವೇಟರ್ ಮೇಲೆ ಹಲ್ಲೆ ಮಾಡಿದ್ದಾರೆಂದು ಆರೋಪ ಮಾಡಿ, ಇಂದ್ರಜಿತ್ ಎಚ್ಡಿಕೆ ಭೇಟಿಯಾಗಿದ್ದಾರೆ ಎಂದು ದೂರಿದ್ದಾರೆ. ಪರೋಕ್ಷವಾಗಿ ಇದರ ಹಿಂದೆ ಎಚ್ಡಿಕೆ ಇದ್ದಾರೆ ಎಂದು ಆರೋಪಿಸಿದ್ದಾರೆ.
ಇಂದ್ರಜಿತ್ ಲಂಕೇಶ್ದಿಂದ ಕುಮಾರಸ್ವಾಮಿ ಗೃಹ ಸಚಿವರಿಗೆ ದೂರು ಕೊಡಿಸಿದರಾ ಎಂಬ ಪ್ರಶ್ನೆ ಕಾಡುತ್ತಿದೆ. ಜೊತೆಗೆ ಸುಮಲತಾಗೆ ಬೆನ್ನೆಲುಬಾಗಿ ನಿಂತಿರುವ ದರ್ಶನ್ನನ್ನು ಕಟ್ಟಿ ಹಾಕಿದ್ರೆ ಸುಮಲತಾ ಸುಮನ್ನೆ ಹಾಕ್ತಾರಾ ಅಥವಾ ಸಂಸದೆ ಸುಮಲತಾಗೆ ಟಕ್ಕರ್ ಕೊಡಲೂ ಮಾಜಿ ಸಿಎಂ ಕುಮಾರಸ್ವಾಮಿ ಮಾಸ್ಟರ್ ಪ್ಲಾನ್ ಮಾಡಿದ್ರಾ ಎಂಬುದು ಅನುಮಾನ ಮೂಡುತ್ತಿದೆ. ಇಂದ್ರಜಿತ್ ಲಂಕೇಶ್ ಮಾಜಿ ಸಿಎಂ ಕುಮಾರಸ್ವಾಮಿಯನ್ನು ಯಾವ ಕಾರಣಕ್ಕೆ ಭೇಟಿ ಮಾಡಿದರು ಎಂಬುದರ ಬಗ್ಗೆ ಮುಂದಿನ ದಿನಗಳಲ್ಲಿ ತಿಳಿಯಲಿದೆ.
ಇಂದ್ರಜಿತ್ ಲಂಕೇಶ್-ಕುಮಾರಸ್ವಾಮಿ ಭೇಟಿ ಮಾಡಿರುವ ಫೋಟೋವೊಂದು ವೈರಲ್ ಆಗಿದೆ. ಹೀಗಾಗಿ ದರ್ಶನ್ ವಿರುದ್ಧದ ಆರೋಪದ ಹಿಂದೆ ಕುಮಾರಸ್ವಾಮಿ ಬೆಂಬಲ ಇಂದ್ರಜಿತ್ ಗಿದೆಯೇ ಎಂಬ ಅನುಮಾನ ಮೂಡಿಸಿದೆ. ಆದರೆ ಈಗ ಹರಿದಾಡುತ್ತಿರುವ ಫೋಟೋ ಈಗಿನದ್ದೇ ಅಥವಾ ಹಳೆಯ ಫೋಟೋವೇ ಎಂಬುದು ಸ್ಪಷ್ಟವಾಗಿಲ್ಲ.