Sat,May18,2024
ಕನ್ನಡ / English

ಮಂಗಳೂರು ರ್‍ಯಾಗಿಂಗ್‌ ಪ್ರಕರಣ: 6 ವಿದ್ಯಾರ್ಥಿಗಳ ಬಂಧನ | ಜನತಾ ನ್ಯೂಸ್

16 Jul 2021
3093

ಮಂಗಳೂರು : ನಗರದ ಫಳ್ನೀರ್‌ನ ಇಂದಿರಾ ಕಾಲೇಜಿನಲ್ಲಿ ರ್‍ಯಾಗಿಂಗ್‌ ಪ್ರಕರಣ ಬೆಳಕಿಗೆ ಬಂದಿದ್ದು, ವಿದ್ಯಾರ್ಥಿಗಳಾದ ಶ್ರೀಲಾಲ್, ಶಾಹಿದ್, ಅಮ್ಜದ್, ಜುರೈಜ್, ಹುಸೈನ್, ಲಿಮ್ಸ್ ಅವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಜು.14ರಂದು ರಾತ್ರಿ 8 ಗಂಟೆಗೆ ನಗರದ ಫಳ್ನೀರ್ ರಸ್ತೆಯ ಹೊಟೇಲ್‌ವೊಂದಕ್ಕೆ ರ್‍ಯಾಗಿಂಗ್‌ಗೆ ಒಳಗಾದ ಸಂತ್ರಸ್ತ ಮ್ಯಾನುಯಲ್ ಬಾಬು (21) ಎಂಬವರು ತನ್ನ ಸ್ನೇಹಿತರಾದ ಜೋಬಿನ್ ಹಾಗೂ ಶಾಕೀರ್ ಅವರ ಜೊತೆಗೆ ಊಟಕ್ಕಾಗಿ ತೆರಳಿದ್ದಾರೆ.

ಈ ಸಮಯ ಪರಿಚಯಸ್ಥರಾದ ಇಂದಿರಾ ಕಾಲೇಜಿನ ವಿದ್ಯಾರ್ಥಿಗಳಾದ ಶ್ರೀಲಾಲ್, ಜುರೈಜ್, ರಸೆಲ್ ಅವರ ಪೈಕಿ ಶ್ರೀಲಾಲ್ ಸಂತ್ರಸ್ತ ಮ್ಯಾನುಯಲ್‌ನ್ನು ಉದ್ದೇಶಿಸಿ, "ಏನು ಮುಖ ನೋಡುತ್ತಿಯಾ, ನೀವು ಜೂನಿಯರ್‌ಗಳು, ನಾವು ಬರುವಾಗ ಎದ್ದು ನಿಂತು ಗೌರವ ಕೊಡಬೇಕು" ಎಂದು ರ್‍ಯಾಗಿಂಗ್‌ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ನಂತರ ರಾತ್ರಿ 10:30ರ ಸುಮಾರಿಗೆ ಅತ್ತಾವರದ ಅಪಾರ್ಟ್‌ಮೆಂಟ್‌ನ ರೂಮಿನಲ್ಲಿ ಮ್ಯಾನುಯಲ್ ಇದ್ದ ಸಂದರ್ಭ ಆರು ಆರೋಪಿಗಳು ಮಾರಕಾಯುಧ ಸಹಿತ ಆಗಮಿಸಿದ್ದಾರೆ.

ಏಕಾಏಕಿ ರೂಮನ್ನು ಪ್ರವೇಶಿಸಿದ ಆರೋಪಿಗಳು ಈತನಿಗೆ ಪುನಃ ನಿಂದಿಸಿದ್ದಾರೆ. ಬಳಿಕ ಬಟ್ಟೆಗಳನ್ನು ತೆಗೆದು ಒಳವಸ್ತ್ರದಲ್ಲಿ ನಿಲ್ಲಲು, ಪದೇಪದೇ ಕುಳಿತುಕೊಳ್ಳಲು, ಎದ್ದುನಿಲ್ಲಲು ಹೇಳಿದ್ದಾರೆ. ಇದಕ್ಕೆ ಒಪ್ಪದೇ ಇದ್ದಾಗ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆಗೈದಿದ್ದಾರೆ. ಅಲ್ಲದೆ, ಆರೋಪಿಗಳು ಜೀವ ಬೆದರಿಕೆಯನ್ನೂ ಒಡ್ಡಿದ್ದರು ಎನ್ನಲಾಗಿದೆ.

ಹಲ್ಲೆಯಿಂದ ಗಾಯಗೊಂಡಿದ್ದ ವಿದ್ಯಾರ್ಥಿಗಳು ವೆನ್ಲಾಕ್‌ ಆಸ್ಪತ್ರೆಯಲ್ಲಿ ಹೊರರೋಗಿಯಾಗಿ ಚಿಕಿತ್ಸೆ ಪಡೆದಿದ್ದು, ಆರೋಪಿಗಳಿಗೆ ಹೆದರಿ ಆಸ್ಪತ್ರೆಯಿಂದ ತೆರಳಿದ್ದರು. ಮನೆಗೆ ಹೋಗಿ ತಿಳಿಸಿದಾಗ, ಪಾಲಕರು ದೂರು ಕೊಡುವಂತೆ ಸಲಹೆ ನೀಡಿದ್ದರು. ಅದರಂತೆ ರ್‍ಯಾಗಿಂಗ್‌ಗೆ ಒಳಗಾದ ವಿದ್ಯಾರ್ಥಿಗಳು ಪಾಂಡೇಶ್ವರ ಠಾಣೆಗೆ ದೂರು ನೀಡಿದ್ದರು.

RELATED TOPICS:
English summary :Mangalore

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...