ಯಡಿಯೂರಪ್ಪರನ್ನು ಅವಧಿ ಪೂರ್ಣಗೊಳಿಸಲು ಬಿಡಬೇಕು - ಸಿದ್ದಗಂಗಾ ಶ್ರೀಗಳು | ಜನತಾ ನ್ಯೂಸ್
ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಅವರು ಕಳೆದ ವಾರ ಪ್ರಧಾನಿ ನರೇಂದ್ರ ಮೋದಿಯವರ ಭೇಟಿಯ ನಂತರ ಪದಚ್ಯುತಿಯ ವದಂತಿಗಳ ಒತ್ತಡಕ್ಕೆ ಒಳಗಾಗಿದ್ದು ಸದ್ಯಕ್ಕೆ, ಕಾರ್ಯನಿರತ ವೇಳಾಪಟ್ಟಿಯನ್ನು ಇಟ್ಟುಕೊಂಡಿದ್ದಾರೆ ಮತ್ತು ಲಿಂಗಾಯತ ಮಠಾಧೀಶರ ಮತ್ತು ಮಾಜಿ ಕಾಂಗ್ರೆಸ್ ಸಚಿವರ ಬೆಂಬಲವನ್ನು ಹೆಚ್ಚಿಸಿಕೊಳ್ಳುತ್ತಿದ್ದಾರೆ.
ಇಂದು ಬುಧವಾರ ಸಿದ್ದಗಂಗಾ ಮಠಾಧೀಶರ ಜತೆ ಇತರ ಸ್ವಾಮೀಜಿಗಳು ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ರಾಜಕೀಯದ ಬಗ್ಗೆ ಚರ್ಚಿಸಿ, ಅವರಿಗೆ ಬೆಂಬಲ ಸೂಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಿದ್ದಗಂಗಾ ಶ್ರೀಗಳು, ಬಿಜೆಪಿ ವರಿಷ್ಠರು ಯಡಿಯೂರಪ್ಪ ಅವರನ್ನು ಅವಧಿಯ ಮಧ್ಯದಲ್ಲೇ ಕೈ ಬಿಡುವುದು ಸರಿಯಲ್ಲ. ಸಂಕ್ರಾಮಿಕ ಕರೋನಾ ಮಧ್ಯೆ ಕೆಲಸ ಮಾಡಲು ಸಾಧ್ಯವಾಗಲಿಲ್ಲ. ಅವಧಿ ಪೂರ್ಣಗೊಳಿಸಲು ಬಿಡಬೇಕು, ಎಂದು ತಿಳಿಸಿದ್ದಾರೆ.
ಯಡಿಯೂರಪ್ಪ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಅವರು ಪೂರ್ಣಾವಧಿ ಸಿಎಂ ಆಗಿರಬೇಕೆಂಬುದು ಎಲ್ಲ ಮಠಾಧೀಶರ ಆಶಯವಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ನಮ್ಮ ಜತೆ ಚರ್ಚಿಸುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಷಾ ಬಗ್ಗೆ ವಿಶೇಷ ಕಾಳಜಿ ವ್ಯಕ್ತಪಡಿಸಿದ್ದಾರೆ, ಎಂದರು.
ಬಿಜೆಪಿಯಲ್ಲಿ 75 ವರ್ಷ ಮೀರಿದ ಯಾವುದೇ ವ್ಯಕ್ತಿಗೆ ಅಧಿಕಾರ ನೀಡಿಲ್ಲ. ಇಡೀ ದೇಶದಲ್ಲಿ ನನಗೆ ಮಾತ್ರ ಪಕ್ಷ ವಿಶೇಷ ಅವಕಾಶ ಮಾಡಿಕೊಟ್ಟಿದೆ, ಎಂದು ಹೇಳಿದ್ದಾರೆ. ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ. ನಮ್ಮ ಇಚ್ಚೆ ಏನೆಂದರೆ, ಅವಧಿ ಮುಗಿಯುವವರೆಗೆ ಯಡಿಯೂರಪ್ಪ ಶಿಕರದಲ್ಲಿ ಮುಂದುವರೆಸಬೇಕೆಂಬುದಷ್ಟೇ ನಮ್ಮ ಆಶಯ, ಎಂದು ಶ್ರೀಗಳು ತಿಳಿಸಿದ್ದಾರೆ.