ಪ್ರಯಾಣಿಕರೇ ಗಮನಿಸಿ: ಚಾರ್ಮಾಡಿ ಘಾಟಿ ವಾಹನ ಸಂಚಾರ ಸಂಜೆ 7ರಿಂದ ಬೆಳೆಗ್ಗೆ 6ರವರೆಗೆ ಬಂದ್ | ಜನತಾ ನ್ಯೂಸ್
ಚಿಕ್ಕಮಗಳೂರು : ಚಾರ್ಮಾಡಿ ಘಾಟ್ನಲ್ಲಿ ವಾಹನಗಳ ಹೆಚ್ಚಳ ಹಿನ್ನೆಲೆ, ಚಾರ್ಮಾಡಿ ಘಾಟ್ನಲ್ಲಿ ರಾತ್ರಿ ವೇಳೆ ವಾಹನ ಸಂಚಾರ ಬಂದ್ ಮಾಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಮಳೆ ಹಾಗೂ ರಸ್ತೆ ಕುಸಿತ ಕಾರಣದಿಂದ ಶಿರಾಡಿ ಘಾಟ್ ಸಂಚಾರ ಬಂದ್ ಆಗಿದೆ. ಈ ಹಿನ್ನೆಲೆಯಲ್ಲಿ ಚಾರ್ಮಾಡಿ ಘಾಟ್ ಮಾರ್ಗವಾಗಿ ವಾಹನಗಳು ಸಂಚಾರ ನಡೆಸುತ್ತಿವೆ. ಬಹುತೇಕ ವಾಹನಗಳು ಚಾರ್ಮಾಡಿ ಘಾಟ್ ಮೂಲಕ ಸಂಚರಿಸುತ್ತಿರುವ ಕಾರಣದಿಂದ ವಾಹನ ದಟ್ಟಣೆ ಹೆಚ್ಚಾಗಿದೆ. ಚಾರ್ಮಾಡಿ ಘಾಟ್ನಲ್ಲಿ ವಾಹನಗಳ ಹೆಚ್ಚಳ ಹಿನ್ನೆಲೆ, ಚಾರ್ಮಾಡಿ ಘಾಟ್ನಲ್ಲಿ ರಾತ್ರಿ ವೇಳೆ ವಾಹನ ಸಂಚಾರ ಬಂದ್ ಮಾಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಭಾರಿ ಮಳೆಯಿಂದ ಭೂ ಕುಸಿತ ಸಂಭವಿಸಿದ ಹಿನ್ನೆಲೆಯಲ್ಲಿ ಶಿರಡಿ ಘಾಟ್ ರಸ್ತೆಯನ್ನು ಬಂದ್ ಮಾಡಿದ ಹಿನ್ನೆಲೆಯಲ್ಲಿ ಚಾರ್ಮಾಡಿ ಘಾಟಿಯಲ್ಲಿ ವಾಹನ ದಟ್ಟಣೆ ಹೆಚ್ಚಾದ ಪರಿಣಾಮ ಕೆಲವೊಂದು ಕಡೆಗಳಲ್ಲಿ ಭೂ ಕುಸಿತ ಸಂಭವಿಸಿದ್ದು ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಾತ್ರಿ 7 ರಿಂದ ಬೆಳಿಗ್ಗೆ 6 ರ ವರೆಗೆ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಯಾವುದೇ ವಾಹನ ಸಂಚಾರ ಮಾಡದಂತೆ ಬಂದ್ ಮಾಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್ ರಮೇಶ್ ಆದೇಶ ಹೊರಡಿಸಿದ್ದಾರೆ.
ಕೆಎಸ್ಆರ್ಟಿಸಿ ಸಾಮಾನ್ಯ ಬಸ್, ಲಾರಿ, ಟೆಂಪೊ ಟ್ರಾವಲರ್, ಆಂಬುಲೆನ್ಸ್, ಕಾರು, ಜೀಪು, ವ್ಯಾನ್, ಮಿನಿ ವ್ಯಾನ್, ದ್ವಿಚಕ್ರ ವಾಹನಗಳು ಬೆಳಿಗ್ಗೆ 6ರಿಂದ ಸಂಜೆ 7 ಗಂಟೆವರೆಗೆ ಸಂಚರಿಸಲು ಅವಕಾಶ ಇದೆ. ಭಾರಿ ವಾಹನಗಳ ಸಂಚಾರಕ್ಕೆ ಪೂರ್ಣ ನಿರ್ಬಂಧಿಸಲಾಗಿದೆ. ಈ ನಿರ್ಬಂಧವು ಮುಂದಿನ ಆದೇಶದವರೆಗೆ ಜಾರಿಯಲ್ಲಿ ಇರುತ್ತದೆ ಎಂದು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಆದೇಶದಲ್ಲಿ ತಿಳಿಸಿದ್ದಾರೆ.