ದಾವಣಗೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ! | ಜನತಾ ನ್ಯೂಸ್
ದಾವಣಗೆರೆ : ನಗರದ ಆಂಜನೇಯ ಕಾಟನ್ ಮಿಲ್ ಪ್ರದೇಶದಲ್ಲಿ ಸಹೋದರಿಯಬ್ಬರ ಮೃತದೋಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಗೌರಮ್ಮ(34) ಮತ್ತು ರಾಧಮ್ಮ(32) ಮೃತ ಸಹೋದರಿಯರು. ಕೂಡ್ಲಿಗಿ ತಾಲೂಕು ಬೆನಕನಹಳ್ಳಿ ಗ್ರಾಮದ ಇವರಿಬ್ಬರೂ ಆಂಜನೇಯ ಕಾಟನ್ ಮಿಲ್ನಲ್ಲಿ ಕಾರ್ಮಿಕರಾಗಿದ್ದರು. ಗೌರಮ್ಮನ ಜತೆ ತಂಗಿ ರಾಧಮ್ಮ ಕಳೆದ 10 ವರ್ಷದಿಂದ ವಾಸವಿದ್ದಳು. ಗೌರಮ್ಮಗೆ ಮದುವೆ ಆಗಿದ್ದು, ಗಂಡ ಮಂಜುನಾಥ ಬೇರೆಡೆ ಕೆಲಸ ಮಾಡುತ್ತಿದ್ದ.
ಬಾಡಿಗೆ ಮನೆಯಲ್ಲಿ ವಾಸವಿದ್ದ ಈ ಸಹೋದರಿಯರು ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲ್ಲೂಕಿನ ಬೆನಕನಹಳ್ಳಿ ಮೂಲದವರಾಗಿದ್ದು, ಇಬ್ಬರ ಶವವೂ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಆಂಜನೇಯ ಕಾಟನ್ ಮಿಲ್ನಲ್ಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಗೌರಮ್ಮ ಹಾಗೂ ರಾಧಮ್ಮ ಕೆಲ ತಿಂಗಳ ಹಿಂದೆಯಷ್ಟೇ ಕೆಲಸಕ್ಕೆ ಸೇರಿಕೊಂಡಿದ್ದರು ಎಂದು ತಿಳಿದುಬಂದಿದೆ.
ಕಳೆದ ಐದಾರು ದಿನಗಳಿಂದ ಮನೆಯಿಂದ ಹೊರ ಬಂದಿರಲಿಲ್ಲ, ಅಲ್ಲದೆ ಈ ಇಬ್ಬರು ಸಹೋದರಿಯರು ವಾಸವಾಗಿದ್ದ ಮನೆಯಿಂದ ಕೆಟ್ಟ ವಾಸನೆ ಬರುತ್ತಿದ್ದು, ಇದರಿಂದ ಸ್ಥಳೀಯರು ವಿದ್ಯಾ ನಗರ ಪೊಲೀಸರಿಗೆ ತಿಳಿಸಿದ್ದು, ಪೊಲೀಸರು ಬಂದುಮನೆ ಬಾಗಿಲು ತೆರೆದಾಗ ಪ್ರಕರಣ ಬಯಲಿಗೆ ಬಂದಿದೆ. ಮನೆಯಿಂದ ಕೆಟ್ಟ ವಾಸನೆ ಬರುತ್ತಿದೆ ಎಂದು ನೆರೆಹೊರೆಯವರು ನೀಡಿದ ಮಾಹಿತಿಯನ್ನು ಆಧರಿಸಿ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದಾಗ ಗೌರಮ್ಮ ಹಾಗೂ ರಾಧಮ್ಮ ಇಬ್ಬರ ಶವವೂ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಈ ಸಂಬಂಧ ವಿದ್ಯಾನಗರ ಠಾಣೆಯಲ್ಲಿ ಮೃತರ ಕುಟುಂಬಸ್ಥರು ಕೊಲೆ ಶಂಕೆ ಎಂದು ದೂರು ನೀಡಿದ್ದು, ಗೌರಮ್ಮ ಪತಿ ಮಂಜುನಾಥ್ ಎಂಬುವವರ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ. ಪತಿಯು ಬಂದು ಹೋದ ನಂತರದಲ್ಲಿ ಈ ಇಬ್ಬರೂ ಸಹೋದರಿಯರೂ ಹೊರಗೆ ಬಂದಿಲ್ಲ ಎಂದು ದೂರಲ್ಲಿ ತಿಳಿಸಿದ್ದಾರೆ.
ಗೌರಮ್ಮನಿಗೂ ಆಕೆಯ ಪತಿ ಮಂಜುನಾಥನ ಮಧ್ಯೆ ಆಗಾಗ ಕಲಹ ಆಗುತ್ತಿತ್ತು. ಕಳೆದ ಶುಕ್ರವಾರದವರೆಗೂ ಮಂಜುನಾಥ್ ಎರಡ್ಮೂರು ದಿನಗಳ ಕಾಲ ಆಕೆಯೊಂದಿಗಿದ್ದ ನಂತರ ಅಂದು ರಾತ್ರಿ ಜಗಳ ಮಾಡಿಕೊಂಡಿದ್ದ ಎಂದು ಶಂಖೆ ವ್ಯಕ್ತಪಡಿಸಿದ್ದಾರೆ. ದಾವಣಗೆರೆಯ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.