ರಾಜಕೀಯ ಮುಖ್ಯವಲ್ಲ, ಜನರ ಹಿತವೇ ನನಗೆ ಮುಖ್ಯ: ಎಂ.ಪಿ.ರೇಣುಕಾಚಾರ್ಯ | ಜನತಾ ನ್ಯೂಸ್
ದಾವಣಗೆರೆ : ನಾನು ಯಾವುದೇ ಕಾರಣಕ್ಕೂ ಸಚಿವ ಸ್ಥಾನಕ್ಕಾಗಿ ಲಾಬಿ ಮಾಡಿಲ್ಲ, ಸಚಿವ ಸ್ಥಾನ ಲಾಬಿಗಾಗಿ ದೆಹಲಿಗೆ ತೆರಳುವ ಬದಲಿಗೆ ಹಳ್ಳಿ ಕಡೆ ಮುಖ ಮಾಡಿದ್ದೇನೆ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ತಿಳಿಸಿದರು.
ಇಂದು ಜಿಲ್ಲೆಯ ಹೊನ್ನಾಳಿಯಲ್ಲಿ ಮಾಧ್ಯಮಗಳೊಂದಿದೆ ಮಾತನಾಡಿದ ಅವರು.. ನಾನು ನೇರಾ ನೇರ ರಾಜಕೀಯ ಮಾಡುವವನು, ಬ್ಲ್ಯಾಕ್ ಮೇಲ್ ಮಾಡುವ ವ್ಯಕ್ತಿ ನಾನಲ್ಲ, ನನಗೆ ರಾಜಕೀಯ ಮುಖ್ಯವಲ್ಲ, ಜನರ ಹಿತವೇ ನನಗೆ ಮುಖ್ಯ ಎಂದಿದ್ದಾರೆ.
ರೇಣುಕಾಚಾರ್ಯ ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನಲ್ಲಿ ಅತಿವೃಷ್ಟಿಯಾಗಿರುವ ಪ್ರದೇಶಳಾದ ಮಾರಿಕೊಪ್ಪ, ಹತ್ತೂತು, ದೊಡ್ಡೇರಹಳ್ಳಿ, ಮಾದೇನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಸರ್ಕಾರ ನಿಮ್ಮೊಂದಿಗೆ ಇದೆ ಎಂದು ಜನರಿಗೆ ಭರವಸೆ ನೀಡಿದರು.
ನೂತನ ಸಂಪುಟದಲ್ಲಿ ಸಚಿವ ಸ್ಥಾನದ ಕುರಿತು ಪ್ರತಿಕ್ರಿಯಿಸಿದ ಅವರು , ಈ ಕುರಿತು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಧರ್ಮೆಂದ್ರ ಪ್ರದಾನ್, ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ಅವರಿಗೆ ಪ್ರಾದೇಶಿಕ ಸಮತೋಲನ ಆಧಾರದ ಮೇಲೆ ಜಿಲ್ಲೆಗೆ ಸಚಿವ ಸ್ಥಾನ ಕೊಡಿ ಎಂದು ಕೇಳಿದ್ದೇವೆ. ಸಚಿವ ಸ್ಥಾನ ನೀಡಿದರೆ ಅದನ್ನು ನಿಭಾಯಿಸಲು ನಾನು ಸಿದ್ಧನಿದ್ದೇನೆ ಎಂದು ಹೇಳಿದ್ದಾರೆ.