Sun,May19,2024
ಕನ್ನಡ / English

ವಾಂತಿ ಮಾಡಲು ಹೋದ ಮಹಿಳೆ ಬಸ್​ನಿಂದ ಬಿದ್ದು ಸಾವು! | ಜನತಾ ನ್ಯೂಸ್

06 Aug 2021
3290

ಚಾಮರಾಜನಗರ : ಕೆಎಸ್​ಆರ್​ಟಿಸಿ ಬಸ್ಸಿನ ಬಾಗಿಲು ಬಳಿ ನಿಂತು ವಾಂತಿ ಮಾಡಲು ಹೋದ ಮಹಿಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ಮಲೆಮಹದೇಶ್ವರ ಬೆಟ್ಟದಲ್ಲಿ ಗುರುವಾರ ಸಂಭವಿಸಿದೆ.

ತಾಲೂಕಿನ ಮಲೆ ಮಹದೇಶ್ವರಬೆಟ್ಟ ಸಮೀಪದ ಹಳೆಯೂರು ಗ್ರಾಮದ ಕುಳ್ಳಮಾದಿ(50) ಎಂಬಾಕೆ ಮೃತ ದುರ್ದೈವಿಯಾಗಿದ್ದು, ಈಕೆ ಗುರುವಾರ(ಆಗಸ್ಟ್ 5) ಸಂಜೆ ಮಲೆ ಮಹದೇಶ್ವರಬೆಟ್ಟದಿಂದ ವಡಕೆಹಳ್ಳ ಗ್ರಾಮದ ಸಂಬಂಧಿಕರ ಮನೆಯತ್ತ ಹೊರಡಲು ಕರಾರಸಾಸಂ ಬಸ್ಸು ಹತ್ತಿದ್ದರು.

ಈ ಬಸ್​ ಮೈಸೂರು ಹಾಗೂ ಕೆ.ಆರ್. ಪೇಟೆ ಮಾರ್ಗದತ್ತ ಹೊರಟಿತ್ತು. ಬಸ್​ ಸಂಚರಿಸುತ್ತಿರುವಾಗಲೇ ವಾಂತಿ ಬರುತ್ತಿದೆ ಎಂದು ಬಸ್​ನ ಬಾಗಿಲ ಬಳಿ ಹೋಗಿದ್ದಾಳೆ. ಬೆಟ್ಟದ ಶನೇಶ್ವರಸ್ವಾಮಿ ದೇವಸ್ಥಾನದ ತಿರುವಿನಲ್ಲಿ ಬಸ್​ನಿಂದ ಕೆಳಗೆ ಬಿದ್ದ ಕುಳ್ಳಮಾದಿ ತಲೆಗೆ ತೀವ್ರ ಪೆಟ್ಟಾಗಿ ಸ್ಥಳದಲ್ಲೇ ಕೊನೆಯುಸಿರೆಳೆದರು.

ಆನಂತರ ಮೃತದೇಹವನ್ನು ಅದೇ ವಾಹನದಲ್ಲಿ ಕೊಂಡೊಯ್ದು ಮಲೆ ಮಹದೇಶ್ವರ ಬೆಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನಿಸಿದ್ದಾರೆ. ಬಳಿಕ ಆಕೆಯ ಜೊತೆಯಲ್ಲಿದ್ದ ಸಂಬಂಧಿ ಕೆಂಪಮಾದಮ್ಮ ನೀಡಿದ ದೂರಿನನ್ವಯ ಮ.ಬೆಟ್ಟ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಮೃತದೇಹವನ್ನು ಶವಪರೀಕ್ಷೆ ನಡೆಸಿ ರಾತ್ರಿ ತಡವಾಗಿ ನೀಡಲಾಗಿದೆ. ಕಾಂಡಚಿನ ಭಾಗದಲ್ಲಿ ಇರುವ ಹಳೇಯೂರು ಗ್ರಾಮಕ್ಕೆ ಕೊಂಡು ಹೋಗಲು, ಮೃತನ ಸಂಬಂಧಿಕರು 108ಗೆ ಕರೆ ಮಾಡಿ ಕೇಳಿದಾಗ ಸೇವೆ ವಾಹನ ಲಭ್ಯವಾಗಿಲ್ಲ. ಪ್ರಾಥಮಿಕ ಆರೋಗ್ಯ ತುರ್ತುವಾಹನ ಇದ್ದರೂ‌ ಚಾಲಕನಿಲ್ಲದೆ ಉಪಯೋಗಕ್ಕೆ ಬಂದಿಲ್ಲ.

ಕೊನೆಗೆ ಸಂಬಂಧಿಕರು ಹಾಗೂ ಗ್ರಾಮಸ್ಥರು ಮೃತದೇಹವನ್ನು ಬಟ್ಟೆಯ ನೆನೆಯಲ್ಲಿ ಜೋಕಲಿ ಕಟ್ಟಿಕೊಂಡು ಹೆಗಲ ಮೇಲೆ ಹೋತ್ತು ರಾತ್ರಿ ಸುಮಾರು 8 ಕಿ.ಮೀ ಸಾಗಿ ಗ್ರಾಮ ತಲುಪಿದರು.

ಆರೋಗ್ಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ಉಂಟಾದ ಈ ಅವ್ಯವಸ್ಥೆಗೆ ಸಾರ್ವಜನಿಕವಾಗಿ ಸಾಕಷ್ಟು ಆಕ್ರೋಶ ವ್ಯಕ್ತವಾಗಿದೆ.

RELATED TOPICS:
English summary :Chamarajanagar

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...