ಭಟ್ಕಳದಲ್ಲಿ ಎನ್ಐಎ ದಾಳಿ: ಭಯೋತ್ಪಾದಕರೊಂದಿಗೆ ಸಂಪರ್ಕ, ಮೂವರು ವಶಕ್ಕೆ | ಜನತಾ ನ್ಯೂಸ್
ಭಟ್ಕಳ : ಎರಡು ಮನೆಗಳ ಮೇಲೆ ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಅಧಿಕಾರಿಗಳು ಶುಕ್ರವಾರ ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ಮೂವರನ್ನು ವಶಕ್ಕೆ ಪಡೆದಿದ್ದಾರೆ.
ಐಸಿಸ್ ಉಗ್ರರ ಜೊತೆಗೆ ನಂಟು ಹೊಂದಿದ್ದ ಶಂಕೆಯ ಮೇಲೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಭಟ್ಕಳದ ಉಮರ್ ಸ್ಟ್ರೀಟ್, ಸಾಗರ ರಸ್ತೆಯ ಮನೆ ಮೇಲೆ ದಾಳಿ ನಡೆಸಲಾಗಿದೆ.
ಅಮೀನ್, ಜುಫ್ರಾ ದಾಮುದಿ ಹಾಗೂ ಜವ್ವಾದ್ ಅವರನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು, ರಹಸ್ಯ ಸ್ಥಳದಲ್ಲಿ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಬಂಧಿತರೆಲ್ಲರೂ ಸೋದರ ಸಂಬಂಧಿಗಳಾಗಿದ್ದಾರೆ.
ಭಟ್ಕಳದ ಅಮೀನ್ ಜುವೇಬ್ ಹಾಗೂ ಜವಾದ್ ಇಬ್ಬರನ್ನು ತೀವ್ರ ತನಿಖೆ ನಡೆಸುತ್ತಿದ್ದು, ಈ ಹಿಂದೆ ದುಬೈ ನಲ್ಲಿ ಬಂಧನಕ್ಕೊಳಕ್ಕಾಗಿರುವ ಭಯೋತ್ಪಾದಕ ಓರ್ವನ ತಮ್ಮನನ್ನೂ ಎನ್ಐಎ ವಶಕ್ಕೆ ಪಡೆದಿದೆ.
ದೆಹಲಿಯಿಂದ ಬಂದಿರುವ ಎನ್.ಐ.ಎ ಅಧಿಕಾರಿಗಳಿಗೆ, ಉತ್ತರ ಕನ್ನಡ ಜಿಲ್ಲಾ ಪೊಲೀಸರು ಎನ್.ಐ.ಎ. ಅಧಿಕಾರಿಗಳಿಗೆ ಅಗತ್ಯ ನೆರವು ನೀಡಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದು, ಭದ್ರತೆ ಉಸ್ತುವಾರಿ ನೋಡಿಕೊಂಡಿದ್ದಾರೆ.
ಐಸಿಎಸ್ ಉಗ್ರಗಾಮಿಗಳೊಂದಿಗೆ ಸಂಪರ್ಕದಲ್ಲಿದ್ದ ಮೊಹಮದ್ ಅಮೀನ್, ಉಗ್ರಗಾಮಿ ಚಟುವಟಿಕೆಗಳಿಗೆ ಹಣಕಾಸು ಒದಗಿಸುತ್ತಿದ್ದ. ಬಂಧಿತರು ಸಹ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿ ಹಣ ಸಂಗ್ರಹಿಸುತ್ತಿದ್ದರು ಎಂದು ದೂರಲಾಗಿದೆ.