ವಿಷಾಹಾರ ಸೇವಿಸಿ 49ಕ್ಕೂ ಹೆಚ್ಚು ಜನರು ಅಸ್ವಸ್ಥ | ಜನತಾ ನ್ಯೂಸ್
ದಾವಣಗೆರೆ : ವಿಷಾಹಾರ ಸೇವಿಸಿ 49ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾದ ಘಟನೆ ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಭಾನುವಳ್ಳಿಯಲ್ಲಿ ನಡೆದಿದೆ.
ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಭಾನುವಳ್ಳಿಯಲ್ಲಿ ಖಾಸಗಿ ವ್ಯಕ್ತಿಯೊಬ್ಬರ ತೊಟ್ಟಿಲ ಕಾರ್ಯಕ್ರಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ಮಕ್ಕಳು, ವಯಸ್ಕರು ಸೇರಿ 49 ಮಂದಿ ಅಸ್ವಸ್ಥರಾಗಿದ್ದಾರೆ. ಎಲ್ಲರನ್ನೂ ಹರಿಹರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅದೃಷ್ಟವಷಾತ್ ಯಾವುದೇ ಪ್ರಾಣಾಪಾಯವಾಗಲಿಲ್ಲ.
ನಿನ್ನೆ ರಾತ್ರಿ ತೊಟ್ಟಿಲು ಕಾರ್ಯಕ್ರಮ ಹಿನ್ನೆಲೆ ಸಿಹಿ ಅಡುಗೆ ಮಾಡಲಾಗಿತ್ತು. ಸಿಹಿ ಅಡುಗೆ ಸೇವಿಸಿದ 45ಕ್ಕೂ ಹೆಚ್ಚು ಜನರಿಗೆ ವಾಂತಿ ಉಂಟಾಗಿದೆ. ತಕ್ಷಣವೇ ಹರಿಹರದ ಸಾರ್ವಜನಿಕ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಗಿದೆ. ಮಲೆಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.