ಸಮಸ್ಯೆ ಉದ್ಭವಿಸುತ್ತಲೇ BSY ಮೊರೆ ಹೋದ ಸಿಎಂ | ಜನತಾ ನ್ಯೂಸ್
ಬೆಂಗಳೂರು : ಪ್ರವಾಸೋದ್ಯಮ ಮತ್ತು ಪರಿಸರ ಖಾತೆ ನೀಡುವುದಕ್ಕೆ ಅಸಮಾಧಾನಗೊಂಡಿರುವ ಸಚಿವ ಆನಂದ್ ಸಿಂಗ್ ರಾಜೀನಾಮೆ ಮುಂದಾಗಿದ್ದಾರೆ.
ಆನಂದ್ ಸಿಂಗ್ ವಿಚಾರವಾಗಿ ಬಿಎಸ್ವೈ ಜೊತೆಯಲ್ಲಿ ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದಾರೆ. ಮಧ್ಯಪ್ರವೇಶ ಮಾಡಿ ಆನಂದ್ ಸಿಂಗ್ ಮನವೊಲಿಸುವಂತೆ ಮನವಿ ಮಾಡಿದ್ದಾರೆ. ಬಿಎಸ್ವೈ ಸೂಚನೆಯಂತೆ ಸಚಿವ ಆರ್.ಅಶೋಕ್ ಮತ್ತು ಸಿಂಗ್ ಆಪ್ತರಾದ ಶಾಸಕ ರಾಜುಗೌಡ ಮಾತುಕತೆ ನಡೆಸಿ ಯಡಿಯೂರಪ್ಪ ನೀಡಿರುವ ಸಂದೇಶವನ್ನು ತಲುಪಿಸಿ ಮನವೊಲಿಸಿದ್ದಾರೆ. ಹಾಗಾಗಿಯೇ, ಆನಂದ್ ಸಿಂಗ್ ರಾಜೀನಾಮೆ ನಿರ್ಧಾರಕ್ಕೆ ಬಂದು ನಂತರ ಯೂ ಟರ್ನ್ ಆಗಿದ್ದಾರೆ.
ಮಾಜಿ ಸಿಎಂ ಯಡಿಯೂರಪ್ಪ ಬಳಿ ಆನಂದ್ ಸಿಂಗ್ ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ. ನಿಮ್ಮ ಆಶೀರ್ವಾದದಿಂದ ನಾನು ಮಂತ್ರಿಯಾದೆ. ವಿಜಯನಗರ ಸಾಮ್ರಾಜ್ಯದ ವೈಭವ ಉಳಿಸಲು, ಪ್ರತ್ಯೇಕ ಜಿಲ್ಲೆ ರಚನೆ ಮಾಡಿ ಘೋಷಣೆ ಮಾಡಿದ್ದೀರ. ಆದ್ರೆ ನಿಮ್ಮ ಅವಧಿಯಲ್ಲಿ ಎರಡು ಬಾರಿ ಸಚಿವ ಸ್ಥಾನ ಬದಲಾವಣೆ ಮಾಡಿದಿರಿ. ಆದರೂ ನಾನು ನಿಮಗಾಗಿ ಏನೂ ಮಾತನಾಡಲಿಲ್ಲ. ಆದರೆ ಈಗ ನನಗೆ ಅನ್ಯಾಯ ಆಗಿದೆ, ಉತ್ತಮ ಖಾತೆಯ ನಿರೀಕ್ಷೆಯಲ್ಲಿದ್ದೆ. ಆದರೆ ಪ್ರವಾಸೋದ್ಯಮ ಮತ್ತು ಪರಿಸರ ಖಾತೆ ನೀಡಿದ್ದಾರೆ. ಇದು ನನಗೆ ಬೇಸರ ತರಿಸಿದೆ. ಹೀಗಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡೋದಾಗಿ ಸಿಎಂ ಬೊಮ್ಮಾಯಿ ಬಳಿ ಹೇಳಿದ್ದೇನೆ, ಅವರು ಸ್ವಲ್ಪ ದಿನ ಕಾಯುವಂತೆ ಹೇಳಿದ್ದಾರೆ ಅಂತ ಬಿಎಸ್ವೈ ಬಳಿ ಆನಂದ್ ಸಿಂಗ್ ಹೇಳಿದ್ದಾರೆ.
ಯಡಿಯೂರಪ್ಪ ಸೂಚನೆಯಂತೆ ಆನಂದ್ ಸಿಂಗ್ಗೆ ಬುಲಾವ್ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ, ಕುಳಿತು ಮಾತನಾಡು ಮೂಲಕ ಅತೃಪ್ತಿ ಶಮನಕ್ಕೆ ಮುಂದಾಗಿದ್ದಾರೆ. ಸಿಂಗ್ ಮಾತುಕತೆಗೆ ಒಪ್ಪಿಕೊಳ್ಳದಿದ್ದಲ್ಲಿ ನಂತರ ಹೈಕಮಾಂಡ್ ನಾಯಕರ ಜೊತೆ ಮಾತುಕತೆ ನಡೆಸಲು ಸಿಎಂ ನಿರ್ಧರಿಸಿದ್ದಾರೆ.