Sat,Apr27,2024
ಕನ್ನಡ / English

ತಾಯಿಯ ಹಲ್ಲಿನ ಸೆಟ್ ಮುರಿದಿದ್ದಕ್ಕೆ ಬರ್ಬರವಾಗಿ ಬಾಲಕಿ ಹತ್ಯೆ; ಆರೋಪಿ ಬಂಧನ | ಜನತಾ ನ್ಯೂಸ್

16 Aug 2021
2000

ವಿಜಯಪುರ : ತಾಯಿಯ ಹಲ್ಲಿನ ಸೆಟ್ ನಾಶ ಮಾಡಿದಳೆಂಬ ಕಾರಣಕ್ಕೆ ವಿಕೃತ ಯುವಕನೊಬ್ಬ ಆರು ವರ್ಷದ ಬಾಕಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸುವಲ್ಲಿ ಜಿಲ್ಲೆಯ ಪೊಲೀಸರು ಯಶಸ್ವಿಯಾಗಿದ್ದಾರೆ.

ಇಂಡಿ ತಾಲೂಕಿನ ಬೋಳೆಗಾಂವ್ ಗ್ರಾಮದ ದೇವಸ್ಥಾನದ ಬಳಿ ಆಗಸ್ಟ್ 9ಕ್ಕೆ ಇದ್ದಕ್ಕಿಂದಂತೆ 6 ವರ್ಷದ ಬಾಲಕಿ ಕಾಣೆಯಾಗಿದ್ದಳು. ಎರಡು ದಿನಗಳ ಬಳಿಕ ಹಳ್ಳದಲ್ಲಿ ಶವವಾಗಿ ಪತ್ತೆಯಾಗಿದ್ದಳು. ಬಾಲಕಿಯನ್ನು ಅತ್ಯಾಚಾರಗೈದು ಕೊಲೆ ಮಾಡಿದ್ದ ಶಂಕೆ ವ್ಯಕ್ತವಾಗಿತ್ತು. ಸೂಕ್ಷ್ಮವಾಗಿ ಪ್ರಕರಣವನ್ನು ಬೇಧಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಆಗಸ್ಟ್ 9ಕ್ಕೆ ಗ್ರಾಮದ ಆಂಜನೇಯನ ದೇವಸ್ಥಾನದ ಎದುರು ಇಬ್ಬರು ಅಪ್ರಾಪ್ತ ವಯಸ್ಸಿನ ಸಹೋದರಿಯರು ಆಟವಾಡುತ್ತಿದ್ದರು. ಬಳಿಕ ಇಬ್ಬರಲ್ಲಿ ಓರ್ವ ಬಾಲಕಿ ಮಾತ್ರ ಮನೆಗೆ ವಾಪಸ್ ಹೋಗಿದ್ದಾಳೆ. ನಿನ್ನ ತಂಗಿ ಎಲ್ಲಿ ಮನೆಗೆ ಬರಲಿಲ್ವಾ ಎಂದು ಮನೆಯವರು ಪ್ರಶ್ನೆ ಮಾಡಿ, ವಾಪಸ್ ಹೋಗಿ ಆಕೆಯನ್ನು ಕರೆದುಕೊಂಡು ಬಾ ಅಂತ ಹೇಳುತ್ತಾರೆ. ತಂಗಿಯನ್ನು ಕರೆಯಲು ಅಪ್ರಾಪ್ತ ವಯಸ್ಸಿನ ಅಕ್ಕ ವಾಪಸ್ ದೇವಸ್ಥಾನದ ಬಳಿ ಹೋದಾಗ ಅಲ್ಲಿ ತಂಗಿ ಇರಲಿಲ್ಲ. ತಂಗಿ ಅಲ್ಲಿಲ್ಲಾ ಎಂದು ಮನೆಯಲ್ಲಿ ಬಾಲಕಿ ಹೇಳಿದಾಗ ಮನೆ ಮಂದಿಯೆಲ್ಲಾ 6 ವರ್ಷದ ಅಪ್ರಾಪ್ತೆಯನ್ನು ಹುಡುಕಾಡಿದ್ದಾರೆ. ಎಲ್ಲಿಯೂ ಬಾಲಕಿ ಕಾಣದಿದ್ದಾಗ ಹೊರ್ತಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ಪೊಲೀಸರು ತನಿಖೆ ನಡೆಸಿ ಅಪ್ರಾಪ್ತೆಗಾಗಿ ಶೋಧ ಕಾರ್ಯ ನಡೆಸಿದ್ದರು. ಕಾಣೆಯಾಗಿ ಎರಡು ದಿನಗಳ ಬಳಿಕ ಗ್ರಾಮದ ಹೊರ ಭಾಗದ ಹಳ್ಳದಲ್ಲಿ ಬಾಲಕಿ ಶವ ಪತ್ತೆಯಾಗಿದ್ದಳು. ಹಗ್ಗದಿಂದ ಕೈ ಕಾಲು ಕಟ್ಟಿ ಹಾಕಿ, ಬಾಯಿಗೆ ಬಟ್ಟೆ ಹಾಕಿರುವ ಸ್ಥಿತಿಯಲ್ಲಿ ಶವ ಪತ್ತೆಯಾಗಿತ್ತು.

ಪ್ರಕರಣ ದಾಖಲಿಸಿಕೊಂಡು ಇಂಡಿ ಡಿಎಸ್ ಪಿ ಶ್ರೀಧರ ದೊಡ್ಡಿ ನೇತೃತ್ವದಲ್ಲಿ ತನಿಖೆ ಇಳಿದ ಇಂಡಿ ಸಿಪಿಐ ರಾಜಶೇಖರ, ಹೊರ್ತಿ ಎಸ್.ಐ ಎನ್.ಬಿ.ಶಿವುರ ತಂಡ ರಚನೆ ಮಾಡಿ ಆರೋಪಿಯ ಬಂಧನಕ್ಕೆ ಜಾಲ ಬೀಸಿತ್ತು.

ಓಣಿ ನಿವಾಸಿ ಬಾಲಕಿ ಆಟವಾಡುವಾಗ ಮನೆಯ ಕಟ್ಟೆಯ ಮೇಲೆ ಇಟ್ಟಿದ್ದ ಸಂಗನಗೌಡನ ತಾಯಿ ತನ್ನ ಹಲ್ಲಿನ ಸೆಟ್ ಮುರಿದಿದ್ದಳಂತೆ. ಊಟ ಮಾಡಲು ಸಂಕಟ ಪಡಲು ಈ ಬಾಲಕಿಯೇ ಕಾರಣ ಎಂದು ಸಿಟ್ಟಿನಿಂದ ಆಕೆಯನ್ನು ಅಪಹರಿಸಿ, ಹತ್ಯೆ ಮಾಡಿ, ಸಾಕ್ಷಿ-ಪುರಾವೆ ನಾಶ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಆರೋಪಿ ಸಂಗನಗೌಡ ಬಾಲಕಿಯನ್ನು ಪುಸಲಾಯಿಸಿ ತನ್ನ ಜಮೀನಿಗೆ ಕರೆದುಕೊಂಡು ಹೋಗಿದ್ದನಂತೆ. ಅಲ್ಲಿ ಬಟ್ಟೆಯಿಂದ ಬಾಯಿ ಮೂಗು ಒತ್ತಿ ಹಿಡಿದು ಪ್ರಜ್ಞೆ ತಪ್ಪಿಸಿದ್ದಾನೆ. ನಂತರ ಕೈಕಾಲು ಕಟ್ಟಿ ಗೋಣಿ ಚೀಲದಲ್ಲಿ ಹಾಕಿದ್ದಾನೆ. ಜಮೀನಿನ ಪಕ್ಕದ ಹಳ್ಳಕ್ಕೆ ತೆಗೆದುಕೊಂಡು ಹೋಗಿ ಬಿದಿರು ಬಡಿಗೆಯಿಂದ ಅಪ್ರಾಪ್ತೆಯ ತಲೆಗೆ ಹೊಡೆದಿದ್ದಾನೆ.

ಸಂಗನಗೌಡ ಬಾಬುಗೌಡ ಬಿರಾದಾರ (24 ವ) ವಿಚಾರಣೆ ನಡೆಸಿದಾಗ ತಾನೇ ಹತ್ಯೆ ಮಾಡಿದ್ದನ್ನು ಒಪ್ಪಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

RELATED TOPICS:
English summary :Vijayapura

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...