ಕಾರಿನ ಮೇಲೆ ಒಂಟಿ ಸಲಗ ದಾಳಿ; ಮೂವರಿಗೆ ಗಂಭೀರ ಗಾಯ | ಜನತಾ ನ್ಯೂಸ್
ಚಿಕ್ಕಮಗಳೂರು : ಕಾರಿನಲ್ಲಿ ಹೋಗುತ್ತಿದ್ದವರ ಮೇಲೆ ಒಂಟಿ ಸಲಗ ದಾಳಿ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕುಂದೂರು ಬಳಿ ನಡೆದಿದೆ. ಕಾಡಾನೆ ದಾಳಿಯಿಂದ ಮೂವರು ಗಾಯಗೊಂಡಿದ್ದು, ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ.
ಚಿಕ್ಕಮಗಳೂರು ತಾಲೂಕಿನ ಜೋಳದಾಳು ಗ್ರಾಮದ ನಾಲ್ವರು ಓಮ್ನಿಯಲ್ಲಿ ಹೊರನಾಡಿಗೆ ಹೋಗುವಾಗ ಭೈರೇಗುಡ್ಡ ಕ್ರಾಸ್ ಬಳಿ ಏಕಾಏಕಿ ಅಡ್ಡ ಬಂದ ಒಂಟಿ ಸಲಗ ದಾಳಿ ಮಾಡಿದೆ. ಕಾರಿನಲ್ಲಿದ್ದ ನಾಲ್ವರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದ್ದರೆ, ಮೂವರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಒಂಟಿ ಸಲಗ ದಾಳಿ ಮಾಡುತ್ತಿದ್ದಂತೆ ಕಾರಿನಲ್ಲಿದ್ದವರು ಕಾರಿನಿಂದ ಇಳಿದು ಓಡಿ ಹೋಗಿದ್ದಾರೆ.
ಒಮ್ನಿ ಕಾರಿನಲ್ಲಿ ಜೋಳ್ದಾಳ್ನಿಂದ ಹೊರನಾಡು ದೇವಸ್ಥಾನದ ಕಡೆಗೆ 9 ಮಂದಿ ಪ್ರಯಾಣ ಬೆಳೆಸುತ್ತಿದ್ದರು. ಈ ವೇಳೆ ಕಾಡಾನೆ ಮಧ್ಯೆ ದಾರಿಯಲ್ಲಿ ಏಕಾಏಕಿ ಅಡ್ಡಬಂದಿದೆ. ಗಾಬರಿಯಿಂದ ಕಾರನ್ನ ರಿವರ್ಸ್ ತೆಗೆಯುವ ವೇಳೆ ಓಡಿಸಿಕೊಂಡ ಬಂದ ಒಂಟಿ ಸಲಗ ಕಾರನ್ನ ಪಲ್ಟಿ ಮಾಡಿದೆ. ಪರಿಣಾಮ ಚಂದ್ರೇಗೌಡ ಎಂಬುವರಿಗೆ ಗಂಭೀರ ಗಾಯಗಳಾಗಿದ್ದು, ಮಂಗಳೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಅವನೀಶ್ ಎಂಬ ಮಗು ಸೇರಿದಂತೆ ಶೃತಿ, ಮೋಹಿನಿ ಹಾಗೂ ರಾಧಾಮ್ಮ ಎಂಬುವರಿಗೆ ಗಾಯಗಳಾಗಿದ್ದು, ಮೂಡಿಗೆರೆ ಆಸ್ಪತ್ರೆಗೆ ದಾಖಲು ಮಾಡಲು ಮಾಡಲಾಗಿದೆ.
ದಾಳಿ ವಿಚಾರ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಘಟನಾ ಸ್ಥಳ ಹಾಗೂ ಆಸ್ಪತ್ರೆಗೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.