Sun,May19,2024
ಕನ್ನಡ / English

ವಿಧವಾವೇತನ ಮಾಡಿಸಿಕೊಡುವುದಾಗಿ ಆಧಾರ್ ಕಾರ್ಡ್ ಪಡೆದು, 5 ಕೋಟಿ ರೂ. ನಾಮ ಹಾಕಿದ ಮಹಿಳೆ! | ಜನತಾ ನ್ಯೂಸ್

21 Aug 2021
2118

ದಾವಣಗೆರೆ : ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ದಾಗಿನಕಟ್ಟೆ ಗ್ರಾಮದಲ್ಲಿ ಸಹೋದರಿಯರಿಬ್ಬರು ಪತಿಯನ್ನು ಕಳೆದುಕೊಂಡು ಜೀವನ ಸಾಗಿಸುತ್ತಿದ್ದಾರೆ. ದಾಗಿನಕಟ್ಟೆ ಗ್ರಾಮದ ವಿಧವೆಯರಾದ ಗೀತಮ್ಮ, ಸಾವಿತ್ರಮ್ಮ ಎಂಬುವರ ಮನೆಗೆ ಅಧಿಕಾರಿಗಳು ಸಾಲ ವಸೂಲಿಗೆ ಆಗಮಿಸಿ ಹೈರಾಣಾಗಿದ್ದಾರೆ.

ಗೀತಮ್ಮ ಎಂಬುವರು 2.4 ಕೋಟಿ ರೂ., ಸಾವಿತ್ರಮ್ಮ ಹೆಸರಲ್ಲಿ‌ 2 ಕೋಟಿ‌ ರೂ. ಸಾಲ ಇದೆ ಎಂದು ಅಧಿಕಾರಿಗಳು ತಿಳಿಸಿದ್ದರಿಂದ ಬಡ ಹೆಣ್ಣು ಮಕ್ಕಳಿಬ್ಬರಿಗೆ ಸಿಡಿಲು ಬಡಿದಂತಾಗಿತ್ತು. 2013-14ನೇ ಸಾಲಿನಲ್ಲಿ ಇಬ್ಬರ ಮಹಿಳೆಯರ ಹೆಸರಿನಲ್ಲಿ‌ ಸಾಲ ಪಡೆದಿದ್ದಾರೆ ಎಂದು ಬ್ಯಾಂಕ್ ಸಿಬ್ಬಂದಿ ವಾದಿಸಿದರೆ, ಬಡ ಹೆಣ್ಣು ಮಕ್ಕಳು ನಾವು ಸಾಲ ತೆಗೆದುಕೊಂಡೇ ಇಲ್ಲ, ಸಾಲದ ಬಗ್ಗೆ ನಮಗೆ ಗೊತ್ತೇ ಇಲ್ಲ ಎಂದು ಹೇಳಿದ್ದಾರೆ.

ಘಟನೆ ಹಿನ್ನೆಲೆ ಚನ್ನಗಿರಿ ತಾಲೂಕಿನ ದಾಗಿನಕಟ್ಟೆ ಗ್ರಾಮದಲ್ಲಿ ನೆಲೆಸಿರುವ ಗೀತಮ್ಮ ಹಾಗೂ ಸಾವಿತ್ರಮ್ಮ ಮೂಲತಃ ಇದೇ ತಾಲೂಕಿನ ಸೋಮ್ಲಾಪುರ ಗ್ರಾಮದ ವಾಸಿಗಳು. ಇಬ್ಬರು ಸಹೋದರಿಯರಾಗಿದ್ದು, ದಾಗಿನಕಟ್ಟೆ ರಂಗಸ್ವಾಮಿ-ಜಗದೀಶ ಎಂಬುವವರ ಜೊತೆ ವಿವಾಹವಾಗಿದ್ದರು. ರಂಗಸ್ವಾಮಿ ಗೀತಮ್ಮರನ್ನು, ಸಾವಿತ್ರಮ್ಮರನ್ನು ಜಗದೀಶ್‌ಗೆ ಮದುವೆ ಮಾಡಿ ಕೊಡಲಾಗಿತ್ತು. ಆದರೆ 16 ವರ್ಷಗಳ ಹಿಂದೆಯೇ ಇಬ್ಬರು ಮೃತಪಟ್ಟಿದ್ದರು. ಆ ಬಳಿಕ 3 ಎಕರೆ ಜಮೀನಿನಲ್ಲಿ ಕೃಷಿ ಮಾಡಿಕೊಂಡು ಸಹೋದರಿಯರು ಜೀವನ ನಡೆಸುತ್ತಿದ್ದಾರೆ.

5 ಕೋಟಿ ರೂಪಾಯಿ ಸಾಲ ಪಡೆದ ಮೂಲ ಹುಡಕಲು ಹೊರಟಾಗ ಅಚ್ಚರಿ ವಿಷಯವೊಂದು ಗೊತ್ತಾಗಿದೆ. ಗೀತಮ್ಮ ಮತ್ತು ಸಾವಿತ್ರಮ್ಮ ಸಹೋದರನ ಪತ್ನಿ ಶೋಭಾ ಇದಕ್ಕೆಲ್ಲಾ ಕಾರಣ ಎಂಬುದು ಗೊತ್ತಾಗಿದೆ.

ಶೋಭಾ ಶಿವಮೊಗ್ಗದ ಡಿಸಿಸಿ ಬ್ಯಾಂಕ್ ಮ್ಯಾನೇಜರ್ ಆಗಿದ್ದವರು. ಇಬ್ಬರು ಮಹಿಳೆಯರ ಪತಿ ತೀರಿಕೊಂಡಾಗ ವಿಧವಾ ವೇತನ ಮಾಡಿಸಿಕೊಡುತ್ತೇನೆ. ನಿಮ್ಮ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಕೊಡುವಂತೆ ಕೇಳಿದ್ದರು.

ಇದೇ ಪಾಸ್ ಬುಕ್ ಮತ್ತು ಆಧಾರ್ ಕಾರ್ಡ್ ಆಧಾರ ಮೇಲೆ ಶೋಭಾ ನಕಲಿ ಚಿನ್ನ ಅಡವಿಟ್ಟು ಶಿವಮೊಗ್ಗ ಡಿಸಿಸಿ ಬ್ಯಾಂಕ್‌ನಲ್ಲಿ 4.5 ಕೋಟಿ‌ ಸಾಲ ಪಡೆದಿದ್ದಾರೆ.

ಇವರ ಹೆಸರಲ್ಲಿ ಬ್ಯಾಂಕಿನ ಯಾವುದೇ ನೋಟಿಸ್ ಬಂದರು ತಮಗೆ ಕಳುಹಿಸುವಂತೆ ಶೋಭಾ ಹೇಳಿದ್ದಾರೆ. ಅವುಗಳನ್ನ ಮಹಿಳೆಯರು ಓಪನ್ ಮಾಡದೆ ನೊಟೀಸ್ ಅನ್ನು ತಮ್ಮ ಸಂಬಂಧಿ ಶೋಭಾಗೆ ಕಳುಹಿಸಿಕೊಟ್ಟಿದ್ದಾರೆ‌‌. ಆಗ ಗೊತ್ತಾಗಿದ್ದೇ ಸಂಬಂಧಿ ಶೋಭಾರಿಂದ ತಾವು ಮೋಸ ಹೋಗಿದ್ದೇವೆ ಎಂದು. ಸಂಬಂಧಿಕರು ಅಂತ ನಂಬಿದರೆ ಈ ರೀತಿ ಮೋಸ ಮಾಡಿದ್ದಾರೆ. ಇವರಿಗೆ ಶಿಕ್ಷೆ ಆಗಲೇಬೇಕು ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಈ ಘಟನೆ ನಡೆದು 7 ವರ್ಷಗಳೇ ಉರುಳಿದ್ರೂ ಕೂಡ ಈ ಸಾಲದ ಬಗ್ಗೆ ಗೀತಮ್ಮ, ಸಾವಿತ್ರಮ್ಮನಿಗೆ ಮಾಹಿತಿಯೂ‌ ಇರಲಿಲ್ಲ. ಇದೀಗ ಬ್ಯಾಂಕಿನವರು ಮನೆಗೆ ಬಂದಾಗಲೇ ತಮ್ಮ ಹೆಸರಲ್ಲಿ‌ ಶೋಭಾ ಸಾಲ ಮಾಡಿರುವುದು ಗೊತ್ತಾಗಿದೆ. ಈ ಬಗ್ಗೆ ಕೂಲಂಕಷವಾಗಿ ತನಿಖೆಗೆ ಆಗ್ರಹಿಸಿದ್ದಾರೆ. ಬಸವಾಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

RELATED TOPICS:
English summary :Davanagere

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...