ದೇಶಕ್ಕೆ ಸ್ವಾತಂತ್ರ್ಯ ಬಂದದ್ದೇ ಸಿ.ಟಿ. ರವಿ ಅವರಿಂದ: ಡಿ.ಕೆ. ಶಿವಕುಮಾರ್ ಲೇವಡಿ | ಜನತಾ ನ್ಯೂಸ್
ಬೆಂಗಳೂರು : ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೆ ಸಿ.ಟಿ ರವಿ. ಅವರಿಂದಲೇ ಸ್ವಾತಂತ್ರ್ಯ ಬಂದಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ವ್ಯಂಗ್ಯವಾಡಿದ್ದಾರೆ.
ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ಬಿಜೆಪಿ ನಾಯಕರ ಕೊಡುಗೆ ಹೆಚ್ಚಾಗಿದೆ ಎಂಬ ಸಿ.ಟಿ ರವಿ ಅವರ ಹೇಳಿಕೆಗೆ ಸಂಬಂಧಿಸಿದಂತೆ ಮಾಧ್ಯಮದವರು ಭಾನುವಾರ ಕೇಳಿದ ಪ್ರಶ್ನೆಗೆ ಶಿವಕುಮಾರ್ ಅವರು, ಹೌದು, ಸಿ.ಟಿ. ರವಿ ಅವರಿಂದಲೇ ಈ ದೇಶಕ್ಕೆ ಸ್ವಾತಂತ್ರ್ಯ ಬಂದಿದೆ ಎಂದರು.
ಕಾಂಗ್ರೆಸ್ನವರು ಮಾನಸಿಕ ಅಸ್ವಸ್ಥರು ಎಂಬ ಸಿಟಿ ರವಿ ಹೇಳಿಕೆಗೆ ಡಿಕೆಶಿ ತಿರುಗೇಟು ನೀಡಿದರು. ಹೌದು, ಸಿ ಟಿ ರವಿಯಿಂದಾಗಿಯೇ ದೇಶಕ್ಕೆ ಸ್ವಾತಂತ್ರ್ಯ ಬಂದಿದೆ. ಈಗ ತಕ್ಷಣ ನಾನು ನಿಮ್ಹಾನ್ಸ್ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯುತ್ತೇನೆ. ಸಿ ಟಿ ರವಿ ಸಲಹೆ ಮೇರೆಗೆ ಚಿಕಿತ್ಸೆ ಪಡಿತೇನೆ ಎಂದರು.
ಅವನ್ಯಾರೋ ಎಂಪಿ ಬಹಳ ಬುದ್ಧಿವಂತ, ಅವನಷ್ಟು ನಾವು ಓದಿಲ್ಲ ಮಾಡಿಲ್ಲ. ಮುಸ್ಲಿಂ ಸಮಯದಾಯದವರನ್ನು ಪಂಕ್ಚರ್ ಹಾಕೋರು ಅಂದ. ಬೌರಿಂಗ್ ಹಾಸ್ಪಿಟಲ್ ಜಾತಿ ಧರ್ಮದ ಆಧಾರದ ಮೇಲಿದೆಯಾ? ಪಂಕ್ಚರ್ ಇವರು ಹಾಕ್ತಾರಾ? ರಾಜ್ಯದ ಎಲ್ಲ ಧರ್ಮದವರ ಸಾವಿನ ಹೆಣ ಹೊತ್ತವರು ಮುಸ್ಲಿಮರು.ಈಗ ಮಾತಾಡೋ ಗಂಡುಗಳು ಯಾರಾದರೂ ಹೆಣಗಳಿಗೆ ಕೈಕೊಟ್ಟರಾ? ಸಚಿವರಾಗಿದ್ದ ಸುರೇಶ್ ಅಂಗಡಿಯವರ ಹೆಣವನ್ನು ಅವರ ಕುಟುಂಬಸ್ಥರೂ ನೋಡಲಾಗಲಿಲ್ಲ. ಇದೇನಾ ದೇಶದ ಸಂಸ್ಕೃತಿ? ಎಂದು ಪ್ರಶ್ನಿಸಿದ್ರು.
ಒಂದು ಸಮುದಾಯ ಟಾರ್ಗೆಟ್ ಮಾಡಿ ಇಡಿ ದಾಳಿ ಎಂಬ ಆರೋಪ ವಿಚಾರ ಮಾತನಾಡಿದ ಅವರು, ಜಮೀರ್ ಅಹಮ್ಮದ್ ಈಗಾಗಲೇ ನನ್ನ ತಪ್ಪಿಲ್ಲ ಅಂತಾ ಹೇಳಿಕೊಂಡಿದ್ದಾರೆ. ಈ ವಿಚಾರದಲ್ಲಿ ಹೆಚ್ಚು ಕಮೆಂಟ್ ಮಾಡಲು ಹೋಗಲ್ಲ. ಆದರೆ, ಇಡೀ ದೇಶದಲ್ಲಿ ಎಲ್ಲ ಕಡೆಯೂ ಹೀಗೇ ಆಗ್ತಿದೆ. ಇದರ ವಿರುದ್ಧ ನಾವೂ ಕೂಡ ಹೋರಾಟ ಮಾಡ್ತಿದ್ದೇವೆ ಎಂದರು.
ಶಾಸಕ ಜಮೀರ್ ಅಹ್ಮದ್ ಖಾನ್ ಮನೆ ಮೇಲಿನ ಇಡಿ ದಾಳಿ ಕುರಿತಂತೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಜಮೀರ್ ಅಹಮದ್ ಈಗಾಗಲೇ ನನ್ನ ತಪ್ಪಿಲ್ಲ ಅಂತ ಹೇಳಿಕೆ ಕೊಟ್ಟಿದ್ದಾರೆ. ಈ ವಿಚಾರದಲ್ಲಿ ಹೆಚ್ಚು ಕಮೆಂಟ್ ಮಾಡಲು ಹೋಗಲ್ಲ. ಆದರೆ ಇಡೀ ದೇಶದಲ್ಲಿ ಎಲ್ಲ ಕಡೆಯೂ ಹೀಗೆಯೇ ಆಗುತ್ತಿದೆ. ಇದರ ವಿರುದ್ಧ ನಾವೂ ಕೂಡಾ ಹೋರಾಟ ಮಾಡುತ್ತಿರುವುದಾಗಿ ತಿಳಿಸಿದರು.
ವಿನಯ ಕುಲಕರ್ಣಿ ಯನ್ನು ಪೂರ್ಣ ಪ್ರಮಾಣದಲ್ಲಿ ಪಕ್ಷದ ಕೆಲಸಕ್ಕೆ ಬಳಸಿಕೊಳ್ಳುತ್ತೇವೆ. ಅದರಲ್ಲಿ ಅನುಮಾನವೇ ಬೇಡ. ಜಮೀರ್ ಹಾಗೂ ವಿನಯ್ ಕುಲಕರ್ಣಿ ಪರ ನಮ್ಮ ಪಕ್ಷ ಇದೆ ಎಂದು ಭರವಸೆ ನೀಡಿದರು. ವಿನಯ್ ಕುಲಕರ್ಣಿ ವಿರುದ್ದ ಕೋವಿಡ್ ನಿಯಮ ಉಲ್ಲಂಘಿಸಿದ್ದಕ್ಕೆ ಕೇಸ್ ಮಾಡಿದ್ದಾರೆ. ಬಹಳ ಸಂತೋಷ, ಆದರೆ ಇವರ ಕೇಂದ್ರ ಮಂತ್ರಿಗಳು ಎಲ್ಲ ನಿಯಮ ಪಾಲನೆ ಮಾಡಿದ್ದಾರಾ? ಕೇಂದ್ರ ಸಚಿವರಿಗೆ ಒಂದು ಕಾನೂನಾ? ಎಂದು ಡಿ.ಕೆ ಶಿವಕುಮಾರ್ ಕಿಡಿಕಾರಿದರು.