ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭೇಟಿಯಾದ ಅಫ್ಘಾನ್ ವಿದ್ಯಾರ್ಥಿಗಳು! | ಜನತಾ ನ್ಯೂಸ್
ಬೆಂಗಳೂರು : ಅಫ್ಘಾನಿಸ್ತಾನದ ವಿದ್ಯಾರ್ಥಿಗಳ ಪ್ರತಿನಿಧಿಗಳು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಸದಾಶಿವನಗರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು.
ಅಫ್ಘಾನಿಸ್ತಾನ ವಿದ್ಯಾರ್ಥಿಗಳ ಪ್ರತಿನಿಧಿಗಳು ಬಂದು ನನ್ನ ಭೇಟಿ ಮಾಡಿದ್ದರು. ಅಲ್ಲಿನ ಘಟನೆಯಿಂದ ಅವರು ಮಾನಸಿಕವಾಗಿ ಕುಗ್ಗಿದ್ದಾರೆ. ನಮ್ಮ ರಾಜ್ಯದಲ್ಲಿ ಅವರಿಗೆ ಧೈರ್ಯ ನೀಡಬೇಕು. ಅವರ ದೇಹ ಮಾತ್ರ ಇಲ್ಲಿದ್ದು, ಅವರ ಮನಸ್ಸು ಅಲ್ಲಿರುವ ಪೋಷಕರ ಮೇಲಿದೆ.
ಬೆಂಗಳೂರು ಶಿಕ್ಷಣ ಹಬ್ ಆಗಿದ್ದು, ಅನೇಕ ಅಂತಾರಾಷ್ಟ್ರೀಯ ವಿದ್ಯಾರ್ಥಿಗಳು ಇಲ್ಲಿದ್ದಾರೆ. ಅವರಿಗೆ ಧೈರ್ಯ ತುಂಬಬೇಕು ಎಂದು ಹೇಳಿದರು.ಧರ್ಮ ಯಾವುದೇ ಆಗಿರಲಿ, ಮಾನವೀಯತೆ ದೃಷ್ಟಿಯಿಂದ ಅವರಿಗೆ ಧೈರ್ಯ ತುಂಬಬೇಕು.
ಅಫ್ಘಾನಿಸ್ತಾನದಲ್ಲಿರುವ ಕನ್ನಡಿಗರನ್ನು ವಾಪಸ್ ಕರೆತರುವುದು ಭಾರತ ಸರ್ಕಾರಕ್ಕೆ ಸಂಬಂಧಿಸಿದ ವಿಚಾರ. ಈಗ ನಾನು ಆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳು ಮಾತನಾಡಲಿ ಎಂದು ತಿಳಿಸಿದರು.