ಕಾಲುವೆಗೆ ಹಾರಿ ತಾಯಿ ಮತ್ತು ಇಬ್ಬರು ಮಕ್ಕಳು ಆತ್ಮಹತ್ಯೆ! | ಜನತಾ ನ್ಯೂಸ್
ಬಳ್ಳಾರಿ : ಕಾಲುವೆಗೆ ಹಾರಿ ತಾಯಿ-ಮಕ್ಕಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬಳ್ಳಾರಿ ಜಿಲ್ಲೆ ಸಂಡೂರು ನಿವಾಸಿಗಳಾದ ಪಾರ್ವತಿ (37), ಶ್ರೇಯಾ (16) ಮತ್ತು ಮಾನಸ (13) ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಗಳು.
ಮೂಲತಃ ಸಿರುಗುಪ್ಪ ತಾಲೂಕಿನ ಸಿರಿಗೇರಿ ಗ್ರಾಮದವರಾದ ಇವರು ಸಂಡೂರಿನಲ್ಲಿ ಕಿರಾಣಿ ಅಂಗಡಿ ವ್ಯಾಪಾರ ನಡೆಸುತ್ತಿದ್ದರು. ಶುಕ್ರವಾರ ಶ್ರೇಯಾ ಶವ ತಿರುಮಲ ನಗರ ಕ್ಯಾಂಪ್ನ 15ನೇ ವಿತರಣಾ ಕಾಲುವೆಯಲ್ಲಿ, ಶನಿವಾರ ಮಾನಸ ಮೃತದೇಹ ತಾಳೂರು ರಸ್ತೆಯ 14 ವಿತರಣಾ ಕಾಲುವೆ ಬಳಿ ಹಾಗೂ ಭಾನುವಾರ ಪಾರ್ವತಿ ಶವ ಅಸುಂಡಿ ಬಳಿಯ 15ನೇ ವಿತರಣಾ ಕಾಲುವೆಯಲ್ಲಿ ಸಿಕ್ಕಿದೆ.
ಇದೀಗ ಈ ಮೂವರ ಶವಗಳು ಕಾಲುವೆಯಲ್ಲಿ ಪತ್ತೆಯಾಗಿವೆ. ಕೌಟುಂಬಿಕ ಕಲಹದಿಂದ ತಾಯಿ-ಮಕ್ಕಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕಾಗಮಿಸಿದ ಪೊಲೀಸರು ಮೂವರ ಶವಗಳನ್ನು ಕಾಲುವೆಯಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.