ಸಾಮೂಹಿಕ ಅತ್ಯಾಚಾರ ರಾಜ್ಯದಲ್ಲಿ ಕುಸಿದುಬಿದ್ದಿರುವ ಕಾನೂನು-ಸುವ್ಯವಸ್ಥೆಗೆ ಸಾಕ್ಷಿ! | ಜನತಾ ನ್ಯೂಸ್
ಬೆಂಗಳೂರು : ಮೈಸೂರಿನಲ್ಲಿ ನಡೆದಿರುವ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ರಾಜ್ಯದಲ್ಲಿ ಕುಸಿದುಬಿದ್ದಿರುವ ಕಾನೂನು-ಸುವ್ಯವಸ್ಥೆಗೆ ಸಾಕ್ಷಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಯುವತಿ ಮೇಲೆ ಅತ್ಯಾಚಾರ ನಡೆಸಿರುವುದು ದುರದೃಷ್ಟಕರ. ಸಂತ್ರಸ್ಥೆ ಹಾಗೂ ಆಕೆಯ ಕುಟುಂಬ ಪರ ನಾವು ನಿಲ್ಲುತ್ತೇವೆ ಎಂದಿರುವ ಅವರು, ಸಂಸ್ತ್ರಸ್ಥೆಗೆ ನ್ಯಾಯ ಒದಗಿಸಿಕೊಡುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಒತ್ತಾಯಿಸಿದ್ದಾರೆ.
ಮೈಸೂರು ಮಾತ್ರವಲ್ಲ ಇಡೀ ರಾಜ್ಯದಲ್ಲಿ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದೆ. ಮುಖ್ಯಮಂತ್ರಿಗಳು ಬಹಳಷ್ಟು ಬೇಗ ಸಂಪುಟ ವಿಸ್ತರಣೆಯ ಸಂಕಟದಿಂದ ಪಾರಾಗಿ ರಾಜ್ಯದಲ್ಲಿ ಹೆಚ್ಚುತ್ತಿರುವ ಅಪರಾಧಗಳ ನಿಯಂತ್ರಣಕ್ಕೆ ಗಮನ ಹರಿಸಬೇಕು. ಪೊಲೀಸರು ತಕ್ಷಣ ದುಷ್ಕರ್ಮಿಗಳನ್ನು ಬಂಧಿಸಿ ವಿದ್ಯಾರ್ಥಿನಿಗೆ ನ್ಯಾಯ ಒದಗಿಸಿ, ಭಯಭೀತ ಜನರಲ್ಲಿ ಧೈರ್ಯ ತುಂಬಬೇಕು ಎಂದು ಆಗ್ರಹಿಸಿದ್ದಾರೆ.
ಮೈಸೂರಿನಲ್ಲಿ ನಡೆದಿರುವ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ರಾಜ್ಯದಲ್ಲಿ ಕುಸಿದುಬಿದ್ದಿರುವ ಕಾನೂನು-ಸುವ್ಯವಸ್ಥೆಗೆ ಸಾಕ್ಷಿ.
— Siddaramaiah (@siddaramaiah) August 25, 2021
ಪೊಲೀಸರು ತಕ್ಷಣ ದುಷ್ಕರ್ಮಿಗಳನ್ನು ಬಂಧಿಸಿ ವಿದ್ಯಾರ್ಥಿನಿಗೆ ನ್ಯಾಯ ಒದಗಿಸಿ, ಭಯಭೀತ ಜನರಲ್ಲಿ ಧೈರ್ಯ ತುಂಬಬೇಕು.@CMofKarnataka#LawlessKarnataka
1/2 pic.twitter.com/4ZWnMJFYBo