ಹಲವು ದಿನಗಳ ನಂತ್ರ ಒಟ್ಟಾಗಿ ಟಿಫನ್ ಸವಿದ ಯಡಿಯೂರಪ್ಪ - ಈಶ್ವರಪ್ಪ | ಜನತಾ ನ್ಯೂಸ್
ಶಿವಮೊಗ್ಗ : ಬಿ ಎಸ್ ಯಡಿಯೂರಪ್ಪ ಮತ್ತು ಕೆ ಎಸ್ ಈಶ್ವರಪ್ಪ ಇಂದು ಒಟ್ಟಿಗೇ ಕುಳಿತು ಬೆಳಗಿನ ಉಪಹಾರ ಸೇವಿಸಿದ್ದಾರೆ.
ಇಂದಿನಿಂದ ನಾಲ್ಕು ದಿನಗಳ ಕಾಲ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ಶಿವಮೊಗ್ಗದಲ್ಲಿ ಭೇಟಿಯಾಗಿ ಉಭಯಕುಶಲೋಪರಿ ವಿಚಾರಿಸಿಕೊಂಡಿದ್ದಾರೆ.
ಶಿವಮೊಗ್ಗದ ವಿನೋಬಾ ನಗರದಲ್ಲಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನಿವಾಸಕ್ಕೆ ಆಗಮಿಸಿದಂತ ಸಚಿವ ಕೆ ಎಸ್ ಈಶ್ವರಪ್ಪ ಹಾಗೂ ಯಡಿಯೂರಪ್ಪ ಅವರು, ಇಂದು ಬೆಳಿಗ್ಗೆ ಹಲವು ರಾಜಕೀಯ ಸಂಘರ್ಷಗಳ ನಡುವೆಯೂ ಒಟ್ಟಿಗೆ ಬೆಳಗಿನ ಉಪಹಾರ ಸೇರಿಸಿದ್ದಾರೆ.
ಇದೇ ಸಂದರ್ಭದಲ್ಲಿ ರಾಜಕೀಯ ಭಲೆ ಜೋಡಿಗಳು ಒಟ್ಟಾಗಿ ಪ್ರಸ್ತುತ ರಾಜಕೀಯ ಸೇರಿದಂತೆ ಜಿಲ್ಲೆಯ ಹಲವು ವಿಚಾರಗಳ ಬಗ್ಗೆ ಚರ್ಚಿಸಿದರು ಎಂಬುದಾಗಿ ತಿಳಿದು ಬಂದಿದೆ. ಕೆ.ಎಸ್ ಈಶ್ವರಪ್ಪ ಪ್ರಸಕ್ತ ರಾಜಕೀಯ ವಿದ್ಯಾಮಾನಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.