3 ವರ್ಷದ ಮಗು ಅಪಹರಿಸಿ ಮಾರಾಟ, ಆರೋಪಿ ಬಂಧನ! | ಜನತಾ ನ್ಯೂಸ್
ಬೆಂಗಳೂರು : 3 ವರ್ಷದ ಮಗುವನ್ನು ಕದ್ದು ಮಾರಾಟ ಮಾಡಿದ್ದ ವ್ಯಕ್ತಿಯನ್ನು ಬ್ಯಾಟರಾಯನಪುರ ಠಾಣೆ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಇಲಿಯಾಸ್ (22) ಬಂಧಿತ ಆರೋಪಿಯಾಗಿದ್ದಾನೆ. ಈತ ಸರ್ಜಾಪುರದ ನಿವಾಸಿಯಾಗಿದ್ದು, ತರಕಾರಿ ಮಾರಾಟಗಾರನಾಗಿ ಕೆಲಸ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ.
ಶಾಮಣ್ಣ ಗಾರ್ಡನ್ ನಲ್ಲಿ ಮಗು ಅಪಹರಿಸಿದ್ದ ಆರೋಪಿ, ಬಳಿಕ ಮಗುವನ್ನು ತಮಿಳುನಾಡಿನ ಹೊಸೂರು ಸಮೀಪ ವ್ಯಕ್ತಿಯೊಬ್ಬರಿಗೆ ಮಾರಾಟ ಮಾಡಿದ್ದಾನೆ.
ಯುವತಿಯೊಬ್ಬಳನ್ನು ಪ್ರೀತಿ ಮಾಡುತ್ತಿದ್ದ ಇಲಿಯಾಸ್ ಇದ್ದಕ್ಕಿದ್ದಂತೆ ದೊಡ್ಡ ಮಟ್ಟದಲ್ಲಿ ಹಣ ಸಂಪಾದನೆ ಮಾಡಬೇಕೆಂದುಈ ಕೆಕೆಲಸ ಮಾಡಿದ್ದಾನೆ ಎಂದು ತಿಳಿದುಬಂದಿದೆ,.
ವಿಚಾರಣೆ ವೇಳೆ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ. ಇದೀಗ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಅಪಹರಣಕ್ಕೊಳಗಾಗಿದ್ದ ಮಗುವನ್ನು ಪೋಷಕರ ಮಡಿಲಿಗೆ ಒಪ್ಪಿಸಲಾಗಿದೆ.