6 ರಿಂದ 8 ನೇ ತರಗತಿ ಆರಂಭಕ್ಕೆ ಸಮ್ಮತಿ, ತರಗತಿ ಆರಂಭಕ್ಕೆ ಸರ್ಕಾರ ಗ್ರೀನ್ ಸಿಗ್ನಲ್! | ಜನತಾ ನ್ಯೂಸ್
ಬೆಂಗಳೂರು : ರಾಜ್ಯದಲ್ಲಿ 6, 7 ಹಾಗೂ 8 ನೇ ತರಗತಿ ಶಾಲೆಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಿದೆ. ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಶೇ.2ಕ್ಕಿಂತ ಕಡಿಮೆ ಇರುವಂತ ಪಾಸಿಟಿವಿಟಿ ದರ ಆಧರಿಸಿ, ಜಿಲ್ಲೆಗಳಲ್ಲಿ ಕೊರೋನಾ ನಿಯಂತ್ರಣ ಕ್ರಮಗಳನ್ನು ಅನುಸರಿ 6 ರಿಂದ 8ನೇ ತರಗತಿಗಳನ್ನು ಸೆಪ್ಟೆಂಬರ್ 6ರಿಂದ ಆರಂಭಿಸಲಾಗುತ್ತದೆ ಎಂಬುದಾಗಿ ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ತಜ್ಞರ ಜೊತೆ ನಡೆದ ಸಭೆಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಆರ್. ಅಶೋಕ್ ಅವರು, ಕೋವಿಡ್ ಪಾಸಿಟಿವಿಟಿ ದರ 2 % ಕಡಿಕೆ ಇರುವ ತಾಲೂಕುಗಳಲ್ಲಿ ಕೋವಿಡ್ ಮಾರ್ಗಸೂಚಿ ಅನುಸರಿಸಿ ಸೆಪ್ಟೆಂಬರ್ 6 ರಿಂದ ಭೌತಿಕ ತರಗತಿಗಳ (6,7,8)ನ್ನು ಪ್ರಾರಂಭಿಸಲು ಸರ್ಕಾರ ಅನುಮತಿ ನೀಡುತ್ತಿದೆ ಎಂದರು.
50% (ಒಂದು ದಿನ ಗ್ಯಾಪ್ ) ಮಕ್ಕಳ ಹಾಜರಾತಿಯೊಂದಿಗೆ ತರಗತಿ ನಡೆಸಲಾಗುತ್ತದೆ. ಸೋಮವಾರದಿಂದ ಶುಕ್ರವಾರದ ವರೆಗೆ ಮಾತ್ರ ಶಾಲೆ ತೆರೆಯಲಿದೆ. ಶನಿವಾರ ಹಾಗೂ ಭಾನುವಾರ ಶಾಲೆ ಇರುವುದಿಲ್ಲ. ಈ ಎರಡು ದಿನ ಶಾಲೆಯನ್ನು ಸ್ಯಾನಿಟೈಸ್ ಹಾಗೂ ಸ್ಚಚ್ಛಗೊಳಿಸುವ ಕಾರ್ಯ ನಡೆಯಲಿದೆ ಎಂದರು.
ಸೋಮವಾರದಿಂದ ಶುಕ್ರವಾರದವರೆಗೆ ಶಾಲೆಗಳನ್ನು ನಡೆಸಲಾಗುತ್ತದೆ. ಶನಿವಾರ ಮತ್ತು ಭಾನುವಾರ ಸ್ವಚ್ಛತಾ ಕಾರ್ಯಗಳನ್ನು ಕೈಗೊಳ್ಳಲಾಗುತ್ತದೆ. ಕೇರಳದಿಂದ ಬರೋರಿಗೆ ಕೊರೋನಾ ನೆಗೆಟಿವ್ ವರದಿ ಕಡ್ಡಾಯಗೊಳಿಸಲಾಗಿದೆ. ಶೇ.50ರಷ್ಟು ಮಕ್ಕಳು ಮಾತ್ರ ಶಾಲೆಗ ಹಾಜರಾಗಬೇಕು. ಪಾಸಿಟಿವಿಟಿ ದರ ಶೇ.2ಕ್ಕಿಂತ ಹೆಚ್ಚಿರುವಂತ ಜಿಲ್ಲೆಗಳಲ್ಲಿ ಶಾಲೆಗಳನ್ನು ಆರಂಭಿಸೋದಕ್ಕೆ ಅನುಮತಿ ಇಲ್ಲ ಎಂದರು.