ಗಣೇಶೋತ್ಸವಕ್ಕೆ ಅನುಮತಿ ನೀಡುವ ಕುರಿತು ಸೆ.5ಕ್ಕೆ ಸಭೆ! | ಜನತಾ ನ್ಯೂಸ್
ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಭೀತಿಯ ನಡುವೆಯೂ ಗಣೇಶ ಹಬ್ಬ ಆಚರಣೆಗೆ ಅವಕಾಶ ನೀಡುವ ಸಂಬಂಧ ಮುಕ್ಕಾಲು ಗಂಟೆ ಇಂದಿನ ಸಭೆಯಲ್ಲಿ ಚರ್ಚಿಸಲಾಯಿತು. ಇಂದಿನ ಸಭೆಯಲ್ಲಿ ಗಣೇಶೋತ್ಸವ ಆಚರಣೆ ಕುರಿತು ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ.
ಸರ್ಕಾರ ಕೊರೊನಾವನ್ನು ಗಮನದಲ್ಲಿಟ್ಟುಕೊಂಡು ಗಣೇಶ ಹಬ್ಬಕ್ಕೆ ಯಾವ ರೀತಿ ಅನುಮತಿ ಕೊಡಬಹುದು ಎನ್ನುವುದನ್ನು ಯೋಚನೆ ಮಾಡುತ್ತೀದ್ದೇವೆ. ಸಾರ್ವಜನಿಕ ಗಣೇಶ ಹಬ್ಬ ಆಚರಣೆಗೆ ಅನುಮತಿ ನೀಡಲಾಗುವುದು. ಸಾರ್ವಜನಿಕವಾಗಿ ಗಣೇಶ ಮೂರ್ತಿಯನ್ನು ಕೂರಿಸುವ ಸಂಬಂಧ ಸ್ಥಳೀಯ ಪೊಲೀಸರಿಂದ ಮಾಹಿತಿ ಸಂಗ್ರಹಿಸಿ ಆಯೋಜಕರೊಂದಿಗ ಮಾತುಕತೆ ನಡೆಸಿದ ನಂತರ ಅನುಮತಿ ನೀಡಲಾಗುವುದು ಎಂದರು.
ಸದ್ಯ ಗಣೇಶ ಹಬ್ಬ ಆಚರಣೆ ಸಂಬಂಧ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಸೆ.5ರಂದು ಮತ್ತೊಂದು ಸಭೆ ನಡೆಸಲಾಗುವುದು ಈ ವೇಳೆ ಗಣೇಶೋತ್ಸವ ಸಂಬಂಧ ಸೂಕ್ತ ಮಾರ್ಗಸೂಚಿ ಬಿಡುಗಡೆ ಮಾಡುವುದಾಗಿ ಸಚಿವ ಆರ್ ಅಶೋಕ್ ಹೇಳಿದ್ದಾರೆ.
ಕೇರಳದಲ್ಲಿ ಓಣಂ ಸಂದರ್ಭದಲ್ಲಿಯೇ ಕೊರೋನಾ ಪ್ರಕರಣ ಸಂಖ್ಯೆ ಹೆಚ್ಚಾದ ಹಿನ್ನಲೆಯಲ್ಲಿ ಗಣೇಶ ಹಬ್ಬಕ್ಕೆ ಕೊರೋನಾ ನಿಯಂತ್ರಣ ಕ್ರಮಗಳೊಂದಿಗೆ ಅನುಮತಿಸೋದಕ್ಕೆ ಚರ್ಚಿಸಿ ನಿರ್ಧಾರ ಪ್ರಕಟಿಸಲಾಗುತ್ತದೆ ಎಂದು ಹೇಳಿದರು.