ಮತ್ತೆ ಏರಿಕೆಯಾದ ಕೊರೊನಾ: ಬೆಂಗಳೂರಿನಲ್ಲಿ 287 ಸೇರಿ ಇಂದು 1,217 ಪ್ರಕರಣ ಪತ್ತೆ; 25 ಸಾವು! | ಜನತಾ ನ್ಯೂಸ್
ಬೆಂಗಳೂರು : ಕೊರೊನಾ ಮಹಾಮಾರಿಯ ಸಂಖ್ಯೆ ಏರಿಳಿತವಾಗಿದ್ದು, ಇಂದು ಏರಿಕೆಯಾಗಿದೆ. ಇವತ್ತು ರಾಜ್ಯದಲ್ಲಿ 1,217 ಜನಕ್ಕೆ ಸೋಂಕು ತಗುಲಿದ್ದು, 25 ಮಂದಿ ಸಾವನ್ನಪ್ಪಿದ್ದಾರೆ.
ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 1,217 ಕೊರೋನಾ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,48,228ಕ್ಕೆ ಏರಿಕೆಯಾಗಿದೆ. ಮಹಾಮಾರಿಗೆ 25 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,318ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.
ಸದ್ಯ ರಾಜ್ಯದಲ್ಲಿ 18,386 ಸಕ್ರಿಯ ಪ್ರಕರಣಗಳಿದ್ದು, ಇವತ್ತು 1,198 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೋವಿಡ್-19 ಸೋಂಕು ಹರಡುವಿಕೆ ಪ್ರಮಾಣ ಶೇ.0.94 ಮತ್ತು ಮರಣ ಪ್ರಮಾಣ ಶೇ.2.05ರಷ್ಟಿದೆ. ಇದುವರೆಗೂ 29,49,445 ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಸಾವನ್ನಪ್ಪಿದವರ ಸಂಖ್ಯೆ 37,319ಕ್ಕೆ ಏರಿಕೆಯಾಗಿದೆ. ಇಂದು 1,28,657 ಸ್ಯಾಂಪಲ್ ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು.
ಬೆಂಗಳೂರಿನಲ್ಲಿ ಇಂದು 287 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,37,837ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ 7 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ ಸಿಲಿಕಾನ್ ಸಿಟಿಯಲ್ಲಿ 7,438 ಸಕ್ರಿಯ ಪ್ರಕರಣಗಳಿವೆ.
ಯಾವ ಜಿಲ್ಲೆಯಲ್ಲಿ ಎಷ್ಟು?:
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 0, ಬೆಳಗಾವಿ 17, ಬೆಂಗಳೂರು ಗ್ರಾಮಾಂತರ 18, ಬೆಂಗಳೂರು ನಗರ 287, ಬೀದರ್ 0, ಚಾಮರಾಜನಗರ 5, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 25, ಚಿತ್ರದುರ್ಗ 8, ದಕ್ಷಿಣ ಕನ್ನಡ 224, ದಾವಣಗೆರೆ 10, ಧಾರವಾಡ 9, ಗದಗ 1, ಹಾಸನ 56, ಹಾವೇರಿ 1, ಕಲಬುರಗಿ 3, ಕೊಡಗು 89, ಕೋಲಾರ 55, ಕೊಪ್ಪಳ 1, ಮಂಡ್ಯ 11, ಮೈಸೂರು 127, ರಾಯಚೂರು 0, ರಾಮನಗರ 36, ಶಿವಮೊಗ್ಗ 30, ತುಮಕೂರು 30, ಉಡುಪಿ 150, ಉತ್ತರ ಕನ್ನಡ 41, ವಿಜಯಪುರ 4 ಮತ್ತು ಯಾದಗಿರಿಯಲ್ಲಿ 1 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.