ಹಾವು ಕಚ್ಚಿ ತಂದೆ-ಮಗ ದಾರುಣ ಸಾವು! | ಜನತಾ ನ್ಯೂಸ್
ಬೆಳಗಾವಿ : ಅಥಣಿ ತಾಲೂಕಿನ ಬಾಡಗಿ ಗ್ರಾಮದಲ್ಲಿ ತಂದೆ-ಮಗ ಇಬ್ಬರಿಗೂ ಹಾವು ಕಚ್ಚಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಲ್ಲಿಕಾರ್ಜುನ್ (14) ಹಾಗೂ ಮುತ್ತಪ್ಪ (40) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ.
ಕಳೆದ ಆಗಸ್ಟ್ 29ರಂದು ನಸುಕಿನ ಜಾವ ಹೊಲಕ್ಕೆ ನೀರು ಹಾಯಿಸಲು ಹೋದಾಗ ಇಬ್ಬರಿಗೂ ಹಾವು ಕಚ್ಚಿದೆ. ಕತ್ತಲು ಇದ್ದ ಕಾರಣ ಇರುವೆ ಅಥವಾ ಬೇರೆ ಹುಳು ಕಚ್ಚಿರಬಹುದು ಎಂದು ಭಾವಿಸಿ, ತಮ್ಮ ಕೆಲಸದಲ್ಲಿ ಮಗ್ನರಾಗಿದ್ದಾರೆ. ಆದರೆ ಕೆಲ ಗಂಟೆಗಳ ನಂತರ ತೀವ್ರ ಅಸ್ವಸ್ಥರಾಗಿದ್ದಾರೆ. ಈ ವೇಳೆ ಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಸಾವನ್ನಪ್ಪಿದ್ದಾರೆ.
English summary :Belagavi