ಕಾಂಗ್ರೆಸ್ನವರು ಬೀದಿಗಿಳಿದು ಪ್ರತಿಭಟನೆ ಮಾಡುವಷ್ಟರ ಮಟ್ಟಿಗೆ ಬೆಲೆ ಏರಿಕೆಯಾಗಿಲ್ಲ: ಸಿ.ಟಿ.ರವಿ | ಜನತಾ ನ್ಯೂಸ್
ಚಿಕ್ಕಮಗಳೂರು : ಕಾಂಗ್ರೆಸ್ ನವರು ಚಳುವಳಿ ಮಾಡುವ ಮಟ್ಟಕ್ಕೆ ಬೆಲೆ ಏರಿಕೆಯಾಗಿಲ್ಲ. ಕಾಂಗ್ರೆಸ್ ನವರು ಅಧಿಕಾರ ಬಿಟ್ಟು ಹೋಗುವಾಗ ಗ್ಯಾಸ್ ಬೆಲೆ 981 ರೂಪಾಯಿ ಇತ್ತು. ಬೆಲೆ ಏರಿಕೆ ವಿರುದ್ಧ ಚಳುವಳಿ ಮಾಡುವ ನೈತಿಕತೆ ಕಾಂಗ್ರೆಸ್ಗೆ ಇಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.
ಕೇಂದ್ರದಲ್ಲಿ ಈ ಹಿಂದೆ ಕಾಂಗ್ರೆಸ್ ಅಧಿಕಾರದಲ್ಲಿದ್ದ ಅವಧಿಯಲ್ಲಿ ಅಡುಗೆ ಅನಿಲದ ಬೆಲೆ 981 ರೂ. ಇತ್ತು. ಈ ಹಿಂದೆ ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರದಿಂದಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿತ್ತು. ಸದ್ಯ ಕೋವಿಡ್ ಹಿನ್ನೆಲೆಯಲ್ಲಿ ಇಡೀ ವಿಶ್ವಾದ್ಯಂತ ಆರ್ಥಿಕ ಸಮಸ್ಯೆ ಎದುರಾಗಿದೆ.
ದೇಶದಲ್ಲೂ ಅಡುಗೆ ಅನಿಲ, ತೈಲಬೆಲೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕೋವಿಡ್ ಸೋಂಕು ಕಾರಣವಾಗಿದೆ. ಕಾಂಗ್ರೆಸ್ನವರಿಗೆ ಇದು ತಿಳಿದಿದ್ದರೂ ಪ್ರತಿಭಟನೆ ಮಾಡುತ್ತಿದ್ದಾರೆ. ಕಾಂಗ್ರೆಸ್ಗೆ ಪ್ರತಿಭಟನೆ ಮಾಡುವ ನೈತಿಕತೆ ಇಲ್ಲ ಎಂದು ಟೀಕಿಸಿದರು.
ಬಡವರಿಗೆ 20 ತಿಂಗಳು ಉಚಿತವಾಗಿ ಆಹಾರ ಧಾನ್ಯ ನೀಡಲಾಗಿದೆ. ಆಹಾರ ಧಾನ್ಯ ಉಚಿತವಾಗಿ ನೀಡ್ತಿರುವ ಏಕೈಕ ರಾಷ್ಟ್ರ ಭಾರತ. ನೂರು ಕೋಟಿ ಜನರಿಗೆ ಲಸಿಕೆ ನೀಡ್ತಿರುವ ಏಕೈಕ ದೇಶ ಭಾರತ ಎಂದು ಚಿಕ್ಕಮಗಳೂರಿನಲ್ಲಿ ಬಿಜೆಪಿ ನಾಯಕ ಸಿ.ಟಿ. ರವಿ ಪ್ರತಿಕ್ರಿಯೆ ನೀಡಿದ್ದಾರೆ.