Sun,May19,2024
ಕನ್ನಡ / English

ವಿದ್ಯಾರ್ಥಿಗಳಿಗೆ ಸದೃಢ ಹಾಗೂ ಉತ್ತಮ ಶಿಕ್ಷಣ ನೀತಿ ಕೊಡಬೇಕು: ಡಾ.ಸಿ.ಎನ್.ಅಶ್ವತ್ಥನಾರಾಯಣ | ಜನತಾ ನ್ಯೂಸ್

05 Sep 2021
2433

ಬೆಂಗಳೂರು : ರಾಷ್ಟ್ರೀಯ ಶಿಕ್ಷಣ ನೀತಿಯನ್ನು ತರಾತುರಿಯಲ್ಲಿ ಜಾರಿಗೆ ತರಲಾಗುತ್ತಿದೆ ಎಂದು ಪ್ರತಿಪಕ್ಷಗಳು ಮಾಡುತ್ತಿರುವ ಆರೋಪವನ್ನು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಸಾರಾಸಗಟಾಗಿ ತಳ್ಳಿಹಾಕಿದಲ್ಲದೆ, ಇದು ಅರ್ಥರಹಿತ ಹಾಗೂ ರಾಜಕೀಯ ದುರುದ್ದೇಶದಿಂದ ಕೂಡಿದ ಟೀಕೆ ಎಂದು ತಿರುಗೇಟು ನೀಡಿದ್ದಾರೆ.

ರವಿವಾರ ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹೊಸ ಶಿಕ್ಷಣ ನೀತಿಯನ್ನು ಕೆಲವರು ಆತುರಾತುರವಾಗಿ ಜಾರಿ ಮಾಡಲಾಗಿದೆ ಎಂದು ಹೇಳುತ್ತಿರುವ ಮಾತಿನಲ್ಲಿ ಲವಲೇಶವೂ ಸತ್ಯಾಂಶವಿಲ್ಲ. ದೇಶದ ಶ್ರೇಷ್ಟ ತಜ್ಞರು, ವಿದ್ವಾಂಸರು, ವಿವಿಧ ಕ್ಷೇತ್ರಗಳ ಸಾಧಕರು ಅವಿರತವಾಗಿ ಐದೂವರೆ ವರ್ಷ ಕಾಲ ಸಮಗ್ರ ಅಧ್ಯಯನ, ಮಾಹಿತಿ ಸಂಗ್ರಹ, ಚರ್ಚೆ, ಸಂವಾದ, ಟೀಕೆ-ಟಿಪ್ಪಣಿಗಳೆಲ್ಲವನ್ನೂ ಮಾಡಿಕೊಂಡು, ಐದೂವರೆ ಲಕ್ಷಕ್ಕೂ ಹೆಚ್ಚು ಸಲಹೆಗಳನ್ನು ಪಡೆದು ರೂಪಿಸಿದ ನೀತಿ ಇದು ಎಂದು ಹೇಳಿದರು.

ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ವಿಧ್ಯುಕ್ತ ಜಾರಿಯು ಆ.23ರಂದು ಆಗಿದೆ ನಿಜ. ಆದರೆ, ಒಂದೇ ವರ್ಷದಲ್ಲಿ ಇಡೀ ನೀತಿಯನ್ನು ಜಾರಿ ಮಾಡಲು ಸಾಧ್ಯವಿಲ್ಲ. ಈ ನೀತಿಯನ್ನು ಹಂತ ಹಂತವಾಗಿ ಜಾರಿ ಮಾಡಲಾಗುತ್ತಿದ್ದು, ಒಟ್ಟಾರೆ ಜಾರಿಗೆ 15 ವರ್ಷಗಳ ಕಾಲಾವಕಾಶ ಇದೆ. ಆದರೆ, ರಾಜ್ಯ ಸರಕಾರ 10 ವರ್ಷಗಳಲ್ಲಿಯೇ ಪೂರ್ಣವಾಗಿ ಅನುಷ್ಠಾನಕ್ಕೆ ತರಲು ನಿರ್ಧರಿಸಿದೆ. 2030ರ ಹೊತ್ತಿಗೆ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ ಆಮೂಲಾಗ್ರವಾಗಿ ಜಾರಿಗೆ ತರಲಾಗುವುದು ಎಂದು ಅವರು ಹೇಳಿದರು.

ಎನ್​ಇಪಿ ಅಂದ್ರೆ ನಾಗ್ಪುರ್ ಶಿಕ್ಷಣ ನೀತಿ ಎಂದಿದ್ದ ಕಾಂಗ್ರೆಸ್ ನಾಯಕ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ಗೆ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ್‌ ನಾರಾಯಣ ತಿರುಗೇಟು ನೀಡಿದ್ದಾರೆ. ಹೊಸ ಶಿಕ್ಷಣ ನೀತಿಯ (NEP) ಬಗ್ಗೆ ಗೊತ್ತಿಲ್ಲದಿದ್ರೆ ಬೇರೆಯವರ ಬಳಿ ಕೇಳಿ ತಿಳಿಯಲಿ. ಇಲ್ಲದಿದ್ರೆ ಪರಿಷತ್‌ನಲ್ಲಿ ನಾನೇ ಅವರಿಗೆ ತಿಳಿಸುತ್ತೇನೆ. ಡಿ.ಕೆ. ಶಿವಕುಮಾರ್‌ ಹೇಳಿಕೆ ಅವರಿಗೇ ತಿರುಗುಬಾಣವಾಗುತ್ತೆ. ಎಂದಿದ್ದಾರೆ.

ಭಾರತ ಅಭಿವೃದ್ಧಿ ದೇಶ ಆಗಬೇಕು, ಅಂದ್ರೆ ರಾಷ್ಟ್ರೀಯ ಶಿಕ್ಷಣ ನೀತಿ ಸಹಾಯ ಆಗುತ್ತೆ. ವಿದ್ಯಾರ್ಥಿಗಳಿಗೆ ಸದೃಢ ಹಾಗೂ ಉತ್ತಮ ಶಿಕ್ಷಣ ನೀತಿ ಕೊಡಬೇಕು. ವಿದ್ಯಾರ್ಥಿಗಳ ಸಬಲೀಕರಣ, ವಿದ್ಯಾರ್ಥಿಗಳ ಭವಿಷ್ಯ ಉತ್ತಮ ಆಗಬೇಕು ಎಂದು ಅಶ್ವತ್ಥ್ ನಾರಾಯಣ ಹೇಳಿದ್ದಾರೆ.

"ಎನ್​ಇಪಿ ಅಂದ್ರೆ ನಾಗ್ಪುರ್ ಎಜುಕೇಷನ್ ಪಾಲಿಸಿ" ಎಂದು ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ಡಿ.ಕೆ. ಶಿವಕುಮಾರ್​ ಆಕ್ಷೇಪ ವ್ಯಕ್ತಪಡಿಸಿದ್ದರು. ಕೇಂದ್ರ ಸರ್ಕಾರದ ಹೊಸ ಎನ್​ಇಪಿ ಸರಿಕಾಣುತ್ತಿಲ್ಲ. ನಾನು ಕೂಡ ಶಿಕ್ಷಣ ಸಂಸ್ಥೆ ನಡೆಸುತ್ತೇನೆ, ಟ್ರಸ್ಟಿಯಾಗಿದ್ದೇನೆ. ಆದರೂ ರಾಷ್ಟ್ರೀಯ ಶಿಕ್ಷಣ ನೀತಿ ಅರ್ಥೈಸಿಕೊಳ್ಳಲಾಗುತ್ತಿಲ್ಲ. ಎನ್​ಇಪಿ ಬಗ್ಗೆ ಸಂಸತ್, ವಿಧಾನಸಭೆಯಲ್ಲಿ ಚರ್ಚೆಯಾಗಿಲ್ಲ. ಯಾರ ಅನುಕೂಲಕ್ಕಾಗಿ ಎನ್​ಇಪಿ ಜಾರಿಗೆ ಹೊರಟಿದ್ದಾರೆ ಎಂದು ಪ್ರಶ್ನೆ ಮಾಡಿದ್ದರು.

ಎನ್​ಇಪಿ ಬಗ್ಗೆ ಶಿಕ್ಷಕರು, ಉಪನ್ಯಾಸಕರಿಗೆ ಮಾಹಿತಿಯಿಲ್ಲ. ಯಾರಿಗೂ ಮಾಹಿತಿ ನೀಡದೆ ಎನ್​ಇಪಿ ಜಾರಿಗೆ ತರಾತುರಿ ಮಾಡಲಾಗುತ್ತಿದೆ. ರಾಜ್ಯದ ಉನ್ನತ ಶಿಕ್ಷಣ ಸಚಿವರು ಆಸಕ್ತಿ ತೋರುತ್ತಿದ್ದಾರೆ. ಆದರೆ, ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ನಮ್ಮ ವಿರೋಧವಿದೆ. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಎನ್​ಇಪಿ ಜಾರಿಯಾಗಿಲ್ಲ. ಆದರೆ, ಕರ್ನಾಟಕದಲ್ಲಿ ಮಾತ್ರ ಎನ್​ಇಪಿ ಜಾರಿಗೆ ಒತ್ತಡ ಹೇರಲಾಗುತ್ತಿದೆ. ಹಿಂಬಾಗಿಲ ಮೂಲಕ ಹಿಂದಿ ಹೇರಲು ಯತ್ನಿಸುತ್ತಿದ್ದಾರೆ ಎಂದು ಹೇಳಿದ್ದರು.

RELATED TOPICS:
English summary :Ashwath Narayan

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...