Sun,May19,2024
ಕನ್ನಡ / English

ಅಜ್ಜ-ಅಜ್ಜಿಯನ್ನು ನೋಡಲು ಬೆಂಗಳೂರಿಂದ ಕೊಡಗಿಗೆ ನಡೆದೇ ಹೊರಟ ಬಾಲಕಿ | ಜನತಾ ನ್ಯೂಸ್

08 Sep 2021
2774

ಬೆಂಗಳೂರು : ಬನಶಂಕರಿ ಠಾಣೆ ವ್ಯಾಪ್ತಿಯಿಂದ ನಾಪತ್ತೆಯಾಗಿದ್ದ 15 ವರ್ಷದ ಬಾಲಕಿಯನ್ನು ಬರೋಬ್ಬರಿ 250 ಸಿಸಿ ಕ್ಯಾಮರಾ ಪರಿಶೀಲಿಸಿ ಪತ್ತೆ ಹಚ್ಚಿರುವ ಬನಶಂಕರಿ ಪೊಲೀಸರು ಕುಟುಂಬ ಸದಸ್ಯರಿಗೆ ಒಪ್ಪಿಸಿದ್ದಾರೆ.

ಸಂಬಂಧಿಕರ ಮನೆಯಲ್ಲಿ ವಾಸವಿದ್ದ ಬಾಲಕಿ, ಕೊಡಗಿನಲ್ಲಿರುವ ಅಜ್ಜ-ಅಜ್ಜಿ ನೋಡಲೆಂದು ಬೆಂಗಳೂರಿನಿಂದ ರಸ್ತೆಯಲ್ಲಿ ನಡೆದುಕೊಂಡು ಹೊರಟಿದ್ದರು. ನಡಿಗೆ ಮೂಲಕ 30 ಕಿ.ಮೀ ಕ್ರಮಿಸಿ ತಾವರೆಕೆರೆ ಬಳಿ ಮಹಿಳೆಯೊಬ್ಬರ ಮನೆಯಲ್ಲಿ ಆಶ್ರಯ ಪಡೆದಿದ್ದಳು. ಆ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಮನೆಗೆ ಹೋಗಿ ಬಾಲಕಿಯನ್ನು ಕರೆತರಲಾಗಿದೆ ಎಂದು ತಿಳಿದುಬಂದಿದೆ.

ತ್ಯಾಗರಾಜನಗರದ ನಿವಾಸಿ 15 ವರ್ಷದ ಬಾಲಕಿ ನಾಪತ್ತೆಯಾದವಳು. ಕೊಡಗಿನ ವಿರಾಜಪೇಟೆಯ ಅಯ್ಯಪ್ಪ ಕಳೆದ 9 ವರ್ಷಗಳಿಂದ ಬೆಂಗಳೂರಿನ ತ್ಯಾಗರಾಜನಗರದಲ್ಲಿ ವಾಸಿಸುತ್ತಿದ್ದಾರೆ. ಕೊಡಗಿನಲ್ಲಿರುವ ತಮ್ಮ ಮನೆಯಲ್ಲಿ ಕೆಲಸ ಮಾಡುವ ನೌಕರನ ಮೊಮ್ಮಗಳು 15 ವರ್ಷದ ಬಾಲಕಿಯನ್ನು ಓದಿಸಲು ಅಯ್ಯಪ್ಪ ಬೆಂಗಳೂರಿಗೆ ಕರೆ ತಂದಿದ್ದರು. ಬಾಲಕಿ ಯಡಿಯೂರಿನ ಸರ್ಕಾರಿ ಶಾಲೆಯಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿದ್ದಾಳೆ.

ಆ.21ರಂದು ಮಧ್ಯಾಹ್ನ ಬಾಲಕಿ ಮನೆಯಿಂದ ಏಕಾಏಕಿ ಹೊರ ಹೋಗಿದ್ದಳು. ನಂತರ ಊರಿಗೂ ತೆರಳದೆ, ಮನೆಗೂ ಹಿಂದಿರುಗದೆ ನಾಪತ್ತೆಯಾಗಿದ್ದಳು. ಅಯ್ಯಪ್ಪ ಈ ಬಗ್ಗೆ ಬನಶಂಕರಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿಶೇಷ ತಂಡ ರಚಿಸಿ ನಾಪತ್ತೆಯಾದ ಬಾಲಕಿ ಪತ್ತೆ ಕಾರ್ಯದಲ್ಲಿ ತೊಡಗಿದ್ದರು.

ರಸ್ತೆಯಲ್ಲಿ ನಡೆದು ಸುಸ್ತಾಗಿದ್ದ ಬಾಲಕಿಯನ್ನು ಮಹಿಳೆಯೊಬ್ಬರು ಮಾತನಾಡಿಸಿದ್ದರು. ನನಗೆ ತಂದೆ-ತಾಯಿ ಇಲ್ಲ. ಕೊಡಗಿನಲ್ಲಿರುವ ಅಜ್ಜ- ಅಜ್ಜಿ ಮನೆಗೆ ಹೊರಟಿದ್ದೇನೆ ಎಂದಿದ್ದ ಬಾಲಕಿ, ಕೆಲದಿನ ಆಶ್ರಯ ನೀಡುವಂತೆ ಕೋರಿದ್ದಳು. ಅದಕ್ಕೆ ಒಪ್ಪಿದ್ದ ಮಹಿಳೆ, ಬಾಲಕಿಯನ್ನು ಕರೆದೊಯ್ದು ಮನೆಯಲ್ಲಿ ಇರಿಸಿಕೊಂಡಿದ್ದರು. ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಮನೆಗೆ ಹೋಗಿ ಬಾಲಕಿಯನ್ನು ಕರೆತರಲಾಗಿದೆ.

ಬಾಲಕಿಯನ್ನು ಈ ಬಗ್ಗೆ ವಿಚಾರಿಸಿದಾಗ, ಆಕೆ ತನ್ನ ಸ್ವಂತ ಊರಾದ ಕೊಡಗಿನಲ್ಲಿರುವ ಅಜ್ಜಿ-ತಾತನನ್ನು ಕಾಣುವ ಉದ್ದೇಶದಿಂದ ವಿರಾಜಪೇಟೆಗೆ ನಡೆದುಕೊಂಡು ಹೋಗಲು ನಿರ್ಧರಿಸಿರುವುದಾಗಿ ತಿಳಿಸಿದ್ದಾಳೆ.

RELATED TOPICS:
English summary :Bangalore

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...