Fri,May10,2024
ಕನ್ನಡ / English

ರಾಜಸ್ಥಾನದ ಪಾಕ್ ಗಡಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಯುದ್ಧ ವಿಮಾನಗಳ ತುರ್ತು ಲ್ಯಾಂಡಿಂಗ್ ಫೀಲ್ಡ್ ಉದ್ಘಾಟನೆ

09 Sep 2021
2629

ಜಲೋರಿ : ಮರಭೂಮಿಯ ಮಧ್ಯೆ ರಾಷ್ಟೀಯ ಹೆದ್ದಾರಿಯಲ್ಲಿ ಭಾರತೀಯ ವಾಯುಪಡೆಯ ಯುದ್ಧ ವಿಮಾನ ಇಳಿಸುವ ಮೂಲಕ ಯುದ್ಧ ಸನ್ನದ್ಧತೆಯಲ್ಲಿ ಭಾರತ ಮತ್ತೊಂದು ಮೈಲುಗಲ್ಲು ದಾಟಿದೆ.

ಇಂದು ಮೊಟ್ಟಮೊದಲ ಭಾರಿಗೆ ಭಾರತೀಯ ವಾಯುಪಡೆಯ ಜಾಗ್ವಾರ್ ವಿಮಾನವು ರಾಜಸ್ಥಾನದ ಜಲೋರಿನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ತುರ್ತು ಲ್ಯಾಂಡಿಂಗ್ ಫೀಲ್ಡ್(ಮೈದಾನ)ದಲ್ಲಿ ಭೂ ಸ್ಪರ್ಶ ಮಾಡಿ ಯಶಸ್ವಿಯಾಗಿ ಇಳಿದಿದೆ.

ನಿಮಗೆಲ್ಲಾ ಗೊತ್ತಿದೆ ಎಂದು ದೇಶ ಸ್ವತಂತ್ರದ ಅಮೃತ ಮಹೋತ್ಸವ ಆಚರಿಸುತ್ತಿದೆ. ಅದರ ಜೊತೆಗೆ 1971ರ ಯುದ್ಧದ, ಯಾವುದರಲ್ಲಿ ನಾವು ವಿಜಯ ಸಾಧಿಸಿದ್ದೆವು, ಅದರ ಸ್ಮರಣೀಯ ವರ್ಷವನ್ನು ಕೂಡ ಈ ದೇಶ ಆಚರಿಸುತ್ತಿದೆ. ಮತ್ತು ಇಂದು ಯಾವ ಭೂಮಿ ಮೇಲೆ ನಿಂತು ನಾವು ನಮ್ಮ ವಿಚಾರ ವ್ಯಕ್ತಪಡಿಸುತ್ತಿದ್ದೇವೆ ಇದು ಕೂಡ 1971ರ ವಿಜಯದ ಸಾಕ್ಷಿಯಾಗಿದೆ. ಇಂತದರಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್ ಫೀಲ್ಡ್ ಮನದಲ್ಲಿ ಸಂತೋಷ ಹೆಚ್ಚಿಸುತ್ತದೆ. ಜೊತೆಗೆ ಸುರಕ್ಷೆಯ ದೃಷ್ಟಿಯಿಂದ ಮನದಲ್ಲಿ ಒಂದು ಆತ್ಮವಿಶ್ವಾಸ ಸೃಷ್ಟಿಸುತ್ತದೆ. ಅಂತರಾಷ್ಟ್ರೀಯ ಗಡಿಯಿಂದ ಈ ಸ್ಥಳ ಹೆಚ್ಚು ದೂರವಿಲ್ಲ. ಅಂತರಾಷ್ಟ್ರೀಯ ಗಡಿಯಿಂದ ಸ್ವಲ್ಪವೇ ದೂರದಲ್ಲಿ ಇಂತಹ ಒಂದು ಎಮರ್ಜೆನ್ಸಿ ಲ್ಯಾಂಡಿಂಗ್ ಫೀಲ್ಡ್ ಸಿದ್ಧಪಡಿಸಿರುವ ಮೂಲಕ ಭಾರತ ತನ್ನ ಏಕತೆ, ಅಖಂಡತೆ ಮತ್ತು ಸ್ವಪ್ರಭುತ್ವತೆಯ ರಕ್ಷಣೆಯಲ್ಲಿ ಸದಾ ಸಿದ್ಧವಿದೆ ಮತ್ತು ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಭಾರತದಲ್ಲಿ ಸಶಕ್ತವಾಗಿದೆ ಎಂಬ ಸಂದೇಶವನ್ನು ರವಾನಿಸಿದೆ, ಎಂದು ರಕ್ಷಣಾ ಮಂತ್ರಿ ಹೇಳಿದ್ದಾರೆ.

ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು 20 ಸ್ಥಳಗಳಲ್ಲಿ ತುರ್ತು ಲ್ಯಾಂಡಿಂಗ್ ಕ್ಷೇತ್ರಗಳನ್ನು ಸಿದ್ಧಪಡಿಸುತ್ತಿದೆ ಮತ್ತು ಅನೇಕ ಸ್ಥಳಗಳಲ್ಲಿ ಹೆಲಿಪ್ಯಾಡ್‌ಗಳನ್ನು ನಿರ್ಮಿಸುತ್ತಿದೆ. ಇದೊಂದು ದೊಡ್ಡ ಸಾಧನೆಯಾಗಿದೆ, ಎಂದು ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್ ಅವರು ತಿಳಿಸಿದ್ದಾರೆ ಅವರು ಜಲೋರಿನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ತುರ್ತು ಲ್ಯಾಂಡಿಂಗ್ ಮೈದಾನವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಈ ತುರ್ತು ಲ್ಯಾಂಡಿಂಗ್ ಫೀಲ್ಡ್ ಮತ್ತು ಮೂರು ಹೆಲಿಪ್ಯಾಡ್‌ಗಳು ಯುದ್ಧದ ಸಮಯದಲ್ಲಿ ಮಾತ್ರವಲ್ಲ, ಯಾವುದೇ ಪ್ರಾಕೃತಿಕ ವಿಕೋಪದ ಸಮಯದಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ನಡೆಸಲು ಉಪಯುಕ್ತವಾಗಲಿದೆ, ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.

ಹೊಸದಾದ ಕಲ್ಪನೆಯನ್ನು ಪ್ರಸ್ತಾಪಿಸಿದಾಗ, ಆತಂಕಗಳು ಹೊರಹೊಮ್ಮುತ್ತವೆ. ಆದರೆ, ರಕ್ಷಣಾ ಸಚಿವಾಲಯ ಮತ್ತು ವಾಯುಪಡೆಯ ಬೆಂಬಲಕ್ಕಾಗಿ ಸಂತೋಷವಾಗಿದೆ, ಇದು 3 ಕಿಮೀ ಉದ್ದದ ರಸ್ತೆ-ಕಮ್-ಏರ್ ಸ್ಟ್ರಿಪ್ ಅನ್ನು ಯಶಸ್ವಿಯಾಗಿ ಆರಂಭಿಸಲು ಕಾರಣವಾಗಿದೆ, ಎಂದು ಕಾರ್ಯಕ್ರಮದಲ್ಲಿ ಭಾಗವಹಿಸಿದ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

RELATED TOPICS:
English summary :IAF aircraft lands in emergency landing field in Rajastan Jalore

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...