ಬೆಂಗಳೂರಲ್ಲಿ ಗಣೇಶೋತ್ಸವಕ್ಕೆ ಹೇರಿದ್ದ ನಿರ್ಬಂಧಗಳಲ್ಲಿ ಸಡಿಲಿಕೆ! | ಜನತಾ ನ್ಯೂಸ್
ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಗಣೇಶೋತ್ಸವ ನಿಯಮಗಳಲ್ಲಿ ಸಡಿಲಿಕೆ ಮಾಡಲಾಗಿದೆ.
ಒಂದು ವಾರ್ಡ್ನಲ್ಲಿ ಒಂದಕ್ಕಿಂತ ಹೆಚ್ಚು ಗಣೇಶನ ಮೂರ್ತಿಗಳನ್ನು ಕೂರಿಸಲು ಅನುಮತಿ ನೀಡಲಾಗಿದೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ ರಂದೀಪ್ ತಿಳಿಸಿದ್ದಾರೆ. ಈ ಕುರಿತು ಪಾಲಿಕೆಯ ಮುಖ್ಯ ಆಯುಕ್ತರು ಜಂಟಿ ಆಯುಕ್ತರು ಸಭೆ ಮಾಡಿದ್ದು, ಸದ್ಯ ಸುಮಾರು 140 ವಾರ್ಡ್ ಗಳಲ್ಲಿ ವಾರ್ಡ್ಗೆ 1 ರಂತೆ ಗಣೇಶ ವಿಗ್ರಹ ಕೂಡಿಸಲು ಅನುಮತಿ ನೀಡಲಾಗಿದೆ.
ಒಂದೆರಡು ವಾರ್ಡ್ಗಳಲ್ಲಿ ಹೆಚ್ಚು ವಿಗ್ರಹಗಳನ್ನಿಡಲು ಅವಕಾಶ ಮಾಡಿಕೊಡುವುದಾಗಿ ಮೌಖಿಕವಾಗಿ ಹೇಳಿದ್ದಾರೆ. ಆದರೆ ಈಕುರಿತು ಅಧಿಕೃತ ಆದೇಶ ಇನ್ನೂ ಬಿಡುಗಡೆಗೊಂಡಿಲ್ಲ.
ವಿಶೇಷ ಆಯುಕ್ತರ ಮಾತಿಗೆ ಒಪ್ಪಿದ ಗಣೇಶ ಉತ್ಸವ ಸಮಿತಿ, ಮೂರ್ತಿ ತಯಾರಕರ ಧರಣಿಯನ್ನು ಹಿಂಪಡೆದಿದ್ದಾರೆ. 3 ದಿನದ ಆಚರಣೆಯ ನಿಯಮವನ್ನೂ ಬಿಬಿಎಂಪಿ ಹಿಂಪಡೆದಿದೆ ಎಂದು ತಿಳಿದುಬಂದಿದೆ.
ಗಣಪತಿ ಮೂರ್ತಿ ಎತ್ತರದ ಬಗ್ಗೆ ಕೂಡ ಬಿಬಿಎಂಪಿ ನಿಯಮ ಹಿಂಪಡೆದಿದೆ. ಕಲ್ಯಾಣಿಗಳಲ್ಲಿ ವಿಸರ್ಜನೆ ಅವಕಾಶ ಕೊಟ್ಟಿದೆ. ಗಣೇಶ ಹಬ್ಬ ಆಚರಿಸಲು ಚೌತಿ ಯಿಂದ ಚರ್ತುದರ್ಶಿವರೆಗೆಗೂ ಅವಕಾಶ ಮಾಡಿಕೊಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.