ಡೆಂಘೆ ಜ್ವರದಿಂದ 9 ವರ್ಷದ ಬಾಲಕಿ ಬಲಿ | ಜನತಾ ನ್ಯೂಸ್
ಮೈಸೂರು : ಕೆ. ಆರ್ ನಗರ ತಾಲೂಕಿನ ಬೊಮ್ಮೆನಹಳ್ಳಿ ಗ್ರಾಮದಲ್ಲಿ ಡೆಂಗ್ಯೂ ಜ್ವರಕ್ಕೆ 9 ವರ್ಷದ ಬಾಲಕಿ ಬಲಿಯಾಗಿದ್ದಾಳೆ.
ಕೆ.ಆರ್. ತಾಲೂಕಿನ ಬೊಮ್ಮೆನಹಳ್ಳಿ ಗ್ರಾಮದ ಶಿವನಂಜು ಎಂಬುವರ ಪುತ್ರಿ ಸ್ಪಂದನಾ(9) ಮೃತ ದುರ್ದೈವಿ. ಮೂರು ನಾಲ್ಕು ದಿನಗಳಿಂದ ಡೆಂಘೆ ಜ್ವರದಿಂದ ಬಳಲುತ್ತಿದ್ದ ಸ್ಪಂದನಾ, ಭೇರ್ಯ ಗ್ರಾಮದ ಖಾಸಗಿ ಕ್ಲಿನಿಕ್ನಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು.
ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಚೆಲುವಾಂಬ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಸದೆ ಮೃತಪಟ್ಟಿದ್ದಾಳೆ.
ಗ್ರಾಮದಲ್ಲಿ ಜ್ವರದಿಂದ ಮೂರು, ನಾಲ್ಕು ಮಕ್ಕಳು ಬಳಲುತ್ತಿದ್ದಾರೆ. ಆಶಾ ಕಾರ್ಯಕರ್ತೆಯರ ಮಾಹಿತಿ ಮೇರೆಗೆ ನಾವು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದೇವೆ. ಗ್ರಾಮದಲ್ಲಿ ಸ್ವಚ್ಛತೆ ಕಾಪಾಡುವಂತೆ ತಾ.ಪಂ ಇಓ ಹಾಗೂ ಸ್ಥಳೀಯ ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಮಹೇಂದ್ರಪ್ಪ ಮಾಹಿತಿ ನೀಡಿದರು.