ನನ್ನ ಸಾವಿಗೆ ಅಪ್ಪ-ಅಮ್ಮನೇ ಕಾರಣ ಎಂದು ಮಗ ಆತ್ಮಹತ್ಯೆ! | ಜನತಾ ನ್ಯೂಸ್
ಮೈಸೂರು : ನನ್ನ ಸಾವಿಗೆ ಅಪ್ಪ-ಅಮ್ಮನೇ ಕಾರಣ. ಅವರ ಚುಚ್ಚು ಮಾತಿನಿಂದ ನೊಂದಿರುವೆ. ಪದೇಪದೆ ಹಂಗಿಸುತ್ತಾರೆ ಎಂದು ಡೆತ್ನೋಟ್ ಬರೆದಿಟ್ಟ ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ನಾಗತೀಹಳ್ಳಿಯಲ್ಲಿ ಸಂಭವಿಸಿದೆ.
ಮೃತ ದುರ್ದೈವಿ ಗಿರೀಶ್(32) ಆಗಿದ್ದು, ತನ್ನ ಆತ್ಮಹತ್ಯೆಗೆ ಅಪ್ಪ ರಾಜು, ಅಮ್ಮ ದೇವಮಣಿ ಕಾರಣ ಎಂದು ಡೆತ್ ನೋಟ್ ಬರೆದಿಟ್ಟಿದ್ದಾರೆ.
ಗಿರೀಶ್ ತಂದೆ ರಾಜು ನಿವೃತ್ತ ಸರ್ಕಾರಿ ಶಾಲೆ ಶಿಕ್ಷಕರಾಗಿದ್ದರೆ, ತಾಯಿ ದೇವಮಣಿ ಈಗಲೂ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದಾರೆ. 11 ವರ್ಷದ ಹಿಂದೆ ತ್ರಿವೇಣಿ ಎಂಬಾಕೆಯನ್ನು ಗಿರೀಶ್ ಮದುವೆಯಾಗಿದ್ದ.
ಇಷ್ಟು ವರ್ಷವಾದರೂ ಸಹ ಇವರಿಗೆ ಮಕ್ಕಳಾಗಿರಲಿಲ್ಲ. ಮಕ್ಕಳಾಗಲಿಲ್ಲ ಎಂದು ಶಿಕ್ಷಕ ದಂಪತಿ ಇಬ್ಬರೂ ಮಗನಿಗೆ ಮಾನಸಿಕ ಕಿರುಕುಳ ಕೊಡುತ್ತಿದ್ದರುರಂತೆ. ಆಸ್ತಿಯನ್ನೂ ಕೊಡದೆ, ಅಪ್ಪ-ಅಮ್ಮ ಇಬ್ಬರೂ ಚೆಂದದ ಮನೆಯಲ್ಲಿ ವಾಸವಿದ್ದು, ಮಗ ಮತ್ತು ಸೊಸೆಗೆ ಕೊಟ್ಟಿಗೆ ಮನೆಯಲ್ಲಿ ವಾಸಿಸಲು ಬಿಟ್ಟಿದ್ದರಂತೆ. ಪದೇಪದೆ ಮಕ್ಕಳಾಗಿಲ್ಲ ಎಂದು ಹೆತ್ತವರೇ ನನ್ನನ್ನು ಹಂಗಿಸುತ್ತಿದ್ದರು. ಇದರಿಂದ ಮನನೊಂದು ಸಾಯುತ್ತಿರುವೆ ಎಂದು ಡೆತ್ನೋಟ್ ಬರೆದಿಟ್ಟು ಗಿರೀಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮಗನ ಸಾವಿನ ನಂತರ ತಂದೆ-ತಾಯಿಗಳು ತಲೆ ಮರೆಸಿಕೊಂಡಿದ್ದು, ಸದ್ಯ ಬಿಂಡಿಗನವಿಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.