ಕಾಂಗ್ರೆಸ್ ಮುಖಂಡನ ಸಾವಿನ ರಹಸ್ಯ ಬಯಲು, ಮೂವರು ಆರೋಪಿಗಳ ಬಂಧನ! | ಜನತಾ ನ್ಯೂಸ್
ದಾವಣಗೆರೆ : ಕಾಂಗ್ರೆಸ್ ಮುಖಂಡ ಜೈನುಲ್ಲಾ ಖಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಚನ್ನಗಿರಿ ತಾಲೂಕಿನ ಬಸವಾ ಪಟ್ಟಣ ಪೊಲೀಸರು ಬಂಧಿಸಿದ್ದಾರೆ.
ಅಮ್ಜಾದ್ ಖಾನ್(44), ಇಸ್ಮಾಯಿಲ್ ಖಾನ್ (42) ಮತ್ತು ನೂರ್ ಅಹ್ಮದ್ (36) ಬಂಧಿತರು.
ಕಾಂಗ್ರೆಸ್ ಮುಖಂಡ ಜೈನುಲ್ಲಾ ಖಾನ್ ಮೃತದುರ್ದೈವಿ. ಜೈನುಲ್ಲಾ ಖಾನ್ ಬೆಸ್ಕಾಂ ಗುತ್ತಿಗೆದಾರನಾಗಿದ್ದು, ಮಾಯಕೊಂಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷರಾಗಿದ್ದರು. ಚನ್ನಗಿರಿ ತಾಲೂಕಿನ ಬಸವಾಪಟ್ಟಣದ ನಿವಾಸಿಯಾಗಿದ್ದ ಈತನನ್ನು ಸೆ.2ರಂದು ಇದೇ ಊರಿನ ಗುಡ್ಡದಲ್ಲಿ ಉಸಿರುಗಟ್ಟಿಸಿ ಕೊಲೆ ಮಾಡಿ ಹೂತು ಹಾಕಲಾಗಿತ್ತು.
ಅಮ್ಜದ್ ಖಾನ್ ಪತ್ನಿಯ ಜತೆ ಜೈನುಲ್ಲಾ ಖಾನ್ ವಿವಾಹೇತರ ಸಂಬಂಧ ಹೊಂದಿದ್ದನಂತೆ. ಈ ವಿಷಯ ತಿಳಿದ ಆರೋಪಿ ಅಮ್ಜದ್ ಖಾನ್, ಸಹೋದರ ಇಸ್ಮಾಯಿಲ್ ಖಾನ್ ಹಾಗೂ ಸ್ನೇಹಿತ ನೂರ್ ಅಹ್ಮದ್ ಜೊತೆ ಸೇರಿ ಜೈನುಲ್ಲಾ ಖಾನ್ ಅವರನ್ನು ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಹತ್ಯೆ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಬಸವಾಪಟ್ಟಣ ಠಾಣೆ ಪೋಲಿಸರು ಬಂಧಿಸಿದ್ದಾರೆ.