ಕೈಹಿಡಿದು ಎಳೆದಾಡಿದ ಜೆಡಿಎಸ್ ಮುಖಂಡ; ಕೇಸ್ ದಾಖಲು | ಜನತಾ ನ್ಯೂಸ್
ಹುಬ್ಬಳ್ಳಿ : ಜೆಡಿಎಸ್ ಮುಖಂಡ ಮಹಿಳೆಯೋರ್ವರ ಕೈಹಿಡಿದು ಎಳೆದಾಡಿರುವ ಘಟನೆ ಸತ್ತೂರಿನ ಎಸ್ಡಿಎಂ ದಂತ ವೈದ್ಯಕೀಯ ಕಾಲೇಜು ಬಳಿ ನಡುರಸ್ತೆಯಲ್ಲಿ ನಡೆದಿದ್ದು, ಮಹಿಳೆ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.
ಜೆಡಿಎಸ್ ಮಾಜಿ ಕಾರ್ಪೊರೇಟರ್ ಶ್ರೀಕಾಂತ್ ಜಮನಾಳ ಅವರಿಂದ ಜೀವ ಬೆದರಿಕೆ ಇದೆ ಎಂದು ದೂರು ದಾಖಲಿಸಿದ್ದಾರೆ.
ನಡು ರಸ್ತೆಯಲ್ಲಿಯೇ ಅನುಮತಿ ಅತ್ತಿಗೇರಿ ಎಂಬ ಮಹಿಳೆಯನ್ನು ಮಾಜಿ ಕಾರ್ಪೊರೇಟರ್ ಎಳೆದಾಡಿದ್ದಾರೆ. ನಗರದ ಸತ್ತೂರು ಡೆಂಟಲ್ ಕಾಲೇಜು ಬಳಿ ಈ ಘಟನೆ ನಡೆದಿದೆ. ಮನೆಗೆ ನುಗ್ಗಿದ ಮಾಜಿ ಕಾರ್ಪೊರೇಟರ್ ಮಹಿಳೆಯೊಂದಿಗೆ ಅಸಭ್ಯ ವರ್ತನೆ ತೋರಿದ್ದಾರೆ.
ಪೊಲೀಸರು ಐಪಿಸಿ ಸೆಕ್ಷನ್ 354ರ ಅನ್ವಯ ಪ್ರಕರಣ ದಾಖಲಿಸಿಕೊಂಡಿದ್ದಾರೆ.
RELATED TOPICS:
English summary :Hubli