Sun,May19,2024
ಕನ್ನಡ / English

ಆಸ್ಕರ್‌ ಫೆರ್ನಾಂಡಿಸ್‌ ಒಬ್ಬ ಅಜಾತಶತ್ರು ರಾಜಕಾರಣಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ | ಜನತಾ ನ್ಯೂಸ್

14 Sep 2021
2041

ಉಡುಪಿ : ಆಸ್ಕರ್ ಒಬ್ಬ ಅಜಾತಶತ್ರು ರಾಜಕಾರಣಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೆನೆದರು.

ಉಡುಪಿ ಜಿಲ್ಲಾ ಕಾಂಗ್ರೆಸ್‌ ಭವನದಲ್ಲಿ ಆಸ್ಕರ್‌ ಫೆರ್ನಾಂಡಿಸ್‌ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದು ಮಾತನಾಡಿದ ಅವರು, ಪಕ್ಷದಲ್ಲಿನ ಪ್ರಾಮಾಣಿಕತೆ, ನಾಯಕತ್ವದಲ್ಲಿದ್ದಂತಹ ನಿಷ್ಠೆಯಿಂದಾಗಿಯೇ ಆಸ್ಕರ್‌ ಕೇಂದ್ರಮಟ್ಟದಲ್ಲಿ ನಾಯಕನಾಗಿ ಗುರುತಿಸಿಕೊಂಡವರು. ಯುವಕರಿಗೆ, ಕಿರಿಯರಿಗೆ ಗೌರವ ಕೊಡುವಂತಹ ಏಕೈಕ ರಾಜಕಾರಣಿಯಾಗಿ ಬೆಳೆದು ಬಂದವರು. ಪಕ್ಷ ಸದೃಢ ಆಗಿದ್ದಾಗ ಎಲ್ಲರೂ ಮುಂದೆ ಬಂದು ನಾಯಕತ್ವ ವಹಿಸುತ್ತಾರೆ. ಸಂಕಷ್ಟ ಕಾಲದಲ್ಲಿ ಎರಡು ಬಾರಿ ಅಧ್ಯಕ್ಷರಾಗಿ ಅವರು ಕಾರ್ಯ ನಿರ್ವಹಿಸಿದ್ದರು.

ರಾಜಕೀಯ ಜೀವನದಲ್ಲಿ ನನಗೂ ಆಸ್ಕರ್‌ ಫೆರ್ನಾಂಡಿಸ್‌ ಅವರಿಗೂ ಸುಮಾರು 42 ವರ್ಷಗಳ ನಂಟಿದೆ. ಅವರು ವಿದ್ಯಾರ್ಥಿ ಘಟಕದ ನ್ಯಾಷನಲ್‌ ಕೌನ್ಸಿಲ್‌ ಸದಸ್ಯರಾಗಿದ್ದ ಕಾಲದಿಂದಲೂ ನಾನು ಅವರ ಜತೆಗೆ ಒಡನಾಟ ಹೊಂದಿದ್ದೆ. ಅವರ ಭೇಟಿಗಾಗಿ ಆಗಾಗ ಉಡುಪಿಗೆ ಬರುತ್ತಿದ್ದೆ.

ಉಡುಪಿ ಪುರಸಭೆಯ ಕೌನ್ಸಿಲರ್‌ ಆಗಿ, ಉಡುಪಿ ಡ್ರೈವರ್ ಅಸೋಸಿಯೇಶನ್‌ ಅಧ್ಯಕ್ಷರಾಗಿ, ಹಂತ-ಹಂತವಾಗಿ ನಾಯಕನಾಗಿ ಬೆಳೆದು ಬಂದು ರಾಷ್ಟ್ರ ರಾಜಕಾರಣದಲ್ಲೂ ಸೈ ಎನಿಸಿಕೊಂಡವರು. ಬೆಂಗಳೂರು-ಮೈಸೂರು ದಶ ಪಥ ರಸ್ತೆಗೆ ಅಂಕಿತ ಹಾಕಿದ್ದೆ ಅವರು ಕಾರ್ಮಿಕ ಸಚಿವರಾಗಿದ್ದ ಕಾಲದಲ್ಲಿ ತಂದಂತಹ ಕ್ರಾಂತಿಕಾರಿ ಬದಲಾವಣೆಗಳು ಕಳೆದ ಅರವತ್ತು ವರ್ಷಗಳಲ್ಲಿ ಯಾರೂ ಕೂಡ ಯೋಚನೆ ಮಾಡಿರಲಿಕ್ಕಿಲ್ಲ. ಕಾರ್ಮಿಕರ ಮಕ್ಕಳಿಗೆ ಎಂಬಿಬಿಎಸ್‌ ಸೀಟು, ಎಲ್ಲ ಇಎಸ್‌ಐ ಆಸ್ಪತ್ರೆಗಳನ್ನು ಮೆಡಿಕಲ್‌ ಕಾಲೇಜಾಗಿ ಪರಿವರ್ತನೆ ಮಾಡಿ ಕಾರ್ಮಿಕರ ಮಕ್ಕಳನ್ನು ಮೆಡಿಕಲ್‌ ಕಾಲೇಜಿಗೆ ಉಚಿತ ಸೇರ್ಪಡೆ ಮಾಡುವ ಅವಕಾಶ ಕಲ್ಪಿಸಿದ್ದರು.

ಫೆರ್ನಾಂಡಿಸ್ ರ ರಾಜಕೀಯ ಜೀವನದಲ್ಲಿ ಒಂದು ಕಪ್ಪು ಚುಕ್ಕೆ ಇಲ್ಲದ ವ್ಯಕ್ತಿತ್ವ. ಆಸ್ಕರ್ ನಿಧನದಿಂದ ರಾಷ್ಟ್ರ ಕಾಂಗ್ರೆಸ್‍ಗೆ ನಷ್ಟ ಆಗಿದೆ. ಅಗಲಿನ ಆತ್ಮಕ್ಕೆ ಚಿರಶಾಂತಿಗಾಗಿ ಪ್ರಾರ್ಥನೆ ಮಾಡುತ್ತೇನೆ. ಆಸ್ಕರ್ ಕುಟುಂಬಕ್ಕೆ ಭಗವಂತ ಶಕ್ತಿ ನೀಡಲಿ ಎಂದು ಡಿಕೆಶಿ ಪ್ರಾರ್ಥನೆ ಮಾಡಿದರು.

RELATED TOPICS:
English summary :DK shivakumar

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...