Thu,May16,2024
ಕನ್ನಡ / English

ಅವಿವಾಹಿತ ಯುವತಿಯ ಅವಧಿಪೂರ್ವ ಪ್ರಸವ, ಡಿಎನ್ ಎ ಪರೀಕ್ಷೆಗೆ ಮುಂದಾದ ಪೊಲೀಸರು! | ಜನತಾ ನ್ಯೂಸ್

14 Sep 2021
2308

ಶಿವಮೊಗ್ಗ : ಅವಿವಾಹಿತ ಯುವತಿಯೋರ್ವಳು ಅವಧಿಪೂರ್ವ ಪ್ರಸವದ ವೇಳೆ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಹೆರಿಗೆಯಾದ ಎರಡು ಗಂಟೆಯ ಒಳಗಾಗಿ ತಾಯಿ ಮತ್ತು ಮಗು ಇಬ್ಬರೂ ಸಾವನ್ನಪ್ಪಿರುವ ಕರುಣಾಜಕನ ಘಟನೆ ಶಿವಮೊಗ್ಗದ ಮೆಗ್ಗಾನ್​ ಆಸ್ಪತ್ರೆಯಲ್ಲಿ ಸಂಭವಿಸಿದೆ.

ಶಿವಮೊಗ್ಗ ತಾಲೂಕು ಕುಂಸಿ ಗ್ರಾಮದ ಉಪ್ಪಾರ ಕೇರಿಯ ಅಶ್ವಿನಿ ಮೃತ ಯುವತಿ. ಈಕೆ ಆಯನೂರಿನಲ್ಲಿ ಓದುವಾಗ ಆಯನೂರು ಸಮೀಪದ ಗ್ರಾಮದ ಮಧುಸೂದನ್ ಎಂಬಾತನನ್ನು ಪ್ರೀತಿಸುತ್ತಿದ್ದಳು. ಮನೆಯಲ್ಲಿ ಕಡುಬಡತನ ಇದ್ದಿದ್ದರಿಂದಾಗಿ ಉದ್ಯೋಗ ಅರಸಿ ಮೈಸೂರಿಗೆ ತೆರಳಿದ್ದಳು.

ಅಲ್ಲಿ ಅಶ್ವಿನಿಗೆ ಬಸವರಾಜ್ ಎಂಬಾತನ ಪರಿಚಯವಾಗಿತ್ತು. ಈತನೊಂದಿಗೆ ಕಾಲಕ್ರಮೇಣ ಅಶ್ವಿನಿಗೆ ಪ್ರೇಮಾಂಕುರವಾಗಿತ್ತು. ಇದೇ ವೇಳೆಗೆ ಕರೊನಾ ಲಾಕ್​ಡೌನ್ ಆಗಿದ್ದರಿಂದಾಗಿ ಅಶ್ವಿನಿ ಸ್ವಗ್ರಾಮಕ್ಕೆ ಬಂದಿದ್ದಳು. ಕುಂಸಿಗೆ ಬರುವಾಗ ತನ್ನೊಂದಿಗೆ ಬಸವರಾಜನನ್ನೂ ಕರೆದುಕೊಂಡು ಬಂದಿದ್ದಳು.

ಬಸವರಾಜ್ ಬಗ್ಗೆ ಮನೆಯವರು ವಿಚಾರಿಸಿದಾಗ ಆತ ನನ್ನ ಸ್ನೇಹಿತ. ಲಾಕ್​ಡೌನ್ ಹಿನ್ನೆಲೆಯಲ್ಲಿ ನನ್ನೊಂದಿಗೆ ಬಂದಿದ್ದಾನೆ, ಕೆಲ ದಿನದಲ್ಲೇ ಮತ್ತೆ ಮೈಸೂರಿಗೆ ಹೋಗುತ್ತಾನೆ ಎಂದಿದ್ದಳು. ಆದರೆ ಮನೆಯವರ ವಿಚಾರಣೆ ಹೆಚ್ಚಾದಾಗ ಹದಿನೈದು ದಿನದಲ್ಲೇ ಪ್ರೇಯಸಿಯ ಮನೆಯಿಂದ ಯುವಕ ಬೆಂಗಳೂರಿಗೆ ತೆರಳಿದ್ದ.

ಬಸವರಾಜ್ ಮೈಸೂರಿಗೆ ತೆರಳಿದ ಕೆಲದಿನಗಳ ಬಳಿಕ ಅಶ್ವಿನಿಯ ಆರೋಗ್ಯದಲ್ಲಿ ಏರುಪೇರಾಗಲಾರಂಭಿಸಿತ್ತು. ಆಗ ಅಶ್ವಿನಿ ಆಸ್ಪತ್ರೆಗೆ ಹೋಗಿ ಬರಲಾರಂಭಿಸಿದ್ದಳು. ಇದೇ ವೇಳೆಗೆ ಅಶ್ವಿನಿ ಹೊಟ್ಟೆಯೂ ಊದಿಕೊಳ್ಳಲಾರಂಭಿಸಿತ್ತು. ಈ ಬಗ್ಗೆ ಪಾಲಕರು ವಿಚಾರಿಸಿದಾಗ ಗ್ಯಾಸ್ ಸ್ಟಿಕ್ ನಿಂದ ಹೊಟ್ಟೆ ಊದಿಕೊಂಡಿದೆ ಎಂದು ಪಾಲಕರಿಗೆ ಸುಳ್ಳು ಹೇಳಿದ್ದ ಯುವತಿ ವಿಚಾರ ಮುಚ್ಚಿಟ್ಟುಕೊಂಡಿದ್ದಳು.

ಸೆ.12ರಂದು ವಿಪರೀತ ಹೊಟ್ಟೆನೋವಿನಿಂದ ಬಳಲುತ್ತಿದ್ದ ಅಶ್ವಿನಿಯನ್ನು ಪಾಲಕರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ವೈದ್ಯರು ತಪಾಸಣೆ ಮಾಡಿದಾಗ ಆಕೆ ಗರ್ಭಿಣಿ ಎಂಬುದು ಗೊತ್ತಾಗಿದೆ.

ಇದೇ ವೇಳೆಗೆ ಆಕೆಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು ಅವಧಿಪೂರ್ವವಾಗಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಅವಧಿ ಪೂರ್ವವಾಗಿ ಮಗು ಜನಿಸಿದ್ದರಿಂದಾಗಿ ಮಗು ಬದುಕುಳಿದಿಲ್ಲ. ಮಗು ಮೃತಪಟ್ಟ ಎರಡು ಗಂಟೆ ಒಳಗಾಗಿ ಯುವತಿ ಕೂಡಾ ಮೃತಪಟ್ಟಿದ್ದಾಳೆ.

ತಾಯಿ ಹಾಗೂ ಹಸುಗೂಸು ಇಬ್ಬರೂ ಮೃತಪಡುತ್ತಿದ್ದಂತೆ ಪ್ರಕರಣ ದಾಖಲಿಸಿಕೊಂಡ ಕುಂಸಿ ಠಾಣೆ ಪೊಲೀಸರು ವಿಚಾರಣೆ ಆರಂಭಿಸಿದ್ದರು. ಈ ಪ್ರಕರಣ ಸಂಬಂಧ ಕಾನೂನು ತೊಡಕು ಉಂಟಾದಲ್ಲಿ ಡಿಎನ್​ಎ ಟೆಸ್ಟ್ ಮಾಡಿಸಿ ಮಗುವಿನ ತಂದೆ ಯಾರು? ಎಂದು ಪತ್ತೆ ಮಾಡಲು ಪೊಲೀಸರು ನಿರ್ಧರಿಸಿದ್ದಾರೆ. ಪೊಲೀಸರು ಇದೀಗ ಡಿಎನ್‌ಎ ಟೆಸ್ಟ್ ಮೂಲಕ ಮಗುವಿನ ತಂದೆ ಯಾರು ಎಂದು ಪತ್ತೆ ಹಚ್ಚಲು ಮುಂದಾಗಿದ್ದಾರೆ.

RELATED TOPICS:
English summary :Shivamogga

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

ನ್ಯೂಸ್ MORE NEWS...