Thu,May16,2024
ಕನ್ನಡ / English

ಎತ್ತಿನಹೊಳೆ ಯೋಜನೆ ಸಂಬಂಧ ಸದ್ಯದಲ್ಲೇ ಸಭೆ : ಸಿಎಂ ಬಸವರಾಜ ಬೊಮ್ಮಾಯಿ | ಜನತಾ ನ್ಯೂಸ್

14 Sep 2021
2516

ಬೆಂಗಳೂರು : ಎತ್ತಿನಹೊಳೆ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯಲ್ಲಿರುವ ಅಡೆತಡೆಗಳನ್ನು ನಿವಾರಿಸಲು ಸದ್ಯದಲ್ಲೇ ಸಭೆ ಕರೆಯುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸಭೆಯಲ್ಲಿ ತಿಳಿಸಿದರು.

ಇಂದು ಕೊರಟಗೆರೆ ಶಾಸಕ, ಮಾಜಿ ಸಚಿವ ಡಾ. ಜಿ ಪರಮೇಶ್ವರ್ ಅವರು ಎತ್ತಿನಹೊಳೆ ಯೋಜನೆಯ ಬೈರಗೊಂಡ್ಲು ಜಲಾಶಯದ ಭೂಸ್ವಾಧೀನ ಪ್ರಕ್ರಿಯೆಯ ಸಮಸ್ಯೆಗಳ ಕುರಿತು ಪ್ರಶ್ನಿಸಿದರು. ಈ ವೇಳೆ ಅವರಿಗೆ ಜಲ ಸಂಪನ್ಮೂಲ ಸಚಿವರು ನೀಡಿದ ಉತ್ತರಕ್ಕೆ ಧ್ವನಿಗೂಡಿಸಿ ಎತ್ತಿನಹೊಳೆಯಿಂದ ನೀರು ಎತ್ತಿಯೇ ತೀರುತ್ತೇವೆ ಎಂದು ಸಿಎಂ ತಿಳಿಸಿದರು.

ಪ್ರಮುಖವಾಗಿ ಭೂಸ್ವಾಧೀನ ಸಮಸ್ಯೆಯನ್ನು ಪರಿಹರಿಸಬೇಕಿದೆ. ಸಮತೋಲಿತ ಜಲಾಶಯದಲ್ಲಿ ನೀರಿನ ಸಂಗ್ರಹ ಹೆಚ್ಚಿಸಬೇಕಿದೆ. ಹೀಗಾಗಿ 12 ಸಾವಿರ ಕೋಟಿ ರೂ. ಯೋಜನೆ. 23 ಸಾವಿರ ಕೋಟಿ ರೂ.ಗೆ ಏರಿಕೆ ಯಾಗಿದೆ ಎಂದರು.

ಯೋಜನೆಯ ಉದ್ದೇಶ ಸಫಲವಾಗಬೇಕಿದ್ದರೆ, ಜಲಾಶಯಗಳ ಸಾಮರ್ಥ್ಯಯವನ್ನು ಹೆಚ್ಚಿಸದಿದ್ದರೆ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ನೀರು ಪೂರೈಕೆ ಮಾಡಲು ಸಾಧ್ಯವಾಗುವುದಿಲ್ಲ. ಸರ್ಕಾರ ಈ ಯೋಜನೆಯನ್ನು ಜಾರಿಗೊಳಿಸಲು ಸಂಕಲ್ಪ ಮಾಡಿದ್ದು, ಈ ಬಗ್ಗೆ ಯಾರಿಗೂ ಅನುಮಾನ ಬೇಡ ಎಂದು ಹೇಳಿದರು.

ಇದಕ್ಕೂ ಮುನ್ನ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಎತ್ತಿನ ಹೊಳೆ ಪ್ರದೇಶಕ್ಕೆ ತಾವು ಭೇಟಿ ನೀಡಿದ್ದು, ಕೆಲವು ಕಡೆ ಭೂಸ್ವಾಧೀನ ಸಮಸ್ಯೆಯನ್ನು ಬಗೆಹರಿಸಲಾಗಿದೆ. ಮತ್ತೆ ಕೆಲವು ಕಡೆ ಸಮಸ್ಯೆ ಬಗೆಹರಿಸಲು ಭೂಸ್ವಾಧೀನ ಅಧಿಕಾರಿಗಳಿಗೆ ಗಡವು ನೀಡಲಾಗಿದೆ. ಶೇ.90ರಷ್ಟು ಕಾಮಗಾರಿ ಮುಗಿದಿದೆ. ಇನ್ನೂ ಅನೇಕ ಸಣ್ಣಪುಟ್ಟ ಸಮಸ್ಯೆಗಳಿವೆ. ಇದನ್ನು ಪರಿಹರಿಸಲು ಈ ಭಾಗದ ಎಲ್ಲಾ ಶಾಸಕರ ಸಭೆ ಕರೆದು ಚರ್ಚೆ ಮಾಡಿ ಪ್ರಾಯೋಗಿಕವಾಗಿ ನೀರು ಹರಿಸಿ ಜನರಲ್ಲಿ ವಿಶ್ವಾಸ ಮೂಡಿಸಲಾಗುವುದು ಎಂದರು.

ಎತ್ತಿನಹೊಳೆಯಂತಹ ಮಹತ್ವಾಕಾಂಕ್ಷಿ ಕುಡಿಯುವ ನೀರಿನ ಯೋಜನೆಗೆ ಇರುವ ಅಡ್ಡಿ ಆತಂಕ ಪರಿಹರಿಸಿ ತಕ್ಷಣ ಕ್ರಮಕೈಗೊಳ್ಳಲು ಕಾರ್ಯಪ್ರವೃತ್ತರಾಗಿದ್ದೇವೆ. ಆದಷ್ಟು ಬೇಗ ಫಲಿತಾಂಶ ನಿಮ್ಮ ಕಣ್ಣಿಗೆ ಕಾಣಿಸಲಿದೆ ಎಂದು ಹೇಳಿದರು.ಭೂಸ್ವಾಧೀನ ಪ್ರಕ್ರಿಯೆಗೆ 195 ಕೋಟಿ ರೂ. ಹಣ ಒದಗಿಸಲಾಗಿದೆ.

ಆದರೂ ಕೆಲ ಅಧಿಕಾರಿಗಳು ರೈತರಿಗೆ ಹಣವಿಲ್ಲವೆಂದು ಹೇಳುತ್ತಿದ್ದರು. ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡ ಪ್ರಕರಣಗಳಲ್ಲಿ ರೈತರಿಗೆ ಹಣಪಾವತಿ ಮಾಡುವುದು ವಿಳಂಬವಾದಲ್ಲಿ ಅಧಿಕಾರಿಗಳನ್ನೇ ನೇರವಾಗಿ ಹೊಣೆಗಾರರನ್ನಾಗಿಸಲಾಗುವುದು ಎಂದು ಸಚಿವರು ವಿವರಿಸಿದರು.

RELATED TOPICS:
English summary :Basavaraj bommai

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

ನ್ಯೂಸ್ MORE NEWS...