ದೇವಾಲಯ ದ್ವಂಸ : ಮೈಸೂರು ಡಿಸಿ ಮತ್ತು ತಹಶೀಲ್ದಾರ್ಗಳಿಗೆ ಶೋಕಾಸ್ ನೋಟಿಸ್ - ಸಿಎಂ ಬೊಮ್ಮಾಯಿ | ಜನತಾ ನ್ಯೂಸ್
ಮೈಸೂರು : ಜಿಲ್ಲೆಯ ದೇವಸ್ಥಾನಗಳನ್ನು ನೆಲಸಮ ಮಾಡುವ ದುಸ್ಸಾಹಸಕ್ಕೆ ಮುಂದಾದ ಮೈಸೂರು ಡಿಸಿ ಮತ್ತು ತಹಶೀಲ್ದಾರ್ ವಿರುದ್ಧ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರ ನೇತ್ರತ್ವದ ಸರ್ಕಾರ ಕೊನೆಗೂ ಮುಂದಾಗಿದೆ.
ಜಿಲ್ಲೆಯ ದೇವಸ್ಥಾನಗಳನ್ನು ನೆಲಸಮ ಮಾಡುವ ಮೊದಲು ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದ ಕಾರಣಕ್ಕಾಗಿ ಮೈಸೂರು ಡಿಸಿ ಮತ್ತು ತಹಶೀಲ್ದಾರ್ಗಳಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಸದನದ ಅಧಿವೇಶನದಲ್ಲಿ ಈ ಕುರಿತು ವಿವರಗಳನ್ನು ನೀಡಲಾಗುವುದು, ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿರುವುದಾಗಿ ಎಏನ್ಐ ವರದಿ ಮಾಡಿದೆ.
ಇದಲ್ಲದೇ, ರಾಜ್ಯದಾದ್ಯಂತ ದೇವಸ್ಥಾನಗಳನ್ನು ಕೆಡವಲು ಆತುರದಲ್ಲಿ ನಿರ್ಧಾರ ತೆಗೆದುಕೊಳ್ಳದಂತೆ ನಿರ್ದೇಶನ ನೀಡಲಾಗಿದೆ. ಸುಪ್ರೀಂ ಕೋರ್ಟ್ ಆದೇಶದ ವಿವರವಾದ ಅಧ್ಯಯನ ಮತ್ತು ಕ್ಯಾಬಿನೆಟ್ ಸಭೆಯಲ್ಲಿ ಚರ್ಚಿಸಿದ ನಂತರ ಸ್ಪಷ್ಟ ಮಾರ್ಗಸೂಚಿಗಳನ್ನು ನೀಡಲಾಗುವುದು, ಎಂದು ಸಿಎಂ ತಿಳಿಸಿದ್ದಾರೆ ಎನ್ನಲಾಗಿದೆ.
ಮೈಸೂರಿನಲ್ಲಿ ನಸುಕಿನ ಜಾವದಲ್ಲಿ ಕಳ್ಳರಂತೆ ಕಾರ್ಯಾಚರಣೆ ನಡೆಸಿದ ಜಿಲ್ಲಾಡಳಿತ ಹಿಂದೂ ದೇವಾಲಯಗಳನ್ನು ಹೇಳದೇ/ಕೇಳದೇ ದರೆಗುಳಿಸುವ ದುಸ್ಸಾಹಸಕ್ಕೆ ಕೈಹಾಕಿತ್ತು. ಈ ಕಾರ್ಯಾಚರಣೆ ಬೆನ್ನಲ್ಲೇ ಆಡಳಿತರೂಡ ಬಿಜೆಪಿ ಸಾಕಷ್ಟು ಅಕ್ರೋಶ ಎದುರಿಸುವಂತಾಗಿತ್ತು. ಅಲ್ಲದೇ, ಪ್ರತಿಪಕ್ಷದ ನಾಯಕರಾದ ಸಿದ್ದರಾಮಯ್ಯ ಹಾಗೂ ಎಚ್.ಡಿ.ಕುಮಾರಸ್ವಾಮಿ ಯವರು ಹಿಂದೂ ಪರಎಂದು ಹೇಳಿಕೊಳ್ಳುವ ಬಿಜೆಪಿ ಸರ್ಕಾರವನ್ನು ತೀವ್ರ ತರಾಟೆ ತೆಗೆದುಕೊಂಡಿತ್ತು.