ಕೋವಿಡ್ ವರ್ಷ ಎಂದು ಘೋಷಿಸಿ, ಬಡವರ ಹೊಟ್ಟೆಗೆ ಊಟ ಕೊಡುವ ಕೆಲಸ ಮಾಡಿ: ಕುಮಾರಸ್ವಾಮಿ | ಜನತಾ ನ್ಯೂಸ್
ಬೆಂಗಳೂರು : ಅಮೃತ ಯೋಜನೆ ಘೋಷಣೆ ಮಾಡಿದ್ದೀರಿ. ಅದನ್ನು ನಿಲ್ಲಿಸಿ, ಬಡವರ ಹೊಟ್ಟೆಗೆ ಊಟ ಕೊಡುವ ಕೆಲಸ ಮಾಡಿ. ಬಡವರಿಗೆ ಯಾವುದೇ ಕಂಪನಿಗಳು ನೆರವು ನೀಡುವುದಿಲ್ಲ. ಸಣ್ಣಪುಟ್ಟ ಕೈಗಾರಿಕೆಗಳಿಗೆ ಆದ್ಯತೆ ನೀಡಿದರೆ, ಅವರು ಲಕ್ಷಾಂತರ ಜನರಿಗೆ ಉದ್ಯೋಗ ನೀಡುತ್ತಾರೆ. ಕೋವಿಡ್ ವರ್ಷ ಎಂದು ಘೋಷಿಸಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದರು.
ವಿಧಾನಸಭೆಯಲ್ಲಿ ನಿಯಮ 69ರ ಅಡಿ ಸಾರ್ವಜನಿಕ ಮಹತ್ವದ ವಿಷಯ ಕುರಿತ ಮುಂದುವರಿದ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ತೈಲ ಹಾಗೂ ಅಡುಗೆ ಅನಿಲ ಮತ್ತಿತರ ದಿನಬಳಕೆಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಉರಿವ ಮನೆಯಲ್ಲಿ ಗಳ ಹಿರಿಯುವ ಕೆಲಸವಾಗುತ್ತಿದೆ. ಇದರಿಂದ ಎಷ್ಟು ಹಿರಿಯಬಹುದು ಎಂಬ ಉದ್ದೇಶದಿಂದ ಹೆಚ್ಚಿನ ತೆರಿಗೆ ವಿಧಿಸಿ ವಸೂಲು ಮಾಡಲಾಗುತ್ತಿದೆ ಎಂದರು.
ಕಷ್ಟದಲ್ಲಿರುವವರ ನೆರವಿಗೆ ಬರುವುದು ಸರ್ಕಾರದ ಕೆಲಸ. ಆದರೆ ಬೆಲೆ ಏರಿಕೆ ವಿಷಯದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅತ್ಯಂತ ನಿರ್ದಯವಾಗಿ ವರ್ತಿಸುತ್ತಿವೆ. ಇದನ್ನು ಯಾರೂ ಒಪ್ಪಲು ಸಾಧ್ಯವಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರೆಡು ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕು ಎಂದು ಆಗ್ರಹಿಸಿದರು.
ಈ ಬಿಕ್ಕಟ್ಟನ್ನು ಸರಕಾರ ಉಪೇಕ್ಷೆ ಮಾಡಬಾರದು. ಈ ವರ್ಷವನ್ನು "ಕೋವಿಡ್ ವರ್ಷ" ಎಂದು ಘೋಷಣೆ ಮಾಡಿ. ಕಷ್ಟದಲ್ಲಿರುವ 55 ಲಕ್ಷ ಬಡ ಕುಟುಂಬಗಳಿಗೆ ನೆರವಾಗಿ. ಕೊನೆಯ ಪಕ್ಷ ಪ್ರತಿ ಕುಟುಂಬಕ್ಕೆ 25,000 ರೂ. ಧನ ಸಹಾಯ ಮಾಡಿ. ಅಗತ್ಯಬಿದ್ದರೆ ಈ ವರ್ಷ ಎಲ್ಲ ಅಭಿವೃದ್ಧಿ ಕೆಲಸಗಳನ್ನು ನಿಲ್ಲಿಸಿ.
ಕೇಂದ್ರ ಮತ್ತು ರಾಜ್ಯ ಸರಕಾರಗಳಿಂದ ಇಂಧನ ಬೆಲೆ ಏರಿಕೆ ಹಾಗೂ ಕೋವಿಡ್ ನಿಂದ ತತ್ತರಿಸಿರುವ ಜನರಿಗೆ ಬದುಕು ಕಟ್ಟಲು ಒಂದು ಬಾರಿಗೆ ಅನ್ವಯವಾಗುವಂತೆ 55 ಲಕ್ಷ ಕುಟುಂಬಗಳಿಗೆ ತಲಾ 25,000 ರೂ. ಪರಿಹಾರ ನೀಡುವಂತೆ ಅವರು ಆಗ್ರಹಪಡಿಸಿದ್ದಾರೆ.
ಈ ಬೆಲೆ ಏರಿಕೆಯನ್ನೂ ಯಾರೂ ಒಪ್ಪಲು ಸಾಧ್ಯವೇ ಇಲ್ಲ. ಇದು ಅತ್ಯಂತ ನಿರ್ದಯವಾದ ಕೆಲಸ. ಕಷ್ಟದಲ್ಲಿರುವ ಜನರ ನೆರವಿಗೆ ಧಾವಿಸುವುದು ಸರಕಾರದ ಕೆಲಸ. ಕೂಡಲೇ ಕೇಂದ್ರ ಮತ್ತು ರಾಜ್ಯ ಸರಕಾರಗಳು ಎಚ್ಚೆತ್ತುಕೊಳ್ಳಬೇಕು.
ಸರಕಾರಕ್ಕೆ ಆದಾಯವೂ ಮುಖ್ಯ, ನಿಜ. ಅದೇ ರೀತಿ ಜನರ ಕಲ್ಯಾಣವೂ ಮುಖ್ಯ. ಹಾಗಂತ ಮನಸೋ ಇಚ್ಛೆ ತೆರಿಗೆ ಹಾಕುವುದಲ್ಲ. ಜನರಿಗೆ ಬದುಕೇ ದುಸ್ಥರವಾಗಿದೆ. ಎರಡು ಹೊತ್ತು ಊಟಕ್ಕೂ ಕಷ್ಟವಾಗಿದೆ. ಇಂಥ ತೀವ್ರ ಸಂಕಷ್ಟದ ಸಮಯದಲ್ಲಿ ಜನರ ಮೇಲೆ ಬೆಲೆ ಏರಿಕೆ ಪ್ರಹಾರ ಮತ್ತು ತರಿಗೆ ಪ್ರಹಾರ ನಡೆಸುವುದು ಎಷ್ಟು ಸರಿ?
ಯಾವುದೇ ಸರ್ಕಾರಕ್ಕೆ ಆದಾಯ ಮುಖ್ಯ.ಹಾಗೆಯೇ ಜನ ಕಲ್ಯಾಣವೂ ಮುಖ್ಯ. ಹಾಗೆಂದು ಮನಸ್ಸಿಗೆ ಬಂದಂತೆ ತೆರಿಗೆ ಹಾಕುವುದು ಸರಿಯಲ್ಲ. ಜನರ ಬದುಕು ದುಸ್ತರವಾಗಿದೆ.ಎರಡು ಹೊತ್ತು ಊಟಕ್ಕೂ ಕಷ್ಟವಾಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಬೆಲೆ ಏರಿಕೆ ಮತ್ತು ತೆರಿಗೆ ಪ್ರಹಾರ ಎಷ್ಟು ಸರಿ ಎಂದು ಪ್ರಶ್ನಿಸಿದರು.