ರಸ್ತೆ ಗುಂಡಿ ತಪ್ಪಿಸಲು ಹೋಗಿ ಯುವಕನೋರ್ವ ಮೃತ! | ಜನತಾ ನ್ಯೂಸ್
ಬೆಂಗಳೂರು : ರಸ್ತೆ ಗುಂಡಿ ತಪ್ಪಿಸಲು ಹೋಗಿ ಯುವಕನೋರ್ವ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ನಗರದ ರಾಜ್ ಕುಮಾರ್ ಸಮಾಧಿ ರಸ್ತೆ ಬಳಿ ನಡೆದಿದೆ.
ಶಿರಸಿ ಮೂಲದ ಮನೋಜ್(28) ಮೃತ ದುರ್ದೈವಿ. ಮನೋಜ್ ಖಾಸಗಿ ಕಂಪನಿಯ ಉದ್ಯೋಗಿಯಾಗಿದ್ದು, ಕೆಲಸ ಮುಗಿಸಿಕೊಂಡು ಮನೆಗೆ ವಾಪಸ್ಸಾಗುತ್ತಿದ್ದಾಗ ರಾಜ್ ಕುಮಾರ್ ಸಮಾಧಿ ರಸ್ತೆಯಲ್ಲಿ ಗುಂಡಿ ತಪ್ಪಿಸಲು ಹೋಗಿ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಹಿಂಬದಿಯಿಂದ ಬಂದ ಬೈಕ್ ಡಿಕ್ಕಿಯಾಗಿದ್ದು, ಮನೋಜ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
English summary :Bangalore